AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ಸಿ ನಂಗೇ ಕೊಡಿ ಎಂದು ಬಿಗ್ ಬಾಸ್ ಬಳಿ ಹಠ ಹಿಡಿದ ಅಶ್ವಿನಿ; ಇದೆಂಥಾ ಲಾಜಿಕ್?

ಬಿಗ್ ಬಾಸ್ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅವರ ನಡೆ ಈಗ ಚರ್ಚೆ ಹುಟ್ಟುಹಾಕಿದೆ. ಧನುಶ್ ಎದುರು ಸೋತ ಬಳಿಕ, ನಿಯಮ ಪಾಲನೆಯಲ್ಲಿ ಉಂಟಾದ ದೋಷವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಅಶ್ವಿನಿ ಪ್ರಯತ್ನಿಸಿದರು. ಧನುಶ್ ಬಳಿ ಕ್ಯಾಪ್ಟನ್ಸಿಗಾಗಿ ಮನವಿ ಮಾಡಿದ್ದು, 'ಸಂತ್ರಸ್ತೆ ಕಾರ್ಡ್' ಆಡಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ.

ಕ್ಯಾಪ್ಟನ್ಸಿ ನಂಗೇ ಕೊಡಿ ಎಂದು ಬಿಗ್ ಬಾಸ್ ಬಳಿ ಹಠ ಹಿಡಿದ ಅಶ್ವಿನಿ; ಇದೆಂಥಾ ಲಾಜಿಕ್?
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Jan 03, 2026 | 7:27 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಅವರು ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದರು. ಆದರೆ, ಧನುಷ್ ಎದುರು ಗೆಲ್ಲಲು ಅವರಿಗೆ ಸಾಧ್ಯವಾಗಲೇ ಇಲ್ಲ. ಈಗ ಅಶ್ವಿನಿ ಗೌಡ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಅವರು ಆಟದಲ್ಲಿ ಉಂಟಾದ ತೊಂದರೆಯನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದರು. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯಪಟ್ಟಿದ್ದಾರೆ..

ಈ ವಾರ ಅಶ್ವಿನಿ ಗೌಡಗೆ ಅದೃಷ್ಟ ಒಲಿದಿತ್ತು. ಅವರು ಗಿಲ್ಲಿ ಸಹಾಯದಿಂದ ನೇರವಾಗಿ ಕ್ಯಾಪ್ಟನ್ಸಿ ರೇಸ್​​ಗೆ ಆಯ್ಕೆ ಆದರು. ಗಿಲ್ಲಿ ಕ್ಯಾಪ್ಟನ್ ಆಗಿದ್ದರಿಂದ ಅವರಿಗೂ ಈ ಅವಕಾಶ ಸಿಕ್ಕಿತು. ನಂತರ ಆಟ ಆಡಿ ರಾಶಿಕಾ ಹಾಗೂ ಧನುಶ್ ಕ್ಯಾಪ್ಟನ್ಸಿ ರೇಸ್​ಗೆ ಅರ್ಹತೆ ಪಡೆದರು. ಆ ಬಳಿಕ ಜೋಡಿ ಮಾಡಿ ಆಟ ಆಡಿಸಲಾಯಿತು.

ಧನುಶ್ ಹಾಗೂ ಅಶ್ವಿನಿ ಒಂದು ಜೋಡಿ, ರಾಶಿಕಾ ಹಾಗೂ ಗಿಲ್ಲಿ ಒಂದು ಜೋಡಿ. ಅಶ್ವಿನಿ ತಂಡದಲ್ಲಿ ಇದ್ದ ಧನುಶ್ ಉತ್ತಮವಾಗಿ ಆಡಿದ್ದರಿಂದ ಅವರ ತಂಡ ಗೆದ್ದಿತು. ಧನುಶ್ ಹಾಗೂ ಅಶ್ವಿನಿ ಅಂತಿಮವಾಗಿ ಕೊನೆಯ ಹಂತದ ಕ್ಯಾಪ್ಟನ್ಸಿ ರೇಸ್​ಗೆ ಆಯ್ಕೆ ಆದರು. ಇಬ್ಬರ ಮಧ್ಯೆ ಪಜಲ್ ಟಾಸ್ಕ್ ನಡೆಯುವಾಗ ಉಸ್ತುವಾರಿ ಮಾಡಿದ ತಪ್ಪಿನಿಂದ ನಿಯಮ ಪಾಲನೆ ಆಗಿಲ್ಲ. ಇದನ್ನು ಗಮನಿಸಿದ ಬಿಗ್ ಬಾಸ್ ಆಟ ರದ್ದು ಮಾಡಿ, ವೋಟಿಂಗ್​ಗೆ ಅವಕಾಶ ಕೊಟ್ಟರು. ಧನುಶ್​ಗೆ ಬಹುಮತದ ವೋಟ್ ಬಂದು ವಿನ್ ಆದರು.

ಆ ಬಳಿಕ ಅಲ್ಲಿ ನಡೆದಿದ್ದೇ ಬೇರೆ. ಅಶ್ವಿನಿ ಅವರು ಧನುಶ್ ಬಳಿ ಬಂದು ಒಂದಷ್ಟು ವಿಷಯಗಳನ್ನು ಹೇಳಿದರು. ‘ನೀವು ನನ್ನಿಂದ ಕ್ಯಾಪ್ಟನ್ಸಿ ಕಿತ್ತುಕೊಂಡ್ರಿ, ನಂಗೆ ಅನ್ಯಾಯ ಆಗಿದೆ, ನೀವು ನನಗೆ ಕ್ಯಾಪ್ಟನ್ಸಿ ಕೊಡ್ತೀನಿ ಎಂದು ಹೇಳಬಹುದಿತ್ತು’ ಎಂದೆಲ್ಲ ಹೇಳಿದ್ದಾರೆ. ಶತಾಯ ಗತಾಯ ಕ್ಯಾಪ್ಟನ್ ಆಗಲೇಬೇಕು ಎಂದು ಅವರು ತಾವು ಸಂತ್ರಸ್ತೆ ಎಂಬ ಕಾರ್ಡ್ ಪ್ಲೇ ಮಾಡಿದ್ದಾರೆ. ಬಿಗ್ ಬಾಸ್ ಬಳಿ ಕ್ಯಾಪ್ಟನ್ಸಿ ಟಾಸ್ಕ್ ನನಗೆ ಕೊಡಿ ಎಂದು ಹಠ ಹಿಡಿದರು.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ‘ಅಶ್ವಿನಿ ಗೌಡ ಸೋಲಬೇಕು ಅಂತ ಬಯಸುವವರೇ ಜಾಸ್ತಿ ಜನ ಇದ್ದಾರೆ’

ಧನುಶ್ ಉದ್ದೇಶ ಪೂರ್ವಕವಾಗಿ ಮಾಡಿದ ತಪ್ಪು ಇದಲ್ಲ. ಹಾಗಿದ್ದಿದ್ದರೆ ಬಿಗ್ ಬಾಸ್ ಈ ಬಗ್ಗೆ ಘೋಷಣೆ ಮಾಡುತ್ತಿದ್ದರು. ಉಸ್ತುವಾರಿಗಳ ಕಣ್ತಪ್ಪಿನಿಂದ ಆದ ಮಿಸ್ಟೇಕ್ ಇದು. ಹೀಗಿರುವಾಗ ಕ್ಯಾಪ್ಟನ್ಸಿ ತಮಗೆ ಬೇಕು ಎಂದು ಕೇಳೋದು ಎಷ್ಟು ಸರಿ ಎಂಬುದು ಅನೇಕರ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:25 am, Sat, 3 January 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಸಾವಿನ ಕೊನೆ ಗಳಿಗೆಯಲ್ಲಿ ಬಾಯಿಗೆ ಗಂಗಾಜಲ ಯಾಕೆ ಬಿಡ್ತಾರೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ