AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ಟು ಬಿಡದೆ ಕಾಡಿದ ತಪ್ಪಿತಸ್ಥ ಭಾವನೆ; ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ದೊಡ್ಡ ಜಗಳವಾಗಿದೆ. ಗಿಲ್ಲಿಯವರ ಮಾತಿನಿಂದ ಅಶ್ವಿನಿ ಗೌಡ ಮನನೊಂದು ಅತ್ತಿದ್ದಾರೆ. ನಂತರ, ಜಾನ್ವಿ ತಿಳುವಳಿಕೆ ಹೇಳಿದಾಗ ಗಿಲ್ಲಿ ತಮ್ಮ ತಪ್ಪನ್ನು ಅರಿತು, ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ. ಈ ಕ್ಷಮಾಪಣೆ ರಘು ಅವರಿಗೆ ಅಚ್ಚರಿ ಮೂಡಿಸಿದೆ.

ಬಿಟ್ಟು ಬಿಡದೆ ಕಾಡಿದ ತಪ್ಪಿತಸ್ಥ ಭಾವನೆ; ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
|

Updated on: Nov 22, 2025 | 7:03 AM

Share

ಬಿಗ್ ಬಾಸ್​ನಲ್ಲಿ (Bigg Boss) ಅಶ್ವಿನಿ ಗೌಡ vs ಗಿಲ್ಲಿ ಎಂಬಂತಾಗಿದೆ. ಯಾವುದೇ ಟಾಸ್ಕ್ ನೀಡಲಿ, ಮನೆಯಲ್ಲಿ ಯಾವುದಾದರೂ ವಿಷಯ ಚರ್ಚೆ ಆಗುತ್ತಿರಲಿ, ಗಿಲ್ಲಿ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿಯೇ ಆಗುತ್ತದೆ. ಇಬ್ಬರು ಎದುರು ಬದುರಾದಾಗ ನಗುತ್ತಾ ಮಾತನಾಡಿದ ದಾಖಲೆಯೇ ಇಲ್ಲ ಎಂದರೂ ತಪ್ಪಾಗಲಾರದು. ಇಬ್ಬರೂ ಹಿಡಿದ ಹಠ ಬಿಡೋದಿಲ್ಲ. ಹೀಗಿರುವಾಗಲೇ ಗಿಲ್ಲಿ ಅವರು ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಕ್ಯಾಪ್ಟನ್ಸಿ ರೇಸ್​ನಲ್ಲಿ ಅಭಿಷೇಕ್ ಹಾಗೂ ಅಶ್ವಿನಿ ಗೌಡ ಇದ್ದರು. ಇಬ್ಬರೂ ಸರದಿಯಲ್ಲಿ ಬಂದು ಕೂರಬೇಕು. ಹೀಗೆ ಕೂತಾಗ ಮನಸ್ಸಿನಲ್ಲೇ ಲೆಕ್ಕ ಹಾಕಿ 12 ನಿಮಿಷ ಆದ ಬಳಿಕ ಗಂಟೆ ಬಾರಿಸಬೇಕು. 12 ನಿಮಿಷಕ್ಕೆ ಯಾರು ಹತ್ತಿರವಿದ್ದಾರೋ ಅವರು ವಿನ್ ಆದಂತೆ. ಈ ಸಂದರ್ಭದಲ್ಲಿ ಅಶ್ವಿನಿ ಅವರ ಲೆಕ್ಕಾಚಾರ ತಪ್ಪಿಸಲು ಅವಕಾಶ ಇತ್ತು. ಗಿಲ್ಲಿ ಅವರು ಹೋಗಿ ಅಶ್ವಿನಿ ಅವರನ್ನು ಟೀಕೆ ಮಾಡಲು ಆರಂಭಿಸಿದರು. ಅಲ್ಲಿ ಆಡಿದ ಮಾತುಗಳಲ್ಲಿ ಕೆಲವು ಮಿತಿಮೀರಿತ್ತು. ಇದು ಅಶ್ವಿನಿ ಗೌಡ ಅವರಿಗೆ ಬೇಸರ ಮೂಡಿಸಿದೆ.

ಇದಾದ ಬಳಿಕ ಅಶ್ವಿನಿ ಗೌಡ ಅವರು ರೂಂನಲ್ಲಿ ಮಲಗಿ ಅತ್ತಿದ್ದಾರೆ. ಈ ವಿಚಾರದಲ್ಲಿ ಜಾನ್ವಿ ಅವರು ಗಿಲ್ಲಿ ಜೊತೆ ಮಾತನಾಡಿದರು. ಅಶ್ವಿನಿ ಗೌಡ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ ಎಂದು ಗಿಲ್ಲಿಗೆ ಹೇಳಿದರು. ‘ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು. ಅದಕ್ಕೆ ಈ ರೀತಿ ಮಾಡೋದು ಸರಿಯಲ್ಲ, ಛೇ’ ಎಂದರು ಗಿಲ್ಲಿ. ಅವರಿಗೆ ತಪ್ಪಿತಸ್ಥ ಭಾವನೆ ಕಾಡಿದೆ. ಆ ಬಳಿಕ ಅಶ್ವಿನಿ ಅವರು ಇದ್ದಲ್ಲೇ ತೆರಳಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ರೇಜಿಗೆ ಹುಟ್ಟಿಸಿದ ಅಶ್ವಿನಿ ಗೌಡ-ಜಾನ್ವಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

‘ಟಾಸ್ಕ್​ನಲ್ಲಿ ನನ್ನಿಂದ ಮನಸ್ಸಿಗೆ ನೋವಾದರೆ ಕ್ಷಮಿಸಿ. ದಯವಿಟ್ಟು ಬೇಸರ ಮಾಡಿಕೊಳ್ಳಬೇಡಿ. ಗೇಮ್, ಅದನ್ನು ಗೇಮ್ ಆಗಿ ತೆಗೆದುಕೊಳ್ಳಿ. ನನ್ನ ಮನಸ್ಸಿಗೂ ನೋವಾಗುತ್ತದೆ’ ಎಂದರು ಗಿಲ್ಲಿ. ಅವರು ಕ್ಷಮೆ ಕೇಳಿದ ವಿಚಾರ ರಘು ಅವರಿಗೆ ಶಾಕ್ ತಂದಿದೆ. ಇತ್ತೀಚೆಗೆ ರಘು ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆದಾಗ, ‘ರಘು ಅವರೇ ಕ್ಷಮೆ ಕೇಳಬೇಡಿ’ ಎಂದಿದ್ದರು ಗಿಲ್ಲಿ. ಈಗ ಗಿಲ್ಲಿಯೇ ಈ ರೀತಿ ಮಾಡಿದ್ದು ರಘು ಅವರಿಗೆ ಅಚ್ಚರಿ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ