AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹೇಳಿದ್ದೇ ಹೌದಾದ್ರೆ ಬಿಗ್ ಬಾಸ್​ನಿಂದ ಹೋಗ್ತೀನಿ ಎಂದ ಅಶ್ವಿನಿ; ವಿಟಿ ತೋರಿಸಿದಮೇಲೆ ಗಪ್ ಚುಪ್

ಬಿಗ್ ಬಾಸ್ ಮನೆಯಲ್ಲಿ ಲೆಟರ್ ಬಂದಿತ್ತು. ರಾಶಿಕಾ ಹಾಗೂ ರಕ್ಷಿತಾ ಮಧ್ಯೆ ಒಬ್ಬರಿಗೆ ಈ ಲೆಟರ್ ಸೇರಬೇಕಿತ್ತು. ಈ ಲೆಟರ್ ಯಾರಿಗೆ ನೀಡಬೇಕು ಎಂಬ ವಿಚಾರ ಬಂದಾಗ ಅಶ್ವಿನಿ ಗೌಡ ಅವರು ವೈಯಕ್ತಿಕವಾಗಿ ತೆಗೆದುಕೊಂಡು, ರಕ್ಷಿತಾಗೆ ಲೆಟರ್ ಸಿಗಲೇಬಾರದು ಎಂದು ವಾದಿಸಿದ್ದರು. ಆದರೆ, ಇದನ್ನು ಅಶ್ವಿನಿ ಅವರು ಒಪ್ಪಲೇ ಇಲ್ಲ.

ನಾನು ಹೇಳಿದ್ದೇ ಹೌದಾದ್ರೆ ಬಿಗ್ ಬಾಸ್​ನಿಂದ ಹೋಗ್ತೀನಿ ಎಂದ ಅಶ್ವಿನಿ; ವಿಟಿ ತೋರಿಸಿದಮೇಲೆ ಗಪ್ ಚುಪ್
Ashwini - Sudeep
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 09, 2025 | 9:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಈ ವಾರದ ವೀಕೆಂಡ್ ಎಪಿಸೋಡ್​ನಲ್ಲಿ ಸುದೀಪ್ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದರು ಮತ್ತು ಪ್ರತಿ ವಿಷಯದಲ್ಲಿ ಅಶ್ವಿನಿ ಗೌಡ ಅವರು ಇದ್ದೇ ಇರುತ್ತಿದ್ದರು. ಅಶ್ವಿನಿ ಗೌಡ ಅವರಿಗೆ ಪಾಠ ಹೇಳುವಾಗ ಸುದೀಪ್ ಅವರು ಸುಸ್ತಾಗಿ ಹೋದರು. ಈ ವೇಳೆ ಅಶ್ವಿನಿ ಗೌಡ ಅವರು ತಾವು ಹೇಳಿದ್ದೊಂದನ್ನು ಹೇಳೇ ಇಲ್ಲ ಎಂದು ವಾದಿಸುತ್ತಾ ಬಂದರು. ಆಗ ಸುದೀಪ್ ವಿಟಿ ತೋರಿಸಿದರು. ಆ ಬಳಿಕ ಅಶ್ವಿನಿ ಗಪ್ ಚುಪ್ ಆದರು.

ಬಿಗ್ ಬಾಸ್ ಮನೆಯಲ್ಲಿ ಲೆಟರ್ ಬಂದಿತ್ತು. ರಾಶಿಕಾ ಹಾಗೂ ರಕ್ಷಿತಾ ಮಧ್ಯೆ ಒಬ್ಬರಿಗೆ ಈ ಲೆಟರ್ ಸೇರಬೇಕಿತ್ತು. ಈ ಲೆಟರ್ ಯಾರಿಗೆ ನೀಡಬೇಕು ಎಂಬ ವಿಚಾರ ಬಂದಾಗ ಅಶ್ವಿನಿ ಗೌಡ ಅವರು ವೈಯಕ್ತಿಕವಾಗಿ ತೆಗೆದುಕೊಂಡು, ರಕ್ಷಿತಾಗೆ ಲೆಟರ್ ಸಿಗಲೇಬಾರದು ಎಂದು ವಾದಿಸಿದ್ದರು. ಆದರೆ, ಇದನ್ನು ಅಶ್ವಿನಿ ಅವರು ಒಪ್ಪಲೇ ಇಲ್ಲ. ಈ ವಿಚಾರವನ್ನು ಸೂರಜ್ ಪ್ರಸ್ತಾಪಿಸಿದರು.

‘ನನ್ಯ ವ್ಯಕ್ತಿತ್ವಕ್ಕೆ ರಕ್ಷಿತಾ ಮಸಿ ಬಳಿದಿದ್ದಾಳೆ. ಹೀಗಾಗಿ, ಅವಳಿಗೆ ಈ ಪತ್ರ ಸಿಗಲೇಬಾರದು ಎಂದು ಎಲ್ಲರ ಎದುರು ಅಶ್ವಿನಿ ಹೇಳಿದ್ದರು. ಇದಕ್ಕಾಗಿ ರಕ್ಷಿತಾಗೆ ಲೆಟರ್ ಕೈ ತಪ್ಪಿದೆ’ ಎಂದು ಸೂರಜ್ ಹೇಳಿದರು. ಆದರೆ, ಇದನ್ನು ಕೇಳುವ ಸ್ಥಿತಿಯಲ್ಲಿ ಅಶ್ವಿನಿ ಇರಲೇ ಇಲ್ಲ. ‘ನಾನು ಆ ರೀತಿ ಹೇಳೇ ಇಲ್ಲ. ಬೇಕಿದ್ದರೆ ವಿಡಿಯೋ ಹಾಕಿ. ಅದು ನಿಜವಾಗಿದ್ದರೆ ನಾನು ಇಲ್ಲಿಂದ ಹೊರಟು ಹೋಗುತ್ತೇನೆ’ ಎಂದು ವಾದಿಸಿದರು.

ಇದನ್ನೂ ಓದಿ: ರಕ್ಷಿತಾ ಶೆಟ್ಟಿಗೆ ವಿಶೇಷ ಅಧಿಕಾರ ಕೊಟ್ಟ ಸುದೀಪ್

ಆ ಬಳಿಕ ಸುದೀಪ್ ವಿಡಿಯೋ ಹಾಕುವಂತೆ ಹೇಳಿದರು. ಆದರೆ, ಅಲ್ಲಿ ವಿಡಿಯೋದಲ್ಲಿ ಅಶ್ವಿನಿ ಹಾಗೆಯೇ ಹೇಳಿದರು. ಮನೆಯಿಂದ ಹೊರ ಹೋಗ್ತೀನಿ ಎಂದು ಹೇಳಿದ್ದ ಅಶ್ವಿನಿ ಗೌಡ ಅವರು ಆ ಬಳಿಕ ಸೈಲೆಂಟ್ ಆದರು. ನಂತರ ಸುದೀಪ್ ಪ್ರಶ್ನೆ ಮಾಡಿದಾಗ, ‘ನಾನು ಉದ್ದೇಶಪೂರ್ವಕವಾಗಿಯೇ ಹಾಗೆ ಮಾಡಿದ್ದು’ ಎಂದರು. ನಾನು ಮೊದಲು ಕೇಳಿದಾಗಲೇ ಈ ಮಾತನ್ನು ಹೇಳಿದ್ದರೆ ನಾನು ಚಪ್ಪಾಳೆ ಹೊಡೆಯುತ್ತಿದ್ದೆ ಎಂದರು ಸುದೀಪ್. ಮನೆಯಿಂದ ಹೋಗ್ತೀನಿ ಎಂದವರು ನಂತರ ಸುಮ್ಮನಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!