AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಕಳೆದುಹೋಯ್ತು ಡೈಮಂಡ್ ರಿಂಗ್: ಗ್ರಹಚಾರ ಬಿಡಿಸಲು ಅಶ್ವಿನಿ ಗೌಡ ರೆಡಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಸ್ಥಗಿತ ಆಗುವುದಕ್ಕೂ ಮುನ್ನ ಒಂದಷ್ಟು ಘಟನೆಗಳು ನಡೆದವು. ಅಶ್ವಿನಿ ಗೌಡ ಅವರ ಮೇಕಪ್ ಕಿಟ್ ಕಾಣೆ ಆಗಿದೆ. ಡೈಮಂಡ್ ರಿಂಗ್ ಕೂಡ ಇಲ್ಲ ಎಂದು ಅವರು ಹೇಳಿದ್ದಾರೆ. ತಮ್ಮ ಡೈಮಂಡ್ ರಿಂಗ್ ಕಾಣೆ ಆಗಲು ಕಾರಣ ಆದವರಿಗೆ ಗ್ರಹಚಾರ ಬಿಡಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಕಳೆದುಹೋಯ್ತು ಡೈಮಂಡ್ ರಿಂಗ್: ಗ್ರಹಚಾರ ಬಿಡಿಸಲು ಅಶ್ವಿನಿ ಗೌಡ ರೆಡಿ
Ashwini Gowda
ಮದನ್​ ಕುಮಾರ್​
|

Updated on: Oct 08, 2025 | 10:37 PM

Share

ಹಲವು ಅನಿರೀಕ್ಷಿತ ತಿರುವುಗಳಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಸಾಕ್ಷಿಯಾಗಲಿದೆ ಎಂದು ಮೊದಲೇ ಊಹಿಸಲಾಗಿತ್ತು. ಅದು ಬಿಗ್ ಬಾಸ್ ಮನೆ ಒಳಗಿನ ಆಟಕ್ಕೆ ಸಂಬಂಧಿಸಿದ ವಿಚಾರ. ಆದರೆ ಬಿಗ್ ಬಾಸ್ ಮನೆಯ ಹೊರಗೆ ಕೂಡ ಅಷ್ಟೇ ಅನಿರೀಕ್ಷಿತ ತಿರುವುಗಳು ಎದುರಾಗಿವೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಬಿಗ್ ಬಾಸ್ ಮನೆಯನ್ನು ಬಂದ್ ಮಾಡಲಾಗಿದೆ. ಬಂದ್ ಆಗುವುದಕ್ಕೂ ಮುನ್ನ ನಡೆದ ಆಟವನ್ನು ಸದ್ಯಕ್ಕೆ ಪ್ರಸಾರ ಮಾಡಲಾಗುತ್ತಿದೆ. ಬುಧವಾರದ (ಅಕ್ಟೋಬರ್ 8) ಸಂಚಿಕೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ತಮ್ಮ ಡೈಮಂಡ್ ರಿಂಗ್ ಕಳೆದುಹೋಗಿದೆ ಎಂದು ಹೇಳಿದ್ದಾರೆ.

ಜಂಟಿಗಳು ವರ್ಸಸ್ ಒಂಟಿಗಳು ಎಂಬ ಥೀಮ್​​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಆರಂಭ ಆಗಿತ್ತು. ಕಾಕ್ರೋಜ್ ಸುಧಿ ಅವರು ಅಸುರಾಧಿಪತಿಯಾಗಿ ವಿಶೇಷ ಅಧಿಕಾರ ಪಡೆದರು. ಆದರೆ ಅವರಿಗೆ ಒಂಟಿಗಳ ತಂಡದ ಅಶ್ವಿನಿ ಗೌಡ ಅವರಿಂದ ಬೆಂಬಲ ಸಿಗಲಿಲ್ಲ. ಅಶ್ವಿನಿ ಗೌಡ ಅವರಿಗೆ ಬುದ್ಧಿ ಕಲಿಸಲು ಕಾಕ್ರೋಜ್ ಸುಧಿ ನಿರ್ಧರಿಸಿದರು. ಹಾಗಾಗಿ ಮೇಕಪ್ ಮಾಡಿಕೊಳ್ಳದಂತೆ ನಿಯಮ ವಿಧಿಸಿದರು.

ಕಾಕ್ರೋಜ್ ಸುಧಿ ಅವರು ಮೇಕಪ್ ನಿಷೇಧಿಸಿದರೂ ಕೂಡ ಅಶ್ವಿನಿ ಗೌಡ, ಜಾಹ್ನವಿ ಮುಂತಾದವರು ಮೇಕಪ್ ಮಾಡಿಕೊಳ್ಳಲು ಪ್ರಯತ್ನಿಸಿದರು. ಹಾಗಾಗಿ ಅವರ ಮೇಕಪ್ ಕಿಟ್ ಕದಿಯಲು ಕಾಕ್ರೋಜ್ ಸುಧಿ ಹುನ್ನಾರ ಮಾಡಿದರು. ಧ್ರುವಂತ್​​ಗೆ ಹೇಳಿ ಮೇಕಪ್ ಕಿಟ್ ಮುಚ್ಚಿಡುವಂತೆ ಆದೇಶಿಸಿದರು. ಬಳಿಕ ಅಶ್ವಿನಿ ಗೌಡ ಅವರ ಮೇಕಪ್ ಕಿಟ್ ಕಾಣೆ ಆಯಿತು.

ಮೇಕಪ್ ಕಿಟ್ ವಿಚಾರಕ್ಕೆ ಕೈ ಹಾಕಿದ್ದಕ್ಕೆ ಅಶ್ವಿನಿ ಗೌಡ ಅವರಿಗೆ ಕೋಪ ಬಂತು. ತಮ್ಮ ಡೈಮಂಡ್ ರಿಂಗ್ ಕಾಣುತ್ತಿಲ್ಲ ಎಂದು ಅವರು ಆರೋಪಿಸಿದರು. ಅದಕ್ಕೆ ಕಾರಣ ಆದವರಿಗೆ ಗ್ರಹಚಾರ ಬಿಡಿಸುವುದಾಗಿ ಅಶ್ವಿನಿ ಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಮೇಕಪ್ ಕಿಟ್​​ಗೆ ಅದರದ್ದೇ ಆದ ಗೌರವ ಇದ್ದು, ಅದನ್ನು ಎಲ್ಲೆಲ್ಲೋ ಇಟ್ಟರೆ ತಾವು ಸುಮ್ಮನಿರುವುದಿಲ್ಲ ಎಂದು ಗರಂ ಆದರು.

ಇದನ್ನೂ ಓದಿ: ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?

ಇದೆಲ್ಲವೂ ಬಿಗ್ ಬಾಸ್ ಮನೆ ಬಂದ್ ಆಗುವ ತನಕ ನಡೆದ ಘಟನೆಗಳು. ಆದರೆ ಮಂಗಳವಾರ (ಅ.7) ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಯಿತು. ಬಳಿಕ ಎಲ್ಲ ಸ್ಪರ್ಧಿಗಳನ್ನು ರೆಸಾರ್ಟ್​​ಗೆ ಶಿಫ್ಟ್ ಮಾಡಲಾಯಿತು. ಕಾನೂನಿನ ತೊಡಕು ಪರಿಹಾರ ಆದ ಬಳಿಕ ಮತ್ತೆ ಬಿಗ್ ಬಾಸ್ ಶೋ ಆರಂಭ ಆಗಲಿದೆ. ಆಗ ಬಿಗ್ ಬಾಸ್ ಆಟವನ್ನು ಹೊಸದಾಗಿ ಆರಂಭಿಸುತ್ತಾರಾ ಅಥವಾ ಎಲ್ಲಿ ನಿಂತಿತ್ತೋ ಅಲ್ಲಿಂದಲೇ ಆರಂಭಿಸುತ್ತಾರಾ ಎಂಬ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ