AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಜಗಳವನ್ನೇ ಕಾಯಕ ಮಾಡಿಕೊಂಡ ಅಶ್ವಿನಿ ಗೌಡ

ಜಂಟಿಗಳ ಗುಂಪಿನಲ್ಲಿ ಇರುವ ಕಾವ್ಯ ಶೈವ ಮತ್ತು ಗಿಲ್ಲಿ ನಟ ಅವರನ್ನು ಅಶ್ವಿನಿ ಗೌಡ ಟಾರ್ಗೆಟ್ ಮಾಡಿದಂತಿದೆ. ಕಾವ್ಯಾ ಮತ್ತು ಗಿಲ್ಲಿ ನಟನ ಪ್ರತಿ ಚಲನವಲನವನ್ನು ಅಶ್ವಿನಿ ಗೌಡ ಅವರು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿದ್ದಾರೆ. ಗಿಲ್ಲಿಯ ನಡೆ-ನುಡಿಯಲ್ಲಿ ಸ್ವಲ್ಪ ತಪ್ಪು ಕಾಣಿಸಿದರೂ ಖಂಡಿಸುತ್ತಿದ್ದಾರೆ. ಇದರಿಂದಾಗಿ ಜಗಳ ನಡೆಯುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಜಗಳವನ್ನೇ ಕಾಯಕ ಮಾಡಿಕೊಂಡ ಅಶ್ವಿನಿ ಗೌಡ
Ashwini Gowda
ಮದನ್​ ಕುಮಾರ್​
|

Updated on: Oct 02, 2025 | 10:41 PM

Share

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ (Ashwini Gowda) ಅವರು ಬಿಗ್ ಬಾಸ್ ಮನೆಯಲ್ಲಿ ಜಗಳದ ಮೂಲಕ ಸೌಂಡು ಮಾಡುತ್ತಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋ ಆರಂಭ ಆದಾಗಿನಿಂದ ಅವರು ಏರು ಧ್ವನಿಯಲ್ಲೇ ಮಾತನಾಡುತ್ತಿದ್ದಾರೆ. ಅದರಲ್ಲೂ ಗಿಲ್ಲಿ ನಟ (Gilli Nata) ಹಾಗೂ ಕಾವ್ಯ ಶೈವ ಅವರನ್ನು ಅಶ್ವಿನಿ ಗೌಡ ಆಗಾಗ ಕೆಣಕುತ್ತಾರೆ. ಇದರಿಂದ ಗಿಲ್ಲಿಗೆ ಸಂಕಟ ಆಗಿದೆ. ಹೋದಲ್ಲಿ ಬಂದಲ್ಲಿ ಗಿಲ್ಲಿಗೆ ಅಶ್ವಿನಿ ಗೌಡ ಕಾಟ ತಡೆಯಲು ಆಗುತ್ತಿಲ್ಲ. ಇದೇ ಕಾರಣಕ್ಕೆ ಬಿಗ್​ ಬಾಸ್ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿದೆ.

ಒಂಟಿಗಳು ಮತ್ತು ಜಂಟಿಗಳು ಎಂಬ ಥೀಮ್​​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಆರಂಭ ಆಗಿದೆ. ಅಶ್ವಿನಿ ಗೌಡ ಅವರು ಒಂಟಿಗಳ ಟೀಮ್​​ನಲ್ಲಿ ಇದ್ದಾರೆ. ಒಂಟಿಗಳಿಗೆ ಬಿಗ್ ಬಾಸ್ ಕೆಲವು ವಿಶೇಷ ಅಧಿಕಾರ ನೀಡಿದ್ದಾರೆ. ಆ ಅಧಿಕಾರಿಯನ್ನು ಅಶ್ವಿನಿ ಗೌಡ ಅವರು ಹೆಚ್ಚು ಪರ್ಸನಲ್ ಆಗಿ ತೆಗೆದುಕೊಂಡಿದ್ದಾರೆ ಎಂಬ ಅಭಿಪ್ರಾಯ ಮೂಡುವಂತಾಗಿದೆ.

ಅಶ್ವಿನಿ ಗೌಡ ಅವರು ಒಂಟಿಗಳ ಟೀಮ್​​ನಲ್ಲಿ ರಾಜಮಾತೆಯ ಸ್ಥಾನವನ್ನು ಅಲಂಕರಿಸಿದ್ದಾರೆ. ಜಂಟಿಗಳ ತಂಡದಲ್ಲಿ ಇರುವ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಮೇಲೆ ಅಶ್ವಿನಿ ಗೌಡ ಕಣ್ಣಿಟ್ಟಿದ್ದಾರೆ. ಅವರಿಬ್ಬರು ಮಾಡಿದ್ದನ್ನೆಲ್ಲ ಅಶ್ವಿನಿ ಗೌಡ ವಿರೋಧಿಸುತ್ತಿದ್ದಾರೆ. ಆದರೆ ಇನ್ನುಳಿದ ಜಂಟಿಗಳನ್ನು ಅವರು ಅಷ್ಟೇನೂ ಟಾರ್ಗೆಟ್ ಮಾಡಿಲ್ಲ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ.

ಅಕ್ಟೋಬರ್ 2ರ ಸಂಚಿಕೆಯಲ್ಲಿ ಎಲ್ಲರನ್ನೂ ಉದ್ದೇಶಿಸಿ ಅಶ್ವಿನಿ ಗೌಡ ಮಾತನಾಡುತ್ತಿದ್ದರು. ಆ ವೇಳೆ ಕಾವ್ಯ ಶೈವ ಅವರು ಬೇರೆ ಕಡೆ ನೋಡುತ್ತಾ ಅಶ್ವಿನಿಯ ಮಾತನ್ನು ಕೇಳಿಸಿಕೊಳ್ಳುತ್ತಿದ್ದರು. ಅದು ಅಶ್ವಿನಿ ಗೌಡ ಅವರಿಗೆ ಸರಿ ಎನಿಸಲಿಲ್ಲ. ‘ಅಹಂ ತೋರಿಸಬೇಡಿ. ನಾನು ಮಾತನಾಡುವಾಗ ನನ್ನ ಮುಖವನ್ನೇ ನೋಡಬೇಕು’ ಎಂದು ತಾಕೀತು ಮಾಡಿದರು.

ಇದನ್ನೂ ಓದಿ: ಗಿಲ್ಲಿ ನಟನಿಗೆ ಕಾಮಿಡಿಯೇ ಮುಳುವಾಯ್ತು: ಬಿಗ್ ಬಾಸ್ ಕಡೆಯಿಂದ ಖಡಕ್ ಎಚ್ಚರಿಕೆ

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ನಟ, ಕಾವ್ಯ ಶೈವ ಹಾಗೂ ಅಶ್ವಿನಿ ಗೌಡ ಅವರ ನಡುವೆ ಮಾತಿನ ಚಕಮಕಿ ನಡೆಯಿತು. ‘ನಿಮಗೂ ಕೂಡ ಅಹಂ’ ಇದೆ ಕಾವ್ಯ ಶೈವ ಅವರು ಖಡಕ್ ಆಗಿ ತಿರುಗೇಟು ನೀಡಿದರು. ಗಿಲ್ಲಿ ನಟ ಕಾಮಿಡಿ ಕಲಾವಿದ ಆಗಿರುವುದರಿಂದ ಎಲ್ಲ ಪರಿಸ್ಥಿತಿಯನ್ನು ತಿಳಿಗೊಳಿಸುತ್ತಿದ್ದಾರೆ. ಬಹುತೇಕ ಸಂದರ್ಭವನ್ನು ಅವರು ಕಾಮಿಡಿಯಾಗಿ ತೆಗೆದುಕೊಂಡು ಎಲ್ಲರನ್ನೂ ನಗಿಸುತ್ತಿದ್ದಾರೆ. ಇಲ್ಲದಿದ್ದರೆ ಜಗಳ ಇನ್ನಷ್ಟು ಜೋರಾಗುತ್ತಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ