AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಿಂದ ಶೀಘ್ರವೇ ಅಶ್ವಿನಿ ಗೌಡ ಹೊರಕ್ಕೆ? ನಡೆಯಲಿದೆ ಪೊಲೀಸ್ ವಿಚಾರಣೆ

ಬಿಗ್ ಬಾಸ್ ಕನ್ನಡ ಮನೆಗೆ ಅಶ್ವಿನಿ ಗೌಡಗೆ ಕಾನೂನು ಸಂಕಷ್ಟ ಎದುರಾಗಿದೆ. ರಕ್ಷಿತಾ ಶೆಟ್ಟಿ ಜೊತೆ ಜಗಳದ ಸಂದರ್ಭದಲ್ಲಿ ಜಾತಿ ನಿಂದನೆಗೆ ಒಳಗಾಗುವ ಪದ ಬಳಸಿದ್ದಾರೆ. ಇದರಿಂದಾಗಿ ಪೊಲೀಸ್ ವಿಚಾರಣೆಗಾಗಿ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರಬೇಕಾದ ಪರಿಸ್ಥಿತಿ ಇದೆ. ಈ ಬಗ್ಗೆ ಕಲರ್ಸ್ ವಾಹಿನಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಬಿಗ್ ಬಾಸ್ ಮನೆಯಿಂದ ಶೀಘ್ರವೇ ಅಶ್ವಿನಿ ಗೌಡ ಹೊರಕ್ಕೆ? ನಡೆಯಲಿದೆ ಪೊಲೀಸ್ ವಿಚಾರಣೆ
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on: Oct 24, 2025 | 6:58 AM

Share

ಬಿಗ್ ಬಾಸ್ (Bigg Boss) ಶೋ ಹಾಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಬೇಡ ಬೇಡ ಎಂದರೂ ಸಾಕಷ್ಟು ವಿವಾದಗಳು ಹುಟ್ಟಿಕೊಳ್ಳುತ್ತವೆ. ಕಳೆದ ಬಾರಿಯ ಬಿಗ್ ಬಾಸ್​ನಲ್ಲಿ ಆದ ವಿವಾದಗಳು ಒಂದೆರಡಲ್ಲ. ಈ ಬಾರಿ ಯಾವುದೇ ಕಾನೂನು ಸಮಸ್ಯೆ ಬರದಂತೆ ನೋಡಿಕೊಳ್ಳಲು ಸಾಕಷ್ಟು ಸಿದ್ಧತೆ ನಡೆದಿತ್ತು. ಆದರೆ, ಅಶ್ವಿನಿ ಗೌಡ ಅವರು ಮಾಡಿದ ತಪ್ಪಿನಿಂದ ಮತ್ತೆ ಕಾನೂನು ತೊಡಕು ಉಂಟಾಗಿದೆ. ಪೊಲೀಸ್ ವಿಚಾರಣೆಗಾಗಿ ಅವರು ಶೀಘ್ರವೇ ಹೊರಕ್ಕೆ ಬರಬೇಕಾದ ಪರಿಸ್ಥಿತಿ ಬಂದೊದಗಬಹುದು ಎನ್ನಲಾಗುತ್ತಿದೆ.

ಆರೋಗ್ಯ ಸಮಸ್ಯೆ, ಕಾನೂನು ಸಮಸ್ಯೆ ಎದುರಾದಾಗ ಸ್ಪರ್ಧಿಗಳು ಹೊರಕ್ಕೆ ಬಂದು ಹೋದ ಉದಾಹರಣೆ ಸಾಕಷ್ಟಿದೆ. ಚೈತ್ರಾ ಕುಂದಾಪುರ ಅವರು ತಮ್ಮ ಹಳೆಯ ಕೇಸ್ ವಿಚಾರಣೆಗೆ, ಅನಾರೋಗ್ಯ ಸಮಸ್ಯೆಯಿಂದ ಈ ಮೊದಲು ಬಿಗ್ ಬಾಸ್​ನಿಂದ ಹೊರಕ್ಕೆ ಬಂದಿದ್ದರು. ಡ್ರೋನ್ ಪ್ರತಾಪ್, ಸಂಗೀತಾ ಶೃಂಗೇರಿ ಸೇರಿದಂತೆ ಅನೇಕರು ಹೀಗೆಯೇ ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬಂದು, ತಮ್ಮ ಅನಿವಾರ್ಯತೆ ಪೂರ್ಣಗೊಳಿಸಿ ನಂತರ ಬಿಗ್ ಬಾಸ್ ಮನೆಗೆ ಮರಳಿದ್ದಿದೆ. ಈಗ ಅಶ್ವಿನಿ ಗೌಡ ಅವರಿಗೂ ಇದೇ ರೀತಿ ಆಗಬಹುದು.

ಎಸ್ ಪದ ಬಳಕೆ

ರಕ್ಷಿತಾ ಶೆಟ್ಟಿ ಜೊತೆ ಜಗಳ ಆಡುವ ಸಂದರ್ಭದಲ್ಲಿ ‘ಅವಳು ಎಸ್. ನಾನು ಆ ಕ್ಯಾಟಗರಿ ಅಲ್ಲ’ ಎಂದು ಅಶ್ವಿನಿ ಹೇಳಿದ್ದರು. ಇದು ಜಾತಿ ನಿಂದನೆ ಪದ ಆಗಿದೆ. ಅವರು ಯಾವ ಅರ್ಥದಲ್ಲಿ ಇದನ್ನು ಹೇಳಿದರು ಎಂಬ ಪ್ರಶ್ನೆ ಮೂಡಿದೆ. ಈ ಪ್ರಕರಣದಲ್ಲಿ ಅಶ್ವಿನಿ ವಿಚಾರಣೆ ಎದುರಿಸಬೇಕಾಗಿ ಬರಹುದು.

ಇದನ್ನೂ ಓದಿ
Image
ಕಾಮಿಡಿ ಮಾಡುತ್ತಾ ಆಟದ ಗಂಭೀರತೆ ಮರೆತ ಗಿಲ್ಲಿ; ತಾಳ್ಮೆ ಕಳೆದುಕೊಂಡ ಕಾವ್ಯಾ
Image
‘ಕಾಂತಾರ: ಚಾಪ್ಟರ್ 1’ ಅಬ್ಬರ; ಸಾವಿರದ ಕ್ಲಬ್ ಸೇರಲು ಇನ್ನೆಷ್ಟು ಕೋಟಿ ಬೇಕು
Image
ದೀಪಾವಳಿಗೆ ಬಂಪರ್ ಲಾಟರಿ; ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಕಾಂತಾರ’
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಇದನ್ನೂ ಓದಿ: ಬಿಗ್​​ಬಾಸ್: ರಕ್ಷಿತಾ ಕುರಿತು ಅವಾಚ್ಯ ಪದ ಬಳಕೆ, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ಮುಂದಿರೋ ಆಯ್ಕೆ ಏನು?

ಅಶ್ವಿನಿ ಅವರನ್ನು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಕರೆತಂದು ಪೊಲೀಸ್ ವಿಚಾರಣೆಗೆ ಅನುವು ಮಾಡಿಕೊಡಬಹುದು. ಆ ಬಳಿಕ ಅವರನ್ನು ಮರಳಿ ದೊಡ್ಮನೆಗೆ ಕಳುಹಿಸಬಹುದು. ಇಲ್ಲವೇ ಬಿಗ್ ಬಾಸ್ ಮನೆಯಲ್ಲೇ ಅಶ್ವಿನಿ ಗೌಡ ಅವರು ಕ್ಷಮೆ ಕೇಳಿ ಈ ಪ್ರಕರಣಕ್ಕೆ ಅಂತ್ಯ ಹಾಡಬಹುದು. ಈ ಬಗ್ಗೆ ಕಲರ್ಸ್ ವಾಹಿನಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ