AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಗೌಡ ಏನು ನಡೆಯಬಾರದು ಎಂದುಕೊಂಡಿದ್ರೋ ಅದೇ ಆಗೋಯ್ತು

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ 'ವಿಲನ್' ಆಗಿ ಕಾಣಿಸುತ್ತಿದ್ದು, ಅವರ ಸಾಮಾಜಿಕ ಜಾಲತಾಣ ಖಾತೆಗೆ ನೆಗೆಟಿವ್ ಕಮೆಂಟ್​ಗಳು ಬರುತ್ತಿವೆ. ಪ್ರತಿ ವಾರ ಸುದೀಪ್ ಅವರಿಂದ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಹಾಗೂ ಇತರರಿಗೆ 'ಹೀರೋ' ಪಟ್ಟ ಸಿಗುತ್ತಿರುವುದು ಅವರನ್ನು ಚಿಂತೆಗೀಡುಮಾಡಿದೆ. ತಾನು ವಿಲನ್ ಆಗಲು ಇಷ್ಟವಿಲ್ಲ ಎಂದು ಅಶ್ವಿನಿ ಜಾನ್ವಿ ಜೊತೆ ಚರ್ಚಿಸಿದ್ದಾರೆ.

ಅಶ್ವಿನಿ ಗೌಡ ಏನು ನಡೆಯಬಾರದು ಎಂದುಕೊಂಡಿದ್ರೋ ಅದೇ ಆಗೋಯ್ತು
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on: Nov 24, 2025 | 7:38 AM

Share

ಬಿಗ್ ಬಾಸ್ ಮನೆಯಲ್ಲಿರೋ ಅಶ್ವಿನಿ ಗೌಡ ಅವರ ಹೆಸರು ಸಾಕಷ್ಟು ಚರ್ಚೆಯಲ್ಲಿ ಇದೆ. ಅವರ ಸೋಶಿಯ್ ಮೀಡಿಯಾ ಖಾತೆಯಲ್ಲಿರೋ ಪೋಸ್ಟ್​ಗೆ ಸಾಕಷ್ಟು ನೆಗೆಟಿವ್ ಕಮೆಂಟ್​ಗಳು ಬರುತ್ತಿವೆ. ಅಶ್ವಿನಿ ಗೌಡ ಅವರು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಅವರಿಗೆ ವಿಲನ್ ಆಗಬೇಕು ಎಂಬ ಯಾವುದೇ ಉದ್ದೇಶ ಇಲ್ಲ. ಆದರೆ, ಹೊರಗೆ ನಡೆಯುತ್ತಿರುವುದು ಇದೇ. ಈ ವಿಷಯವನ್ನು ಅವರು ಜಾನ್ವಿ ಜೊತೆ ಚರ್ಚೆ ಮಾಡಿದ್ದಾರೆ.

ಪ್ರತಿ ವಾರವೂ ಅಶ್ವಿನಿ ಗೌಡ ಅವರಿಗೆ ಸುದೀಪ್ ಅವರಿಂದ ಕ್ಲಾಸ್ ಇದ್ದೇ ಇರುತ್ತದೆ. ಆರಂಭದಲ್ಲಿ ರಕ್ಷಿತಾ ಶೆಟ್ಟಿ ಅವರನ್ನು ಕೆಣಕಿ ಕ್ಲಾಸ್ ತೆಗೆದುಕೊಂಡರು. ನಂತರ ಈ ರೀತಿಯದ್ದು ನಡೆದೇ ಇತ್ತು. ಕಳೆದ ವಾರ ಅಶ್ವಿನಿಗೆ ಸುದೀಪ್ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದರು. ಈ ವಿಷಯದ ಬಗ್ಗೆ ಅಶ್ವಿನಿ ಅವರು ಜಾನ್ವಿ ಜೊತೆ ಚರ್ಚೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಒಬ್ಬರು ನೆಗೆಟಿವ್ ಆಗಿ ಕಂಡಾಗ ಸಹಜವಾಗಿಯೇ ಮತ್ತೊಬ್ಬರು ಹೀರೋ ಆಗಿ ಕಾಣಿಸುತ್ತಾರೆ. ಈಗ ಅಶ್ವಿನಿ ಗೌಡ ಅವರ ಆಟದಲ್ಲಿ ಆಗಿದ್ದು ಇದೇ. ಅಶ್ವಿನಿ ಅವರ ನೆಗೆಟಿವಿಟಿಯಿಂದ ರಕ್ಷಿತಾ ಹಾಗೂ ಗಿಲ್ಲಿ ಆಟಕ್ಕೆ ಸಾಕಷ್ಟು ಮೈಲೇಜ್ ಸಿಕ್ಕಿದೆ. ಆದರೆ, ಅಶ್ವಿನಿ ಅವರು ಇಷ್ಟೆಲ್ಲ ಮಾಡಿದರೂ ತಮ್ಮನ್ನು ತಾವು ತಿದ್ದಿಕೊಳ್ಳುತ್ತಿಲ್ಲ. ಯಾರಾದರೂ ಕೆಣಕಿದರೆ ಉರಿದುರಿದು ಬೀಳುತ್ತಾರೆ. ಇದರಿಂದ ಆಟ ಮತ್ತಷ್ಟು ಹಾಳಾಗುತ್ತಿದೆ.

ಅಶ್ವಿನಿ ಗೌಡ ಅವರು ಈ ಬಗ್ಗೆ ಮಾತನಾಡಿದ್ದಾರೆ. ಜಾನ್ವಿ ಜೊತೆ ಕುಳಿತು ಈ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾರೆ. ‘ಪ್ರತಿ ವಾರವೂ ನಮಗೆ ಕ್ಲಾಸ್ ಇದೆ ಎಂದಾಗ ಏಕೋ ನಾನು ಹೊರಗೆ ಸಾಕಷ್ಟು ನೆಗೆಟಿವ್ ಆಗಿ ಕಾಣಿಸುತ್ತಿದ್ದೇನೆ ಅನಿಸುತ್ತಿದೆ. ನಾನು ಇಲ್ಲಿ ಯಾರನ್ನೂ ಹೀರೋ ಮಾಡೋಕೆ ಬಂದಿಲ್ಲ. ಅವರು ಯಾರಾದರೂ ಹೀರೋ ಆಗಲಿ, ನನಗೆ ಮಾತ್ರ ವಿಲನ್ ಆಗೋಕೆ ಇಷ್ಟ ಇಲ್ಲ’ ಎಂದು ಅಶ್ವಿನಿ ಹೇಳಿದ್ದಾರೆ.

ಇದನ್ನೂ ಓದಿ: ‘ಈ ಆಟ ನನಗೆ ಅಲ್ಲ ಅನಿಸುತ್ತೆ’; ಕಣ್ಣೀರು ಹಾಕುತ್ತಲೇ ಹೇಳಿದ ಅಶ್ವಿನಿ

ಅಶ್ವಿನಿ ಗೌಡ ಏನು ನಡೆಯಬಾರದು ಎಂದುಕೊಂಡಿದ್ದರೋ ಅದೇ ನಡೆದು ಹೋಗಿದೆ. ಅವರು ಹೊರಗೆ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ಈ ವಿಷಯ ಹೊರಗೆ ಎಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ ಎಂಬ ಸಣ್ಣ ಐಡಿಯಾ ಕೂಡ ಅವರಿಗೆ ಇಲ್ಲ. ಹೊರಗೆ ಬಂದ ಬಳಿಕ ಈ ಬಗ್ಗೆ ಅವರಿಗೆ ಈ ಬಗ್ಗೆ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ