AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗಿಲ್ಲಿ; ಅಸಲಿ ಬಣ್ಣ ಬಯಲು

ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಗಿಲ್ಲಿ ಜೊತೆ ಜಗಳವಾಡುತ್ತಾ ಸುದ್ದಿಯಲ್ಲಿದ್ದಾರೆ. ಗೌರವದ ನಾಟಕವಾಡುತ್ತಿದ್ದ ಅಶ್ವಿನಿಯ ನಿಜ ಬಣ್ಣವನ್ನು ಗಿಲ್ಲಿ ಬಯಲು ಮಾಡಿದ್ದಾರೆ. ಇದರಿಂದ ಉತ್ತರ ನೀಡಲಾಗದೆ ಸುಮ್ಮನಾದ ಅಶ್ವಿನಿ, ಇದೀಗ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದು ಕೇವಲ 'ಸಿಂಪತಿ ಕಾರ್ಡ್' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

ಅಶ್ವಿನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗಿಲ್ಲಿ; ಅಸಲಿ ಬಣ್ಣ ಬಯಲು
ಅಶ್ವಿನಿ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Nov 20, 2025 | 12:26 PM

Share

‘ಬಿಗ್ ಬಾಸ್​ ಕನ್ನಡ ಸೀಸನ್ 12’ರಲ್ಲಿ (BBk 12) ಅಶ್ವಿನಿ ಗೌಡ ಅವರು ಸುದ್ದಿಯಲ್ಲಿದ್ದಾರೆ. ಗಿಲ್ಲಿ ಹಾಗೂ ಅವರ ಮಧ್ಯೆ ಫೈಟ್​ಗಳು ಆಗಾಗ ನಡೆಯುತ್ತಲೇ ಇರುತ್ತವೆ. ಈಗ ಅಶ್ವಿನಿ ಗೌಡ ಅವರನ್ನು ಗಿಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಅವರ ನಿಜವಾದ ಬಣ್ಣವನ್ನು ಬಯಲು ಮಾಡಿದ್ದಾರೆ. ಆ ಬಳಿಕ ಅಶ್ವಿನಿ ಗೌಡ ಅವರು ಸರಿಯಾಗಿ ಉತ್ತರ ಕೊಡಲು ಸಾಧ್ಯವಾಗದೇ ಸುಮ್ಮನಾಗಿದ್ದಾರೆ. ಈ ವಿಷಯ ವೀಕೆಂಡ್​ನಲ್ಲಿ ಚರ್ಚೆಗೆ ಬರಬೇಕಿದೆ.

ಅಶ್ವಿನಿ ಗೌಡ ಅವರು ಯಾವಾಗಲೂ ತಮಗೆ ಗೌರವ ನೀಡಬೇಕು ಎಂದು ನಿರೀಕ್ಷೆ ಮಾಡುತ್ತಾರೆ. ಆದರೆ, ಅವರು ಮಾತ್ರ ಎಲ್ಲರಿಗೂ ಏಕವಚನದಲ್ಲಿ ಮಾತನಾಡುತ್ತಾರೆ. ಹೀಗಾಗಿ, ಜಗಳ ನಡೆಯುವಾಗ ಎದುರಿಗಿದ್ದವರೂ ಏಕವಚನ ಬಳಕೆ ಮಾಡುತ್ತಾರೆ. ಆಗ ಅಶ್ವಿನಿ, ‘ನನಗೆ ಗೌರವ ಸಿಗುತ್ತಿಲ್ಲ’ ಎಂಬ ಕಾರ್ಡ್ ಪ್ಲೇ ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದು ಬಂದಿದೆ. ಇಷ್ಟು ದಿನ ಈ ವಿಷಯ ಗೊತ್ತಿದ್ದೂ ಯಾರೂ ಹೇಳುತ್ತಿರಲಿಲ್ಲ. ಆದರೆ, ಗಿಲ್ಲಿ ಈಗ ರೆಡ್ ಹ್ಯಾಂಡ್ ಆಗಿ ಹಿಡಿದು ಅಶ್ವಿನಿಗೆ ಈ ವಿಚಾರವನ್ನು ಹೇಳಿದ್ದಾರೆ.

‘ಹೋಗಲೋ’ ಎಂದು ಅಶ್ವಿನಿ ಗೌಡ ಗಿಲ್ಲಿಗೆ ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಗಿಲ್ಲಿ, ‘ನಮ್ಮ ಬಾಯಲ್ಲೂ ಆವಾಗ ಆವಾಗ ಬರೋದು ಇದಕ್ಕೆ’ ಎಂದು ಉತ್ತರಿಸಿದರು. ಆ ಬಳಿಕ ತಿರುಗಿ ಉತ್ತರ ಕೊಡಲಾಗದೆ, ‘ನಿನಗೆ ಇಷ್ಟು ಗೌರವ ಕೊಟ್ಟಿರೋದೆ ಹೆಚ್ಚು’ ಎಂದಿದ್ದಾರೆ ಅಶ್ವಿನಿ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆ ಆಗಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಗಿಲ್ಲಿ ವಿರುದ್ಧ ಮಸಲತ್ತು ಶುರು ಮಾಡಿದ ಸ್ಪಂದನಾ; ಏರಿದ ಏಣಿಯನ್ನೇ ಒದ್ದರಾ?

ಅಶ್ವಿನಿ ಗೌಡ ಬಿಗ್ ಬಾಸ್ ಮನೆಯಲ್ಲಿ ಗೌರವ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ. ಇದು ಮೊಸಳೆ ಕಣ್ಣೀರು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಸಿಂಪತಿ ಕಾರ್ಡ್ ಇದು ಎಂದು ಹೇಳಿದ್ದಾರೆ. ಸದ್ಯ ಅವರು ಊಟ ಬಿಟ್ಟು ಪ್ರತಿಭಟನೆ ಕೂಡ ಆರಂಭಿಸಿದ್ದಾರೆ. ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು