AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್; ಶೋ ಗೆದ್ದವರಿಗೆ ಇದೆ ವಿಶೇಷ ಬಹುಮಾನ

ಪುನೀತ್ ಅವರನ್ನು ಕಳೆದುಕೊಂಡು ಏಳು ತಿಂಗಳು ಕಳೆಯುತ್ತಾ ಬಂದಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಆ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಆದರೆ, ಅವರಿಲ್ಲದೆ ಜೀವನ ಸಾಗಿಸಲೇಬೇಕಿದೆ.

‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್; ಶೋ ಗೆದ್ದವರಿಗೆ ಇದೆ ವಿಶೇಷ ಬಹುಮಾನ
ಅಶ್ವಿನಿ ಪುನೀತ್
TV9 Web
| Edited By: |

Updated on: May 27, 2022 | 7:00 AM

Share

‘ಕಲರ್ಸ್ ಕನ್ನಡ’ (Colors Kannada) ವಾಹಿನಿ ನಿತ್ಯ ಹೊಸಹೊಸ ರಿಯಾಲಿಟಿ ಶೋ ಹಾಗೂ ಧಾರಾವಾಹಿ ಮೂಲಕ ವೀಕ್ಷಕರ ಎದುರು ಬರುತ್ತಿದೆ. ಹತ್ತು ಹಲವು ರಿಯಾಲಿಟಿ ಶೋಗಳನ್ನು ಪರಿಚಿಯಿಸಿದ ಖ್ಯಾತಿ ಈ ವಾಹಿನಿಗೆ ಇದೆ. ‘ಡಾನ್ಸಿಂಗ್ ಚಾಂಪಿಯನ್’ ಹೆಸರಿನ ಶೋ ಮೂಲಕ ವೀಕ್ಷಕರನ್ನು ರಂಜಿಸುವ ಕೆಲಸ ಆಗುತ್ತಿದೆ. ಈಗ ‘ಡಾನ್ಸಿಂಗ್ ಚಾಂಪಿಯನ್’ (Dancing Champion) ಫಿನಾಲೆ ಹಂತ ತಲುಪಿದೆ. ಇದೇ ಭಾನುವಾರ (ಮೇ 29) ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಇದಕ್ಕೆ ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಅವರು (Ashwini Puneeth Rajkumar) ಆಗಮಿಸಿದ್ದು ವಿಶೇಷ.

ಪುನೀತ್ ಅವರನ್ನು ಕಳೆದುಕೊಂಡು ಏಳು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಅವರಿಲ್ಲ ಎನ್ನುವ ನೋವು ಎಲ್ಲರಲ್ಲೂ ಹಾಗೆಯೇ ಉಳಿದುಕೊಂಡಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಆ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಆದರೆ, ಅವರಿಲ್ಲದೆ ಜೀವನ ಸಾಗಿಸಲೇಬೇಕಿದೆ. ಹೀಗಾಗಿ, ಅವರು ಮರಳಿ ಚಿತ್ರರಂಗದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಪುನೀತ್ ಕನಸಿನ ಕೂಸು ‘ಪಿಆರ್​​ಕೆ ಪ್ರೊಡಕ್ಷನ್​’ ಮೂಲಕ ಹಲವು ಚಿತ್ರಗಳನ್ನು ನಿರ್ಮಿಸುವ ಕೆಲಸ ಆಗುತ್ತಿದೆ. ಈ ಮಧ್ಯೆ ಅಶ್ವಿನಿ ಅವರು ಕಿರುತೆರೆ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರಿಗೂ ಕಲರ್ಸ್ ಕನ್ನಡಕ್ಕೂ ಒಳ್ಳೆಯ ನಂಟಿತ್ತು. ‘ಕನ್ನಡದ ಕೋಟ್ಯಧಿಪತಿ’ ನಾಲ್ಕನೇ ಸೀಸನ್ ಕಲರ್ಸ್​ನಲ್ಲಿ ಪ್ರಸಾರವಾಯಿತು. ಇದರ ನಿರೂಪಣೆಯನ್ನು ಪುನೀತ್ ನಿರ್ವಹಿಸುತ್ತಿದ್ದರು. ಈ ಕಾರಣಕ್ಕೆ ಅಶ್ವಿನಿ ಅವರಿಗೂ ಕಲರ್ಸ್​ ಜತೆ ನಂಟು ಬೆಳೆದಿದೆ. ‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ತಿರುಪತಿಯಲ್ಲಿ ಕನ್ನಡಿಗರಿಗೆ ಇದೆಂಥಾ ಅವಮಾನ? ವಾಹನಕ್ಕೆ ಕನ್ನಡ ಬಾವುಟ, ನಟ ಪುನೀತ್ ಫೋಟೋ ಅಂಟಿಸಿಕೊಂಡವರಿಗೆ ಕೆಟ್ಟ ಅನುಭವ
Image
Ashwini Puneeth Rajkumar: ಡಾ.ರಾಜ್​ ಜನ್ಮದಿನ ಹಿನ್ನೆಲೆ; ಬಡಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಅಶ್ವಿನಿ ಪುನೀತ್
Image
‘ಜೇಮ್ಸ್​’ ಚಿತ್ರದಲ್ಲಿ ಅಪ್ಪು ವಾಯ್ಸ್ ರೀ-ಕ್ರಿಯೇಟ್​; ಶಾಕ್​ ಆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಇದನ್ನೂ ಓದಿ: ಡಾ.ರಾಜ್​ ಜನ್ಮದಿನ ಹಿನ್ನೆಲೆ; ಬಡಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಅಶ್ವಿನಿ ಪುನೀತ್

ಈ ಬಾರಿಯ ವಿಶೇಷ ಎಂದರೆ ಪುನೀತ್ ಅವರ ರೀತಿಯಲ್ಲೇ ಕಾಣುವ ಟ್ರೋಫಿ ಮಾಡಿಸಲಾಗಿದೆ. ಗೆದ್ದವರಿಗೆ ಈ ಟ್ರೋಫಿ ಸಿಗಲಿದೆ. ಈ ಕಾರಣಕ್ಕೂ ಈ ಗೆಲುವು ತುಂಬಾನೇ ವಿಶೇಷ ಆಗಿರಲಿದೆ. ಸದ್ಯ, ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಇದರ ಪ್ರೋಮೋ ಹಂಚಿಕೊಂಡಿದೆ. ಅಭಿಮಾನಿಗಳು ಪುನೀತ್ ಇಲ್ಲ ಎಂಬ ಬೇಸರವನ್ನು ಕಮೆಂಟ್​ ಸೆಕ್ಷನ್​ನಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಭಾನುವಾರ ಸಂಜೆ 6 ಗಂಟೆಗೆ ಫಿನಾಲೆ ಆರಂಭವಾಗಲಿದೆ. ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರನ್ನು ಕಿರುತೆರೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ