AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್; ಶೋ ಗೆದ್ದವರಿಗೆ ಇದೆ ವಿಶೇಷ ಬಹುಮಾನ

ಪುನೀತ್ ಅವರನ್ನು ಕಳೆದುಕೊಂಡು ಏಳು ತಿಂಗಳು ಕಳೆಯುತ್ತಾ ಬಂದಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಆ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಆದರೆ, ಅವರಿಲ್ಲದೆ ಜೀವನ ಸಾಗಿಸಲೇಬೇಕಿದೆ.

‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಯಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್; ಶೋ ಗೆದ್ದವರಿಗೆ ಇದೆ ವಿಶೇಷ ಬಹುಮಾನ
ಅಶ್ವಿನಿ ಪುನೀತ್
TV9 Web
| Edited By: |

Updated on: May 27, 2022 | 7:00 AM

Share

‘ಕಲರ್ಸ್ ಕನ್ನಡ’ (Colors Kannada) ವಾಹಿನಿ ನಿತ್ಯ ಹೊಸಹೊಸ ರಿಯಾಲಿಟಿ ಶೋ ಹಾಗೂ ಧಾರಾವಾಹಿ ಮೂಲಕ ವೀಕ್ಷಕರ ಎದುರು ಬರುತ್ತಿದೆ. ಹತ್ತು ಹಲವು ರಿಯಾಲಿಟಿ ಶೋಗಳನ್ನು ಪರಿಚಿಯಿಸಿದ ಖ್ಯಾತಿ ಈ ವಾಹಿನಿಗೆ ಇದೆ. ‘ಡಾನ್ಸಿಂಗ್ ಚಾಂಪಿಯನ್’ ಹೆಸರಿನ ಶೋ ಮೂಲಕ ವೀಕ್ಷಕರನ್ನು ರಂಜಿಸುವ ಕೆಲಸ ಆಗುತ್ತಿದೆ. ಈಗ ‘ಡಾನ್ಸಿಂಗ್ ಚಾಂಪಿಯನ್’ (Dancing Champion) ಫಿನಾಲೆ ಹಂತ ತಲುಪಿದೆ. ಇದೇ ಭಾನುವಾರ (ಮೇ 29) ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಇದಕ್ಕೆ ಪುನೀತ್ ರಾಜ್​ಕುಮಾರ್ ಅವರ ಪತ್ನಿ ಅಶ್ವಿನಿ ಅವರು (Ashwini Puneeth Rajkumar) ಆಗಮಿಸಿದ್ದು ವಿಶೇಷ.

ಪುನೀತ್ ಅವರನ್ನು ಕಳೆದುಕೊಂಡು ಏಳು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಅವರಿಲ್ಲ ಎನ್ನುವ ನೋವು ಎಲ್ಲರಲ್ಲೂ ಹಾಗೆಯೇ ಉಳಿದುಕೊಂಡಿದೆ. ಪುನೀತ್ ಪತ್ನಿ ಅಶ್ವಿನಿ ಅವರು ಆ ಘಟನೆಯಿಂದ ಸಾಕಷ್ಟು ನೊಂದಿದ್ದಾರೆ. ಆದರೆ, ಅವರಿಲ್ಲದೆ ಜೀವನ ಸಾಗಿಸಲೇಬೇಕಿದೆ. ಹೀಗಾಗಿ, ಅವರು ಮರಳಿ ಚಿತ್ರರಂಗದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಪುನೀತ್ ಕನಸಿನ ಕೂಸು ‘ಪಿಆರ್​​ಕೆ ಪ್ರೊಡಕ್ಷನ್​’ ಮೂಲಕ ಹಲವು ಚಿತ್ರಗಳನ್ನು ನಿರ್ಮಿಸುವ ಕೆಲಸ ಆಗುತ್ತಿದೆ. ಈ ಮಧ್ಯೆ ಅಶ್ವಿನಿ ಅವರು ಕಿರುತೆರೆ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರಿಗೂ ಕಲರ್ಸ್ ಕನ್ನಡಕ್ಕೂ ಒಳ್ಳೆಯ ನಂಟಿತ್ತು. ‘ಕನ್ನಡದ ಕೋಟ್ಯಧಿಪತಿ’ ನಾಲ್ಕನೇ ಸೀಸನ್ ಕಲರ್ಸ್​ನಲ್ಲಿ ಪ್ರಸಾರವಾಯಿತು. ಇದರ ನಿರೂಪಣೆಯನ್ನು ಪುನೀತ್ ನಿರ್ವಹಿಸುತ್ತಿದ್ದರು. ಈ ಕಾರಣಕ್ಕೆ ಅಶ್ವಿನಿ ಅವರಿಗೂ ಕಲರ್ಸ್​ ಜತೆ ನಂಟು ಬೆಳೆದಿದೆ. ‘ಡಾನ್ಸಿಂಗ್ ಚಾಂಪಿಯನ್’ ಫಿನಾಲೆಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ತಿರುಪತಿಯಲ್ಲಿ ಕನ್ನಡಿಗರಿಗೆ ಇದೆಂಥಾ ಅವಮಾನ? ವಾಹನಕ್ಕೆ ಕನ್ನಡ ಬಾವುಟ, ನಟ ಪುನೀತ್ ಫೋಟೋ ಅಂಟಿಸಿಕೊಂಡವರಿಗೆ ಕೆಟ್ಟ ಅನುಭವ
Image
Ashwini Puneeth Rajkumar: ಡಾ.ರಾಜ್​ ಜನ್ಮದಿನ ಹಿನ್ನೆಲೆ; ಬಡಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಅಶ್ವಿನಿ ಪುನೀತ್
Image
‘ಜೇಮ್ಸ್​’ ಚಿತ್ರದಲ್ಲಿ ಅಪ್ಪು ವಾಯ್ಸ್ ರೀ-ಕ್ರಿಯೇಟ್​; ಶಾಕ್​ ಆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಇದನ್ನೂ ಓದಿ: ಡಾ.ರಾಜ್​ ಜನ್ಮದಿನ ಹಿನ್ನೆಲೆ; ಬಡಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ ಅಶ್ವಿನಿ ಪುನೀತ್

ಈ ಬಾರಿಯ ವಿಶೇಷ ಎಂದರೆ ಪುನೀತ್ ಅವರ ರೀತಿಯಲ್ಲೇ ಕಾಣುವ ಟ್ರೋಫಿ ಮಾಡಿಸಲಾಗಿದೆ. ಗೆದ್ದವರಿಗೆ ಈ ಟ್ರೋಫಿ ಸಿಗಲಿದೆ. ಈ ಕಾರಣಕ್ಕೂ ಈ ಗೆಲುವು ತುಂಬಾನೇ ವಿಶೇಷ ಆಗಿರಲಿದೆ. ಸದ್ಯ, ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಇದರ ಪ್ರೋಮೋ ಹಂಚಿಕೊಂಡಿದೆ. ಅಭಿಮಾನಿಗಳು ಪುನೀತ್ ಇಲ್ಲ ಎಂಬ ಬೇಸರವನ್ನು ಕಮೆಂಟ್​ ಸೆಕ್ಷನ್​ನಲ್ಲಿ ವ್ಯಕ್ತಪಡಿಸುತ್ತಿದ್ದಾರೆ. ಭಾನುವಾರ ಸಂಜೆ 6 ಗಂಟೆಗೆ ಫಿನಾಲೆ ಆರಂಭವಾಗಲಿದೆ. ಅಶ್ವಿನಿ ಪುನೀತ್​ರಾಜ್​ಕುಮಾರ್ ಅವರನ್ನು ಕಿರುತೆರೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು