AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ; ಪಬ್‌ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ

ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ; ಪಬ್‌ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ
ಕಿರಿಕ್ ಕೀರ್ತಿ
TV9 Web
| Edited By: |

Updated on:Dec 03, 2021 | 10:13 AM

Share

ಬಿಗ್​ ಬಾಸ್​ (Bigg Boss) ಖ್ಯಾತಿಯ ಕಿರಿಕ್​ ಕೀರ್ತಿ (Kirik Keerthi) ಮೇಲೆ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಸದಾಶಿವನಗರದ ಪಬ್‌ನಲ್ಲಿ ಈ ಘಟನೆ ನಡೆದಿದೆ. ಗುರುವಾರ (ಡಿ.2) ರಾತ್ರಿ ಸ್ನೇಹಿತರ ಜತೆ ಕಿರಿಕ್ ಕೀರ್ತಿ ಅವರು ಪಬ್‌ಗೆ ತೆರಳಿದ್ದರು. ಪಕ್ಕದ ಟೇಬಲ್‌ನಲ್ಲಿದ್ದ ವ್ಯಕ್ತಿಯೊಬ್ಬ ಕೀರ್ತಿ ಅವರ ಫೋಟೋ ಕ್ಲಿಕ್ಕಿಸಿದ್ದ. ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದ್ದಾರೆ. ಆ ಕಾರಣಕ್ಕೆ ಜಗಳ ಆರಂಭ ಆಯಿತು. ಫೋಟೋ ಕ್ಲಿಕ್ಕಿಸಿದ ವ್ಯಕ್ತಿ ಕ್ಷಮೆ ಕೇಳಿದ್ರೂ ಕೂಡ ಬಿಡದೇ ಕೀರ್ತಿ ಬೈಯ್ಯಲು ಶುರು ಮಾಡಿದ್ದರು. ಬಾಯಿಗೆ ಬಂದಂತೆ ಮಾತನಾಡಿದ್ದ ಕಿರಿಕ್ ಕೀರ್ತಿ ವರ್ತನೆಗೆ ಆ ವ್ಯಕ್ತಿ ರೋಸಿ ಹೋಗಿದ್ದ. ಫೋಟೋ ಕ್ಲಿಕ್ಕಿಸಿದವನ ಮೊಬೈಲ್​ ಕಸಿದುಕೊಳ್ಳಲು ಕೂಡ ಕೀರ್ತಿ ಪ್ರಯತ್ನಿದರು. ಇದರಿಂದ ಕೋಪಗೊಂಡ ಆ ವ್ಯಕ್ತಿಯು ಕಿರಿಕ್ ಕೀರ್ತಿಯ ತಲೆಗೆ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿದ್ದಾನೆ.

ಗುರುವಾರ ತಡರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆ ಮಾಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಕಿರುತೆರೆ ನಿರೂಪಕನಾಗಿ ಕಿರಿಕ್​ ಕೀರ್ತಿ ಗುರುತಿಸಿಕೊಂಡಿದ್ದಾರೆ. ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಆ ನಂತರ ಅವರು ಕೆಲವು ಸಿನಿಮಾಗಳಲ್ಲೂ ನಟಿಸಿದರು. ಸೋಶಿಯಲ್​ ಮೀಡಿಯಾದಲ್ಲೂ ಅವರನ್ನು ಅನೇಕರ ಫಾಲೋ ಮಾಡುತ್ತಾರೆ. ಕಿರಿಕ್​ ಕೀರ್ತಿ ಹೋದಲ್ಲಿ ಬಂದಲ್ಲಿ ಕೆಲವು ಅಭಿಮಾನಿಗಳು ಫೋಟೋಗಾಗಿ ಹಂಬಲಿಸುವುದು ಸಹಜ. ಸದಾಶಿವನಗರದ ಪಬ್​ನಲ್ಲಿ ಫೋಟೋ ತೆಗೆಯಲು ಬಂದು ವ್ಯಕ್ತಿ ಕೂಡ ಕಿರಿಕ್​ ಕೀರ್ತಿಯ ಅಭಿಮಾನಿ ಎನ್ನಲಾಗಿದೆ.

ಕಿರಿಕ್​ ಕೀರ್ತಿ ಮೇಲಿನ ಅಭಿಮಾನಕ್ಕಾಗಿ ಆತ ಫೋಟೋ ಕ್ಲಿಕ್ಕಿಸಿದ್ದಾನೆ. ಆದರೆ ಅದನ್ನು ಕೀರ್ತಿ ಸಹಿಸಿಲ್ಲ. ಫೋಟೋ ತೆಗೆದ ಅಭಿಮಾನಿಯ ವಿರುದ್ಧ ಅವರು ಕೋಪಗೊಂಡು ಮನಬಂದಂತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಕಾರಣಕ್ಕಾಗಿ ಆ ವ್ಯಕ್ತಿ ಹಲ್ಲೆ ಮಾಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ:

Marakkar Twitter Review: ‘ಇದು ಇನ್ನೊಂದು ಬಾಹುಬಲಿ’; ಮರಕ್ಕರ್​ ಚಿತ್ರ ನೋಡಿ ಮೆಚ್ಚಿಕೊಂಡ ಮೋಹನ್​ಲಾಲ್​ ಫ್ಯಾನ್ಸ್​​

ಮಾಸ್​ ಮದಗಜ: ವಿಶೇಷ ಸಂದರ್ಶನದಲ್ಲಿ ಶ್ರೀಮುರಳಿ, ಆಶಿಕಾ, ಗರುಡ ರಾಮ್​ ಮಸ್ತ್ ಮಾತುಕತೆ

Published On - 9:57 am, Fri, 3 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?