AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​

Srimathi Srinivas: ‘ಶ್ರೀಮತಿ ಶ್ರೀನಿವಾಸ್​’ ಸೀರಿಯಲ್​ ಶೂಟಿಂಗ್​ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚಂದನ್​ ಕುಮಾರ್​ ಮೇಲೆ ತಂತ್ರಜ್ಞರು ಹಲ್ಲೆ ಮಾಡಿದ ವಿಡಿಯೋ ವೈರಲ್​ ಆಗಿದೆ.

Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​
ಚಂದನ್​ ಮೇಲೆ ಹಲ್ಲೆ
TV9 Web
| Edited By: |

Updated on:Aug 01, 2022 | 3:01 PM

Share

ನಟ ಚಂದನ್​ ಕುಮಾರ್​ (Chandan Kumar) ಅವರು ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’ (Srimathi Srinivas) ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್ ​ಕುಮಾರ್​ ಅವರ ಮೇಲೆ ಹಲ್ಲೆ (Assault on Chandan Kumar) ಆಗಿದೆ. ಸೀರಿಯಲ್​ ತಂತ್ರಜ್ಞರ ಜೊತೆ ಚಂದನ್​ ಕಿರಿಕ್​ ಮಾಡಿಕೊಂಡಿದ್ದು ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ. ಈ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಘಟನೆ ನಡೆದು ಬಹಳ ದಿನಗಳಾಗಿದ್ದು, ಈಗ ಪ್ರಕರಣ ಬೆಳಕಿಗೆ ಬಂದಿದೆ.

ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎಂಬುದು ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಮೊದಲು ಚಂದನ್​ ಅವರಿಂದ ಕ್ಯಾಮೆರಾಮ್ಯಾನ್​ ಮೇಲೆ ಹಲ್ಲೆ ನಡೆಯಿತು. ಆ ಕಾರಣದಿಂದಲೇ ತಂತ್ರಜ್ಞರು ಚಂದನ್​ ವಿರುದ್ಧ ತಿರುಗಿ ಬಿದ್ದರು ಎಂದು ಹೇಳಲಾಗುತ್ತಿದೆ. ಬಳಿಕ ಚಂದನ್​ ಕ್ಷಮೆ ಕೇಳಿದರೂ ಕೂಡ ಅಲ್ಲಿದ್ದ ಯಾರೊಬ್ಬರೂ ಸಮಾಧಾನಗೊಂಡಿಲ್ಲ. ಪರಿಸ್ಥಿತಿ ಬಿಡಗಾಯಿಸಿದಾಗ ಕೈಕೈ ಮಿಲಾಯಿಸಿದ್ದಾರೆ.

ಹಲವು ವರ್ಷಗಳಿಂದ ಚಂದನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ ಎರಡೂ ಕ್ಷೇತ್ರದಲ್ಲಿ ಅವರು ಹೆಸರು ಗಳಿಸಿದ್ದಾರೆ. ಕನ್ನಡದ ‘ರಾಧಾ ಕಲ್ಯಾಣ’, ‘ಲಕ್ಷ್ಮೀ ಬಾರಮ್ಮ’ ಮುಂತಾದ ಧಾರಾವಾಹಿಯಿಂದ ಅವರು ಮನೆಮಾತಾಗಿದ್ದಾರೆ. ‘ಸಾವಿತ್ರಮ್ಮ ಗಾರಿ ಅಬ್ಬಾಯಿ’ ಮೂಲಕ ತೆಲುಗು ಕಿರುತೆರೆಗೂ ಚಂದನ್​ ಕುಮಾರ್​ ಎಂಟ್ರಿ ನೀಡಿದ್ದರು. ನಂತರ  ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿ ಒಪ್ಪಿಕೊಂಡರು. ಅದೇ ಸೀರಿಯಲ್​ ಸೆಟ್​ನಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ.

ಇದನ್ನೂ ಓದಿ
Image
ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್
Image
ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ
Image
Chandan – Kavitha: ಕವಿತಾ ಪ್ರೀತಿಗಾಗಿ ಮಧ್ಯರಾತ್ರಿ ಮನೆಗೆ ಹೋಗಿದ್ದ ಚಂದನ್​! ಆಗಲೇ ಮೂಡಿತ್ತು ಅನುಮಾನ
Image
Exclusive: ಮದುವೆಗಾಗಿ ಸೀರಿಯಲ್​ ಬಿಟ್ಟುಬಂದ ಚಂದನ್​! ಹುಡುಗಿ ಕವಿತಾನಾ ಅಂತ ಕೇಳಿದ್ದಕ್ಕೆ ಅವರು ಹೇಳಿದ್ದೇನು?

ಸೀರಿಯಲ್​ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲೂ ಚಂದನ್​ ಭಾಗಿ ಆಗಿದ್ದಾರೆ. ‘ಪ್ಯಾಟೆ ಮಂದಿ ಕಾಡಿಗ್​ ಬಂದ್ರು’, ‘ಬಿಗ್​ ಬಾಸ್​ ಕನ್ನಡ ಸೀಸನ್​ 3’ ಶೋಗಳಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಿತು. ‘ಲವ್​ ಯೂ ಆಲಿಯಾ’, ‘ಪ್ರೇಮ ಬರಹ’ ಮುಂತಾದ ಸಿನಿಮಾಗಳಲ್ಲಿ ಚಂದನ್​ ನಟಿಸಿದ್ದಾರೆ. ಕಿರುತೆರೆ ನಟಿ ಕವಿತಾ ಗೌಡ ಜೊತೆ ಅವರು 2021ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆ ಸಂದರ್ಭದಲ್ಲಿ ತೆಲುಗು ಸೀರಿಯಲ್​ನಿಂದ ಅವರು ಬ್ರೇಕ್​ ಪಡೆದುಕೊಂಡಿದ್ದರು.

Published On - 8:58 am, Mon, 1 August 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ