AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪನಿಂದನೆ ಮಾತ್ರ ನಿನಗೆ ಸಿಕ್ಕಿದ್ದು’; ಮಕ್ಕಳ ಕಳ್ಳಿ ಆರೋಪದ ಬಗ್ಗೆ ಮೋಕ್ಷಿತಾಗೆ ಪರೋಕ್ಷವಾಗಿ ಹೇಳಿದ್ರಾ ಗುರೂಜಿ?

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮೋಕ್ಷಿತಾ ಪೈ ಅವರ ಫೈನಲ್ ಪ್ರವೇಶವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅವರ ಹಿಂದಿನ ಮಕ್ಕಳ ಅಪಹರಣ ಪ್ರಕರಣವು ಮತ್ತೆ ಚರ್ಚೆಗೆ ಬಂದಿದೆ. ವಿದ್ಯಾಶಂಕರಾನಂದ ಸರಸ್ವತಿ ಅವರು ಮೋಕ್ಷಿತಾ ಅವರಿಗೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡಿದ್ದು ಮತ್ತು ಅವರ ಭವಿಷ್ಯದ ಬಗ್ಗೆ ಭವಿಷ್ಯವಾಣಿ ಮಾಡಿದ್ದು ಕೂಡ ಗಮನ ಸೆಳೆದಿದೆ.

‘ಅಪನಿಂದನೆ ಮಾತ್ರ ನಿನಗೆ ಸಿಕ್ಕಿದ್ದು’; ಮಕ್ಕಳ ಕಳ್ಳಿ ಆರೋಪದ ಬಗ್ಗೆ ಮೋಕ್ಷಿತಾಗೆ ಪರೋಕ್ಷವಾಗಿ ಹೇಳಿದ್ರಾ ಗುರೂಜಿ?
ಗುರೂಜಿ-ಮೋಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Jan 22, 2025 | 7:34 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೋಕ್ಷಿತಾ ಪೈ ಅವರು ಫಿನಾಲೆ ಸೇರಿದ್ದಾರೆ. ಮೋಕ್ಷಿತಾ ಅವರು ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡವರು. ಈಗ ಮೋಕ್ಷಿತಾ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರು ಮಕ್ಕಳನ್ನು ಕದ್ದು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮುನ್ನೆಲೆಗೆ ಬಂದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ದೊಡ್ಮನೆಯಲ್ಲಿ ಈ ವಿಚಾರ ಪರೋಕ್ಷವಾಗಿ ಚರ್ಚೆಗೆ ಬಂದಿತೇ ಎನ್ನುವ ಪ್ರಶ್ನೆ ಮೂಡಿದೆ.

ಮೋಕ್ಷಿತಾ ಅವರು ಟ್ಯೂಷನ್ ಹೇಳಿಕೊಡುವಾಗ ಮಗುವನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ವಿಚಾರ ಚರ್ಚೆಯ ಕೇಂದ್ರ ಬಿಂದು ಆಗಿತ್ತು. ಇದನ್ನು ಕೆಲವರು ಒಪ್ಪಿದರೆ, ಇನ್ನೂ ಕೆಲವರು ಅಲ್ಲಗಳೆದಿದ್ದಾರೆ. ಅಲ್ಲಿ ಆ ರೀತಿ ಆಗಿಯೇ ಇರಲಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಮೋಕ್ಷಿತಾ ಅವರೇ ಉತ್ತರ ನೀಡಬೇಕಿದೆ. ಹೀಗಿರುವಾಗಲೇ ದೊಡ್ಮನೆಗೆ ಬಂದಿರೋ ವಿದ್ಯಾಶಂಕರಾನಂದ ಸರಸ್ವತಿ ಅವರು ಮೋಕ್ಷಿತಾ ಮುಖವನ್ನು ನೋಡಿ ಸಾಕಷ್ಟು ವಿಚಾರ ಹೇಳಿದ್ದಾರೆ.

‘ಏನಾದರೂ ಕೇಳೋದಿದ್ದರೆ ಕೇಳಿ’ ಎಂದು ವಿದ್ಯಾಶಂಕರಾನಂದ ಸರಸ್ವತಿ ಕೇಳಿದರು. ಆದರೆ, ‘ಕೇಳೋಕೆ ಏನೂ ಇಲ್ಲ’ ಎಂದರು ಮೋಕ್ಷಿತಾ. ‘ನೋವು, ಅಪನಿಂದನೆ, ಅವಮಾನ ಇದೇ ಅಲ್ಲವ ನಿನಗೆ ಇಷ್ಟು ದಿನ ಸಿಕ್ಕಿದ್ದು’ ಎಂದು ಮೋಕ್ಷಿತಾಗೆ ಗುರೂಜಿ ಕೇಳಿದರು. ಮೋಕ್ಷಿತಾ ಮೌನದಿಂದ ಇದ್ದು ಹೌದೆಂಬಂತೆ ಸಮ್ಮತಿಸಿದರು. ಗುರೂಜಿ ‘ಅಪನಂಬಿಕೆ’ ಎಂಬ ಶಬ್ದವನ್ನು ಒತ್ತಿ ಹೇಳಿದ್ದನ್ನು ಅನೇಕರು ಗಮನಿಸಿದ್ದಾರೆ.

ಇದನ್ನೂ ಓದಿ:  ‘ಈಗ ಶನಿ ದಶ, ಪ್ರೀತಿ-ಮೋಹವೇ ಅಪಾಯ’; ಭವ್ಯಾ ಬಗ್ಗೆ ಗುರೂಜಿ ಭವಿಷ್ಯ

‘ಇಷ್ಟು ದಿನ ಹುಡುಕಿದ್ದು ಸಿಕ್ಕಿಲ್ಲ. 2025 ತುಂಬಾ ಚೆನ್ನಾಗಿದೆ. ಈ ವರ್ಷ ಆಗಸ್ಟ್ ಬಳಿಕ ನಿನಗೆ ಮದುವೆ ಆಗುತ್ತದೆ. ಸ್ವಲ್ಪ ಹೆಚ್ಚು ಕಮ್ಮಿ ಆದರೂ ಸಾಕಷ್ಟು ಹೊಡೆತ ಬೀಳುತ್ತದೆ. ಯೋಗ ಹಾಗೂ ಯೋಗ್ಯತೆ ಎರಡೂ ಚೆನ್ನಾಗಿರಬೇಕು. ಇದನ್ನು ಅರ್ಥ ಮಾಡಿಕೊಂಡಿದ್ದೀಯಾ, ಇನ್ನಷ್ಟು ಅರ್ಥ ಮಾಡಿಕೊಳ್ಳಬೇಕಿದೆ. ಕರಿಯರ್ ಚೆನ್ನಾಗಿ ಆಗುತ್ತದೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ