AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪನಿಂದನೆ ಮಾತ್ರ ನಿನಗೆ ಸಿಕ್ಕಿದ್ದು’; ಮಕ್ಕಳ ಕಳ್ಳಿ ಆರೋಪದ ಬಗ್ಗೆ ಮೋಕ್ಷಿತಾಗೆ ಪರೋಕ್ಷವಾಗಿ ಹೇಳಿದ್ರಾ ಗುರೂಜಿ?

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮೋಕ್ಷಿತಾ ಪೈ ಅವರ ಫೈನಲ್ ಪ್ರವೇಶವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅವರ ಹಿಂದಿನ ಮಕ್ಕಳ ಅಪಹರಣ ಪ್ರಕರಣವು ಮತ್ತೆ ಚರ್ಚೆಗೆ ಬಂದಿದೆ. ವಿದ್ಯಾಶಂಕರಾನಂದ ಸರಸ್ವತಿ ಅವರು ಮೋಕ್ಷಿತಾ ಅವರಿಗೆ ಆಧ್ಯಾತ್ಮಿಕ ಮಾರ್ಗದರ್ಶನ ನೀಡಿದ್ದು ಮತ್ತು ಅವರ ಭವಿಷ್ಯದ ಬಗ್ಗೆ ಭವಿಷ್ಯವಾಣಿ ಮಾಡಿದ್ದು ಕೂಡ ಗಮನ ಸೆಳೆದಿದೆ.

‘ಅಪನಿಂದನೆ ಮಾತ್ರ ನಿನಗೆ ಸಿಕ್ಕಿದ್ದು’; ಮಕ್ಕಳ ಕಳ್ಳಿ ಆರೋಪದ ಬಗ್ಗೆ ಮೋಕ್ಷಿತಾಗೆ ಪರೋಕ್ಷವಾಗಿ ಹೇಳಿದ್ರಾ ಗುರೂಜಿ?
ಗುರೂಜಿ-ಮೋಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Jan 22, 2025 | 7:34 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೋಕ್ಷಿತಾ ಪೈ ಅವರು ಫಿನಾಲೆ ಸೇರಿದ್ದಾರೆ. ಮೋಕ್ಷಿತಾ ಅವರು ಜೀವನದಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡವರು. ಈಗ ಮೋಕ್ಷಿತಾ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅವರು ಮಕ್ಕಳನ್ನು ಕದ್ದು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮುನ್ನೆಲೆಗೆ ಬಂದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ದೊಡ್ಮನೆಯಲ್ಲಿ ಈ ವಿಚಾರ ಪರೋಕ್ಷವಾಗಿ ಚರ್ಚೆಗೆ ಬಂದಿತೇ ಎನ್ನುವ ಪ್ರಶ್ನೆ ಮೂಡಿದೆ.

ಮೋಕ್ಷಿತಾ ಅವರು ಟ್ಯೂಷನ್ ಹೇಳಿಕೊಡುವಾಗ ಮಗುವನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ವಿಚಾರ ಚರ್ಚೆಯ ಕೇಂದ್ರ ಬಿಂದು ಆಗಿತ್ತು. ಇದನ್ನು ಕೆಲವರು ಒಪ್ಪಿದರೆ, ಇನ್ನೂ ಕೆಲವರು ಅಲ್ಲಗಳೆದಿದ್ದಾರೆ. ಅಲ್ಲಿ ಆ ರೀತಿ ಆಗಿಯೇ ಇರಲಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಮೋಕ್ಷಿತಾ ಅವರೇ ಉತ್ತರ ನೀಡಬೇಕಿದೆ. ಹೀಗಿರುವಾಗಲೇ ದೊಡ್ಮನೆಗೆ ಬಂದಿರೋ ವಿದ್ಯಾಶಂಕರಾನಂದ ಸರಸ್ವತಿ ಅವರು ಮೋಕ್ಷಿತಾ ಮುಖವನ್ನು ನೋಡಿ ಸಾಕಷ್ಟು ವಿಚಾರ ಹೇಳಿದ್ದಾರೆ.

‘ಏನಾದರೂ ಕೇಳೋದಿದ್ದರೆ ಕೇಳಿ’ ಎಂದು ವಿದ್ಯಾಶಂಕರಾನಂದ ಸರಸ್ವತಿ ಕೇಳಿದರು. ಆದರೆ, ‘ಕೇಳೋಕೆ ಏನೂ ಇಲ್ಲ’ ಎಂದರು ಮೋಕ್ಷಿತಾ. ‘ನೋವು, ಅಪನಿಂದನೆ, ಅವಮಾನ ಇದೇ ಅಲ್ಲವ ನಿನಗೆ ಇಷ್ಟು ದಿನ ಸಿಕ್ಕಿದ್ದು’ ಎಂದು ಮೋಕ್ಷಿತಾಗೆ ಗುರೂಜಿ ಕೇಳಿದರು. ಮೋಕ್ಷಿತಾ ಮೌನದಿಂದ ಇದ್ದು ಹೌದೆಂಬಂತೆ ಸಮ್ಮತಿಸಿದರು. ಗುರೂಜಿ ‘ಅಪನಂಬಿಕೆ’ ಎಂಬ ಶಬ್ದವನ್ನು ಒತ್ತಿ ಹೇಳಿದ್ದನ್ನು ಅನೇಕರು ಗಮನಿಸಿದ್ದಾರೆ.

ಇದನ್ನೂ ಓದಿ:  ‘ಈಗ ಶನಿ ದಶ, ಪ್ರೀತಿ-ಮೋಹವೇ ಅಪಾಯ’; ಭವ್ಯಾ ಬಗ್ಗೆ ಗುರೂಜಿ ಭವಿಷ್ಯ

‘ಇಷ್ಟು ದಿನ ಹುಡುಕಿದ್ದು ಸಿಕ್ಕಿಲ್ಲ. 2025 ತುಂಬಾ ಚೆನ್ನಾಗಿದೆ. ಈ ವರ್ಷ ಆಗಸ್ಟ್ ಬಳಿಕ ನಿನಗೆ ಮದುವೆ ಆಗುತ್ತದೆ. ಸ್ವಲ್ಪ ಹೆಚ್ಚು ಕಮ್ಮಿ ಆದರೂ ಸಾಕಷ್ಟು ಹೊಡೆತ ಬೀಳುತ್ತದೆ. ಯೋಗ ಹಾಗೂ ಯೋಗ್ಯತೆ ಎರಡೂ ಚೆನ್ನಾಗಿರಬೇಕು. ಇದನ್ನು ಅರ್ಥ ಮಾಡಿಕೊಂಡಿದ್ದೀಯಾ, ಇನ್ನಷ್ಟು ಅರ್ಥ ಮಾಡಿಕೊಳ್ಳಬೇಕಿದೆ. ಕರಿಯರ್ ಚೆನ್ನಾಗಿ ಆಗುತ್ತದೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್