AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್​ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆಯ ಬಡ ಯುವಕ

Kaun Banega Crorepati: ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್​ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾರೆ.

ಕೌನ್ ಬನೇಗಾ ಕರೋಡ್​ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆಯ ಬಡ ಯುವಕ
Ramzan
ಮಂಜುನಾಥ ಸಿ.
|

Updated on: Jan 11, 2025 | 4:53 PM

Share

ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೇ ಕರ್ನಾಟಕದ ಬಾಗಲಕೋಟೆಯವನು.

ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್​ಜಾನ್ ಮಲಿಕ್ ಬಾಬ್ ಫೀರಜಾದೆ, ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಬಲು ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದ ವರೆಗೆ ಏರಿದ ಅವರು ಒಂದರ ಮೇಲೊಂದು ಪ್ರಶ್ನೆಗಳಿಗೆ ಉತ್ತರ ನೀಡುತ್ತಾ, 50 ಲಕ್ಷ ರೂಪಾಯಿ ಗೆದ್ದು ಬಂದಿದ್ದಾರೆ.

ಯುವಕ ರಮ್​ಜಾನ್ ಮಲ್ಲಿಕ್ ಅವರ ತಂದೆ ಮಹಾಲಿಂಗಪುರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ರಮ್​ಜಾನ್ ಸಹ ತಂದೆಗೆ ಸಹಾಯ ಮಾಡುತ್ತಿದ್ದರು. ಬಡ ಕುಟುಂಬವಾದ್ದರಿಂದ ಕುಟುಂಬಕ್ಕೆ ಸಹಾಯ ಮಾಡಲು ಚಹಾ ಅಂಗಡಿಯಲ್ಲಿ ಲೊಟ ತೊಳೆಯುವ ಕೆಲಸ. ಬ್ಯಾಡ್​ಮಿಂಟನ್ ಕೋರ್ಟ್​ನ ವಾಚ್​ಮ್ಯಾನ್ ಹೀಗೆ ಹಲವು ರೀತಿಯ ಚಿಕ್ಕ ಪುಟ್ಟ ಕೆಲಸ ಮಾಡುತ್ತಾ ಬಿಎ ಮುಗಿಸಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಹೀಗಿರುವಾಗ ಕೌನ್ ಬನೇಗಾ ಕರೋಡ್​ಪತಿಗೆ ಅರ್ಜಿ ಹಾಕಿದ್ದ ರಮ್​ಜಾನ್​ಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರಕಿದೆ.

ಇದನ್ನೂ ಓದಿ:ಯಶ್ ಹಾದಿಯಲ್ಲಿ ಅನಿಲ್ ಕಪೂರ್, ಶಾರುಖ್, ಅಜಯ್, ಅಮಿತಾಬ್ ಬಚ್ಚನ್​ಗೂ ಮಾದರಿ

ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡಿರುವ ರಮ್​ಜಾನ್, ರಿಯಾಲಿಟಿ ಶೋನಲ್ಲಿ ಅದ್ಭುತವಾಗಿ ಆಡಿ, ಅಮಿತಾಬ್ ಬಚ್ಚನ್ ಕೇಳಿದ ಬಹುತೇಕ ಎಲ್ಲ ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಅಸಲಿಗೆ ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ್ದರೆ ಒಂದು ಕೋಟಿ ರೂಪಾಯಿ ಹಣ ಸಿಕ್ಕಿರುತ್ತಿತ್ತು. ಆದರೆ ಆ ಪ್ರಶ್ನೆಯ ಉತ್ತರದ ಮೇಲೆ ಅನುಮಾನ ಇದ್ದ ಕಾರಣ ರಮ್​ಜಾನ್ ಅವರು ಆಟದಿಂದ ನಿವೃತ್ತಿ ಹೊಂದಿ 50 ಲಕ್ಷ ರೂಪಾಯಿ ಹಣವನ್ನು ಗೆದ್ದು ಬೀಗಿದ್ದಾರೆ.

ಕೌನ್ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಗೆದ್ದು ಬಂದ ರಮ್​ಜಾನ್ ಅವರನ್ನು ಊರ ಜನ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಹಾರ ತುರಾಯಿ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ರಮ್​ಜಾನ್, ಕೌನ್ ಬನೇಗಾ ಕರೋಡ್​ಪತಿಯಲ್ಲಿ ಗೆದ್ದು ‘ಸ್ಲಂ ಡಾಗ್ ಮಿಲೇನಿಯರ್’ ಕತೆಯನ್ನು ನಿಜ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್