AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tukali Santhosh: ಈ 5 ಕಾರಣದಿಂದಲೇ ತುಕಾಲಿ ಸಂತೋಷ್​ಗೆ ಮಿಸ್​ ಆಯ್ತು ಬಿಗ್ ಬಾಸ್​ ಟ್ರೋಫಿ

ಆರು ಫೈನಲಿಸ್ಟ್​ಗಳಲ್ಲಿ ಮೊದಲು ಎಲಿಮಿನೇಟ್​ ಆಗುವುದು ತುಕಾಲಿ ಸಂತೋಷ್​ ಅವರೇ ಎಂದು ಬಹುತೇಕರು ಊಹಿಸಿದ್ದರು. ಫಿನಾಲೆಯಲ್ಲಿ ವೀಕ್ಷಕರಾಗಿ ಬಂದಿದ್ದ ಮಾಜಿ ಸ್ಪರ್ಧಿಗಳ ಅಭಿಪ್ರಾಯ ಕೂಡ ಅದೇ ಆಗಿತ್ತು. ಕಡೆಗೂ ಅದು ನಿಜವಾಯಿತು. 6 ಫೈನಲಿಸ್ಟ್​ಗಳ ಪೈಕಿ ಕಡಿಮೆ ವೋಟ್​ ಪಡೆದ ತುಕಾಲಿ ಸಂತೋಷ್​ ಎಲಿಮಿನೇಟ್​ ಆದರು. ಅವರು ಔಟ್​ ಆಗಲು ಕಾರಣ ಏನು?

Tukali Santhosh: ಈ 5 ಕಾರಣದಿಂದಲೇ ತುಕಾಲಿ ಸಂತೋಷ್​ಗೆ ಮಿಸ್​ ಆಯ್ತು ಬಿಗ್ ಬಾಸ್​ ಟ್ರೋಫಿ
ತುಕಾಲಿ ಸಂತೋಷ್​
ಮದನ್​ ಕುಮಾರ್​
|

Updated on: Jan 28, 2024 | 7:17 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನ ಫಿನಾಲೆಯ (BBK 10 Finale) ಮೊದಲ ಸಂಚಿಕೆ ಜನವರಿ 27ರಂದು ಪ್ರಸಾರ ಆಗಿದೆ. ಕೊನೆಯಲ್ಲಿ ಉಳಿದುಕೊಂಡ 6 ಫೈನಲಿಸ್ಟ್​ಗಳ ಪೈಕಿ ತುಕಾಲಿ ಸಂತೋಷ್​ (Tukali Santhosh) ಅವರು ಔಟ್​ ಆಗಿದ್ದಾರೆ. ಅವರು ಎಮಿಲಿನೇಟ್​ ಆಗಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ‘ನಿಮ್ಮ ಬಿಗ್​ ಬಾಸ್​ ಪಯಣ ಇಲ್ಲಿಗೆ ಅಂತ್ಯ’ ಎಂದು ಹೇಳಿದಾಗ ತುಕಾಲಿ ಸಂತೋಷ್​ ಅವರು ಹೆಚ್ಚೇನೋ ಬೇಸರ ಮಾಡಿಕೊಳ್ಳಲಿಲ್ಲ. ನಗುನಗುತ್ತಲೇ ಅವರು ದೊಡ್ಮನೆ ತೊರೆದಿದ್ದಾರೆ. ಅಷ್ಟಕ್ಕೂ ಈ ಜರ್ನಿಯಲ್ಲಿ ಅವರು ಮಾಡಿದ ತಪ್ಪು ಏನು? ಫಿನಾಲೆ (Bigg Boss Kannada Finale) ತನಕ ಬಂದವರು ಟ್ರೋಫಿ ಗೆಲ್ಲಲು ಯಾಕೆ ಸಾಧ್ಯವಾಗಲಿಲ್ಲ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

ಆರು ಫೈನಲಿಸ್ಟ್​ಗಳಲ್ಲಿ ಮೊದಲು ಎಲಿಮಿನೇಟ್​ ಆಗುವುದು ತುಕಾಲಿ ಸಂತೋಷ್​ ಅವರೇ ಎಂದು ಬಹುತೇಕರು ಊಹಿಸಿದ್ದರು. ಫಿನಾಲೆಯಲ್ಲಿ ವೀಕ್ಷಕರಾಗಿ ಬಂದಿದ್ದ ಮಾಜಿ ಸ್ಪರ್ಧಿಗಳ ಅಭಿಪ್ರಾಯವನ್ನು ಸುದೀಪ್​ ಕೇಳಿದಾಗ ಬಹುತೇಕರಿಂದ ತುಕಾಲಿ ಸಂತೋಷ್​ ಅವರ ಹೆಸರೇ ಕೇಳಿಬಂದಿತ್ತು. ಕಡೆಗೂ ಆ ಊಹೆ ನಿಜವಾಯಿತು. 6 ಫೈನಲಿಸ್ಟ್​ಗಳ ಪೈಕಿ ಕಡಿಮೆ ವೋಟ್​ ಪಡೆದ ತುಕಾಲಿ ಸಂತೋಷ್​ ಎಲಿಮಿನೇಟ್​ ಆದರು.

ಕಾರಣ 1: ಮಂಕಾದ ಕಾಮಿಡಿ

ತುಕಾಲಿ ಸಂತೋಷ್​ ಅವರಿಗೂ ಬಿಗ್​ ಬಾಸ್​ ಟ್ರೋಫಿ ಗೆಲ್ಲುವ ಸಾಮರ್ಥ್ಯ ಇತ್ತು. ಆದರೆ ಅವರು ಸರಿಯಾಗಿ ಬಳಕೆ ಮಾಡಿಕೊಳ್ಳಲಿಲ್ಲ ಎನ್ನಬಹುದು. ಬಿಗ್​ ಬಾಸ್​ಗೆ ಶೋಗೆ ಬರುವುದಕ್ಕೂ ಮೊದಲು ಕಿರುತೆರೆಯ ಕಾಮಿಡಿ ಶೋಗಳ ಮೂಲಕ ಜನರಿಗೆ ಅವರ ಪರಿಚಯ ಆಗಿತ್ತು. ತಮ್ಮ ಶಕ್ತಿಯೇ ಕಾಮಿಡಿ ಎಂಬುದನ್ನು ಸಂತೋಷ್​ ಅವರು ಹೆಚ್ಚು ಅರ್ಥ ಮಾಡಿಕೊಳ್ಳಲಿಲ್ಲ. ಆಗೊಮ್ಮೆ ಈಗೊಮ್ಮೆ ಮಾತ್ರ ನಗಿಸುತ್ತಿದ್ದರು. ಉಳಿದ ಸಮಯದಲ್ಲಿ ಸುಮ್ಮನಿರುತ್ತಿದ್ದರು. ಅವರಿಗೆ ಕಡಿಮೆ ವೋಟ್​ ಬರಲು ಇದು ಪ್ರಮುಖ ಕಾರಣ.

ಕಾರಣ 2: ಮಾತು-ಮಾತು

ಬಿಗ್ ಬಾಸ್​ ಮನೆಯಲ್ಲಿ ಪ್ರತಿ ಮಾತಿಗೂ ಮಹತ್ವ ಇರುತ್ತದೆ. ಹಾಗಂತ ಬರೀ ಮಾತನಾಡಿಕೊಂಡೇ ಕಾಲ ಕಳೆದರೆ ಅದಕ್ಕೆ ಅರ್ಥ ಸಿಗುವುದಿಲ್ಲ. ಬಿಗ್​ ಬಾಸ್​ ಆಟದಲ್ಲಿ ತುಕಾಲಿ ಸಂತೋಷ್​ ಅವರು ಮಾತಿನ ಕಾರಣದಿಂದಲೇ ಸ್ವಲ್ಪ ಅಪಖ್ಯಾತಿ ಪಡೆದರು. ವರ್ತೂರು ಸಂತೋಷ್​ ಜೊತೆ ಸೇರಿ, ಬೀನ್​ ಬ್ಯಾಗ್​ ಮೇಲೆ ಕುಳಿತು ಗಂಟೆಗಟ್ಟಲೆ ಮಾತನಾಡಿದರು.

ಇದನ್ನೂ ಓದಿ: ‘ಯಾವನದ್ದೋ ಜತೆ ಓಡಿ ಹೋಗಿದ್ದಾಳೆ’: ಹೆಂಡತಿಯ ಅವಾಂತರ ವಿವರಿಸಿದ ತುಕಾಲಿ ಸಂತೋಷ್​

ಕಾರಣ 3: ಬರೀ ಗಾಸಿಪ್​

ತುಕಾಲಿ ಸಂತೋಷ್​ ಅವರು ಬಿಗ್ ಬಾಸ್​ ಮನೆಯಲ್ಲಿ ಗಾಸಿಪ್​ ಮಾಡುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಬೀನ್​ ಬ್ಯಾಗ್​ ಮೇಲೆ ಕುಳಿತು ಬೇರೆಯವರ ವಿಷಯವನ್ನೇ ಅವರು ಹೆಚ್ಚಾಗಿ ಮಾತನಾಡುತ್ತಿದ್ದರು. ಅವರಿಗೆ ವರ್ತೂರು ಸಂತೋಷ್​ ಸಾಥ್​ ನೀಡುತ್ತಿದ್ದರು. ಅವರಿವರ ಬಗ್ಗೆ ಮಾತನಾಡುತ್ತಾ, ತಮ್ಮ ಆಟದ ಕಡೆಗೆ ಅವರು ಹೆಚ್ಚು ಗಮನ ನೀಡಲಿಲ್ಲ.

ಕಾರಣ 4: ಸ್ನೇಹ-ಜಗಳ

ಬಿಗ್​ ಬಾಸ್​ ಶೋನಲ್ಲಿ ತುಕಾಲಿ ಸಂತೋಷ್​ ಅವರು ಎಲ್ಲರ ಜೊತೆ ಬೆರೆತಿದ್ದು ಕಡಿಮೆ. ಅದೇ ಕಾರಣಕ್ಕೋ ಏನೋ ಮನೆಯ ಹಲವು ಸದಸ್ಯರು ಅವರನ್ನು ಫೇಕ್​ ಎಂದು ಕರೆದರು. ಅವರು ಸ್ನೇಹ ಮಾಡಿದ್ದು ವರ್ತೂರು ಸಂತೋಷ್​ ಜೊತೆ ಮಾತ್ರ. ಇನ್ನುಳಿದ ಸದಸ್ಯರ ಜೊತೆ ಅವರು ಅಂತರ ಕಾಯ್ದುಕೊಂಡಿದ್ದರು. ಸಂಗೀತಾ ಶೃಂಗೇರಿ ಜೊತೆ ಅವರ ಸ್ನೇಹ ಬೆಳೆಯಲೇ ಇಲ್ಲ.

ಕಾರಣ 5: ಪ್ರಚಾರ ಕಡಿಮೆ

ಜನರಿಂದ ವೋಟ್​ ಪಡೆಯಲು ದೊಡ್ಮನೆ ಒಳಗಿನ ಆಟ ಎಷ್ಟು ಮುಖ್ಯವೋ, ಮನೆ ಹೊರಗಿನ ಪ್ರಚಾರ ಕೂಡ ಅಷ್ಟೇ ಮುಖ್ಯ. ಈ ವಿಚಾರದಲ್ಲಿ ತುಕಾಲಿ ಸಂತೋಷ್​ ಹಿಂದುಳಿದರು. ಇತರೆ ಸ್ಪರ್ಧಿಗಳು ಸೋಶಿಯಲ್​ ಮೀಡಿಯಾವನ್ನು ಚೆನ್ನಾಗಿ ಬಳಸಿಕೊಂಡರು. ತಮ್ಮ ಆಪ್ತರ ಮೂಲಕ ಸೋಶಿಯಲ್​ ಮೀಡಿಯಾ ಖಾತೆಯನ್ನು ಹ್ಯಾಂಡಲ್​ ಮಾಡಿಸಿ ಪ್ರತಿ ದಿನ ಪ್ರಚಾರ ಪಡೆಯುತ್ತಿದ್ದರು. ಆದರೆ ತುಕಾಲಿ ಸಂತೋಷ್​ ಅವರ ಸೋಶಿಯಲ್​ ಮೀಡಿಯಾ ಖಾತೆ ಹೆಚ್ಚು ಆ್ಯಕ್ಟೀವ್​ ಆಗಿ ಇರಲಿಲ್ಲ. ಇದು ಕೂಡ ಅವರ ಜನಪ್ರಿಯತೆ ಕುಗ್ಗಲು ಕಾರಣ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ