AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕನ್ನಡದ ಮೇಲೆ ಮೈಕೆಲ್​ ಹೊಂದಿರುವ ಪ್ರೀತಿಗೆ ಈ ಘಟನೆ ಸಾಕ್ಷಿ; ಸುದೀಪ್ ಕೂಡ ಫಿದಾ

ತಮಗೆ ಹೆಚ್ಚು ಕನ್ನಡ ಬರುವುದಿಲ್ಲ ಎಂಬುದನ್ನೇ ನೆಪವಾಗಿಸಿಕೊಂಡು ಮೈಕೆಲ್​ ಅಜಯ್​ ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದರೆ ನಡೆಯುತ್ತಿತ್ತು. ಆದರೂ ಮೈಕೆಲ್​ ಆ ರೀತಿ ಮಾಡಿಲ್ಲ. ಅತಿ ಕಷ್ಟದ ಸಂದರ್ಭದಲ್ಲೂ ಕೂಡ ಅವರು ಕನ್ನಡಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ಈ ಕಾರಣದಿಂದ ಅವರಿಗೆ ಈ ವಾರ ಕಿಚ್ಚನ ಚಪ್ಪಾಳೆ ಸಿಕ್ಕಿದೆ.

Bigg Boss Kannada: ಕನ್ನಡದ ಮೇಲೆ ಮೈಕೆಲ್​ ಹೊಂದಿರುವ ಪ್ರೀತಿಗೆ ಈ ಘಟನೆ ಸಾಕ್ಷಿ; ಸುದೀಪ್ ಕೂಡ ಫಿದಾ
ಮೈಕೆಲ್​ ಅಜಯ್​
ಮದನ್​ ಕುಮಾರ್​
|

Updated on: Nov 26, 2023 | 8:38 AM

Share

ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿರುವ ಮೈಕೆಲ್​ ಅಜಯ್​ (Michael Ajay) ಅವರು ಕನ್ನಡಿಗನಾದರೂ ಅವರು ಹುಟ್ಟಿ ಬೆಳೆದಿದ್ದು ನೈಜೀರಿಯಾದಲ್ಲಿ. ಹಾಗಾಗಿ ಅವರಿಗೆ ಅಷ್ಟೇನೂ ಚೆನ್ನಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಹಾಗಿದ್ದರೂ ಕೂಡ ಅವರು ಕನ್ನಡ (Kannada Language) ಕಲಿತು ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣದಿಂದ ಅವರು ಎಲ್ಲರ ಪ್ರಶಂಸೆಗೆ ಪಾತ್ರರಾಗುತ್ತಿದ್ದಾರೆ. ಕನ್ನಡದ ಮೇಲೆ ಮೈಕೆಲ್​ ಅಜಯ್​ ಇಟ್ಟುಕೊಂಡಿರುವ ಪ್ರೀತಿಗೆ ಕಿಚ್ಚ ಸುದೀಪ್ ಕೂಡ ಫಿದಾ ಆಗಿದ್ದಾರೆ. 7ನೇ ವೀಕೆಂಡ್​ ಸಂಚಿಕೆಯಲ್ಲಿ ಸುದೀಪ್​ ಅವರು ಈ ಕುರಿತು ಮಾತನಾಡಿದ್ದಾರೆ. ಕನ್ನಡ ಕಲಿಯಲು ಮನಸಾರೆ ಶ್ರಮಿಸುತ್ತಿರುವ ಮೈಕೆಲ್​ ಅಜಯ್​ ಅವರಿಗೆ ಈ ವಾರದ ಕಿಚ್ಚನ ಚಪ್ಪಾಳೆ (Kichchana Chappale) ಸಿಕ್ಕಿದೆ. ಅತಿಯಾಗಿ ಇಂಗ್ಲಿಷ್​ ಮಾತನಾಡುವ ಇತರೆ ಸ್ಪರ್ಧಿಗಳಿಗೆ ಸುದೀಪ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಮೈಕೆಲ್​ ಅಜಯ್​ ಅವರು ಬಿಗ್​ ಬಾಸ್​ಗೆ ಎಂಟ್ರಿ ನೀಡುವಾಗ ಕೂಡ ಕನ್ನಡದ ಬಗ್ಗೆ ಮಾತನಾಡಿದ್ದರು. ‘ನನಗೆ ಅವಕಾಶ ಕೊಟ್ಟರೆ ನಿಮಗೆಲ್ಲರಿಗೂ ಒಂದು ಡಿಫರೆಂಟ್​ ಕನ್ನಡ ಸಿಗುತ್ತದೆ’ ಎಂದು ಅವರು ಹೇಳಿದ್ದರು. ಕೊಟ್ಟ ಮಾತಿನಂತೆಯೇ ಅವರು ಕನ್ನಡ ಕಲಿಯುವಲ್ಲಿ ಶ್ರಮಪಡುತ್ತಿದ್ದಾರೆ. ಅದು ಕಿಚ್ಚ ಸುದೀಪ್​ ಅವರ ಗಮನ ಸೆಳೆದಿದೆ. ಕರ್ನಾಟಕದಲ್ಲಿ ಹುಟ್ಟಿ ಬೆಳೆದವರೇ ಇಂಗ್ಲಿಷ್​ ವ್ಯಾಮೋಹವನ್ನು ಅತಿಯಾಗಿ ಅಂಟಿಸಿಕೊಂಡಿರುವಾಗ ಮೈಕೆಲ್​ ಅಜಯ್​ ಅವರು ಎಲ್ಲ ಮಾತಿನಲ್ಲೂ ಕನ್ನಡ ಬಳಸಲು ಪ್ರಯತ್ನಿಸುತ್ತಿರುವುದು ವೀಕ್ಷಕರ ಮೆಚ್ಚುಗೆಗೆ ಕಾರಣ ಆಗಿದೆ.

ಇದನ್ನೂ ಓದಿ: BBK 10: ಬಿಗ್​ ಬಾಸ್​ ಮನೆಯಲ್ಲಿ ಅತಿಯಾಗಿ ಇಂಗ್ಲಿಷ್​ ಮಾತಾಡುವ ಮಂದಿಗೆ ಕಿಚ್ಚ ಸುದೀಪ್​ ಕ್ಲಾಸ್​

ತಮಗೆ ಹೆಚ್ಚು ಕನ್ನಡ ಬರುವುದಿಲ್ಲ ಎಂಬುದನ್ನೇ ನೆಪವಾಗಿಸಿಕೊಂಡು ಮೈಕೆಲ್​ ಅಜಯ್​ ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದರೆ ನಡೆಯುತ್ತಿತ್ತು. ಆದರೆ ಮೈಕೆಲ್​ ಆ ರೀತಿ ಮಾಡಿಲ್ಲ. ಅತಿ ಕಷ್ಟದ ಸಂದರ್ಭದಲ್ಲೂ ಕೂಡ ಅವರು ಕನ್ನಡಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ‘ಅವಕಾಶವಾದಿ’ ಎಂಬ ಪದವನ್ನು ಕೂಡ ಅವರು ಕಲಿತುಕೊಂಡು ಬಳಕೆ ಮಾಡಿದ್ದಾರೆ. ಇದು ಸುದೀಪ್​ ಅವರಿಗೆ ಹೆಚ್ಚು ಇಷ್ಟ ಆಯಿತು. ಕನ್ನಡದ ಮೇಲೆ ಮೈಕೆಲ್​ ಎಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಆಯಿತು. ಈ ಎಲ್ಲ ಕಾರಣದಿಂದ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿತು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನೈಜೀರಿಯಾ ಕನ್ನಡಿಗ ಮೈಕೆಲ್​ ಅಜಯ್​; ಏನು ಇವರ ಹಿನ್ನೆಲೆ?

ಶನಿವಾರದ (ನವೆಂಬರ್​ 25) ಸಂಚಿಕೆಯಲ್ಲಿ ಮೈಕೆಲ್ ಅಜಯ್​ ಅವರಿಗೆ ಕಿಚ್ಚ ಸುದೀಪ್​​ ಅವರು ‘ಕಂಗ್ರ್ಯಾಜುಲೇಷನ್​’ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಮೈಕೆಲ್​ ಅಜಯ್​ ಅವರು ಕನ್ನಡದಲ್ಲಿಯೇ ‘ಧನ್ಯವಾದಗಳು ಸರ್​’ ಎಂದರು. ಇದು ಸುದೀಪ್​ ಅವರ ಮನ ಮುಟ್ಟಿತು. ಒಂದಷ್ಟು ಜನರಿಗೆ ಮೈಕೆಲ್​ ಆಟ ಇಷ್ಟ ಆಗುತ್ತಿದೆ. ಈಶಾನಿ ಹೊರಗೆ ಹೋದ ಬಳಿಕ ಮೈಕೆಲ್​ ಹೆಚ್ಚು ಚುರುಕಾಗಿದ್ದಾರೆ. ಅವರು ಫಿನಾಲೆ ತನಕ ಪೈಪೋಟಿ ನೀಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು. ‘ಜಿಯೋ ಸಿನಿಮಾ’ದಲ್ಲಿ ಈ ಶೋ ಉಚಿತವಾಗಿ 24 ಗಂಟೆಯೂ ಪ್ರಸಾರ ಆಗುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ರಾತ್ರಿ 9.30ಕ್ಕೆ ಎಪಿಸೋಡ್​ ಬಿತ್ತರ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?