AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಕನ್ನಡದ ಮೇಲೆ ಮೈಕೆಲ್​ ಹೊಂದಿರುವ ಪ್ರೀತಿಗೆ ಈ ಘಟನೆ ಸಾಕ್ಷಿ; ಸುದೀಪ್ ಕೂಡ ಫಿದಾ

ತಮಗೆ ಹೆಚ್ಚು ಕನ್ನಡ ಬರುವುದಿಲ್ಲ ಎಂಬುದನ್ನೇ ನೆಪವಾಗಿಸಿಕೊಂಡು ಮೈಕೆಲ್​ ಅಜಯ್​ ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದರೆ ನಡೆಯುತ್ತಿತ್ತು. ಆದರೂ ಮೈಕೆಲ್​ ಆ ರೀತಿ ಮಾಡಿಲ್ಲ. ಅತಿ ಕಷ್ಟದ ಸಂದರ್ಭದಲ್ಲೂ ಕೂಡ ಅವರು ಕನ್ನಡಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ಈ ಕಾರಣದಿಂದ ಅವರಿಗೆ ಈ ವಾರ ಕಿಚ್ಚನ ಚಪ್ಪಾಳೆ ಸಿಕ್ಕಿದೆ.

Bigg Boss Kannada: ಕನ್ನಡದ ಮೇಲೆ ಮೈಕೆಲ್​ ಹೊಂದಿರುವ ಪ್ರೀತಿಗೆ ಈ ಘಟನೆ ಸಾಕ್ಷಿ; ಸುದೀಪ್ ಕೂಡ ಫಿದಾ
ಮೈಕೆಲ್​ ಅಜಯ್​
ಮದನ್​ ಕುಮಾರ್​
|

Updated on: Nov 26, 2023 | 8:38 AM

Share

ಬಿಗ್ ಬಾಸ್​ನಲ್ಲಿ ಸ್ಪರ್ಧಿಸುತ್ತಿರುವ ಮೈಕೆಲ್​ ಅಜಯ್​ (Michael Ajay) ಅವರು ಕನ್ನಡಿಗನಾದರೂ ಅವರು ಹುಟ್ಟಿ ಬೆಳೆದಿದ್ದು ನೈಜೀರಿಯಾದಲ್ಲಿ. ಹಾಗಾಗಿ ಅವರಿಗೆ ಅಷ್ಟೇನೂ ಚೆನ್ನಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಹಾಗಿದ್ದರೂ ಕೂಡ ಅವರು ಕನ್ನಡ (Kannada Language) ಕಲಿತು ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಆ ಕಾರಣದಿಂದ ಅವರು ಎಲ್ಲರ ಪ್ರಶಂಸೆಗೆ ಪಾತ್ರರಾಗುತ್ತಿದ್ದಾರೆ. ಕನ್ನಡದ ಮೇಲೆ ಮೈಕೆಲ್​ ಅಜಯ್​ ಇಟ್ಟುಕೊಂಡಿರುವ ಪ್ರೀತಿಗೆ ಕಿಚ್ಚ ಸುದೀಪ್ ಕೂಡ ಫಿದಾ ಆಗಿದ್ದಾರೆ. 7ನೇ ವೀಕೆಂಡ್​ ಸಂಚಿಕೆಯಲ್ಲಿ ಸುದೀಪ್​ ಅವರು ಈ ಕುರಿತು ಮಾತನಾಡಿದ್ದಾರೆ. ಕನ್ನಡ ಕಲಿಯಲು ಮನಸಾರೆ ಶ್ರಮಿಸುತ್ತಿರುವ ಮೈಕೆಲ್​ ಅಜಯ್​ ಅವರಿಗೆ ಈ ವಾರದ ಕಿಚ್ಚನ ಚಪ್ಪಾಳೆ (Kichchana Chappale) ಸಿಕ್ಕಿದೆ. ಅತಿಯಾಗಿ ಇಂಗ್ಲಿಷ್​ ಮಾತನಾಡುವ ಇತರೆ ಸ್ಪರ್ಧಿಗಳಿಗೆ ಸುದೀಪ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಮೈಕೆಲ್​ ಅಜಯ್​ ಅವರು ಬಿಗ್​ ಬಾಸ್​ಗೆ ಎಂಟ್ರಿ ನೀಡುವಾಗ ಕೂಡ ಕನ್ನಡದ ಬಗ್ಗೆ ಮಾತನಾಡಿದ್ದರು. ‘ನನಗೆ ಅವಕಾಶ ಕೊಟ್ಟರೆ ನಿಮಗೆಲ್ಲರಿಗೂ ಒಂದು ಡಿಫರೆಂಟ್​ ಕನ್ನಡ ಸಿಗುತ್ತದೆ’ ಎಂದು ಅವರು ಹೇಳಿದ್ದರು. ಕೊಟ್ಟ ಮಾತಿನಂತೆಯೇ ಅವರು ಕನ್ನಡ ಕಲಿಯುವಲ್ಲಿ ಶ್ರಮಪಡುತ್ತಿದ್ದಾರೆ. ಅದು ಕಿಚ್ಚ ಸುದೀಪ್​ ಅವರ ಗಮನ ಸೆಳೆದಿದೆ. ಕರ್ನಾಟಕದಲ್ಲಿ ಹುಟ್ಟಿ ಬೆಳೆದವರೇ ಇಂಗ್ಲಿಷ್​ ವ್ಯಾಮೋಹವನ್ನು ಅತಿಯಾಗಿ ಅಂಟಿಸಿಕೊಂಡಿರುವಾಗ ಮೈಕೆಲ್​ ಅಜಯ್​ ಅವರು ಎಲ್ಲ ಮಾತಿನಲ್ಲೂ ಕನ್ನಡ ಬಳಸಲು ಪ್ರಯತ್ನಿಸುತ್ತಿರುವುದು ವೀಕ್ಷಕರ ಮೆಚ್ಚುಗೆಗೆ ಕಾರಣ ಆಗಿದೆ.

ಇದನ್ನೂ ಓದಿ: BBK 10: ಬಿಗ್​ ಬಾಸ್​ ಮನೆಯಲ್ಲಿ ಅತಿಯಾಗಿ ಇಂಗ್ಲಿಷ್​ ಮಾತಾಡುವ ಮಂದಿಗೆ ಕಿಚ್ಚ ಸುದೀಪ್​ ಕ್ಲಾಸ್​

ತಮಗೆ ಹೆಚ್ಚು ಕನ್ನಡ ಬರುವುದಿಲ್ಲ ಎಂಬುದನ್ನೇ ನೆಪವಾಗಿಸಿಕೊಂಡು ಮೈಕೆಲ್​ ಅಜಯ್​ ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದರೆ ನಡೆಯುತ್ತಿತ್ತು. ಆದರೆ ಮೈಕೆಲ್​ ಆ ರೀತಿ ಮಾಡಿಲ್ಲ. ಅತಿ ಕಷ್ಟದ ಸಂದರ್ಭದಲ್ಲೂ ಕೂಡ ಅವರು ಕನ್ನಡಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ‘ಅವಕಾಶವಾದಿ’ ಎಂಬ ಪದವನ್ನು ಕೂಡ ಅವರು ಕಲಿತುಕೊಂಡು ಬಳಕೆ ಮಾಡಿದ್ದಾರೆ. ಇದು ಸುದೀಪ್​ ಅವರಿಗೆ ಹೆಚ್ಚು ಇಷ್ಟ ಆಯಿತು. ಕನ್ನಡದ ಮೇಲೆ ಮೈಕೆಲ್​ ಎಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಆಯಿತು. ಈ ಎಲ್ಲ ಕಾರಣದಿಂದ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿತು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ನೈಜೀರಿಯಾ ಕನ್ನಡಿಗ ಮೈಕೆಲ್​ ಅಜಯ್​; ಏನು ಇವರ ಹಿನ್ನೆಲೆ?

ಶನಿವಾರದ (ನವೆಂಬರ್​ 25) ಸಂಚಿಕೆಯಲ್ಲಿ ಮೈಕೆಲ್ ಅಜಯ್​ ಅವರಿಗೆ ಕಿಚ್ಚ ಸುದೀಪ್​​ ಅವರು ‘ಕಂಗ್ರ್ಯಾಜುಲೇಷನ್​’ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಮೈಕೆಲ್​ ಅಜಯ್​ ಅವರು ಕನ್ನಡದಲ್ಲಿಯೇ ‘ಧನ್ಯವಾದಗಳು ಸರ್​’ ಎಂದರು. ಇದು ಸುದೀಪ್​ ಅವರ ಮನ ಮುಟ್ಟಿತು. ಒಂದಷ್ಟು ಜನರಿಗೆ ಮೈಕೆಲ್​ ಆಟ ಇಷ್ಟ ಆಗುತ್ತಿದೆ. ಈಶಾನಿ ಹೊರಗೆ ಹೋದ ಬಳಿಕ ಮೈಕೆಲ್​ ಹೆಚ್ಚು ಚುರುಕಾಗಿದ್ದಾರೆ. ಅವರು ಫಿನಾಲೆ ತನಕ ಪೈಪೋಟಿ ನೀಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು. ‘ಜಿಯೋ ಸಿನಿಮಾ’ದಲ್ಲಿ ಈ ಶೋ ಉಚಿತವಾಗಿ 24 ಗಂಟೆಯೂ ಪ್ರಸಾರ ಆಗುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ರಾತ್ರಿ 9.30ಕ್ಕೆ ಎಪಿಸೋಡ್​ ಬಿತ್ತರ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?