AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಸಂತೋಷ್​ ಪರವಾಗಿ ತುಕಾಲಿ ಸಂತೋಷ್​ ನಿಂತುಕೊಂಡಿದ್ದು ಯಾಕೆ?

ಒಂದು ಹಂತದಲ್ಲಿ ವರ್ತೂರು ಸಂತೋಷ್​ ಅವರು ಬಿಗ್​ ಬಾಸ್​ ಆಟವನ್ನು ಅರ್ಧಕ್ಕೆ ತೊರೆಯುವ ನಿರ್ಧಾರ ಮಾಡಿದ್ದರು. ಹೊರಗೆ ಹೋಗಲೇಬೇಕು ಎಂದು ಕಣ್ಣೀರು ಹಾಕಿದ್ದರು. ಅಂಥ ಸಂದರ್ಭದಲ್ಲಿ ಅವರಿಗೆ ಧೈರ್ಯ ತುಂಬಿದವರು ತುಕಾಲಿ ಸಂತೋಷ್​. ತಾವು ವರ್ತೂರು ಸಂತೋಷ್​ ಪರವಾಗಿ ನಿಂತಿದ್ದು ಯಾಕೆ ಎಂಬುದನ್ನು ಅವರೀಗ ವಿವರಿಸಿದ್ದಾರೆ.

ವರ್ತೂರು ಸಂತೋಷ್​ ಪರವಾಗಿ ತುಕಾಲಿ ಸಂತೋಷ್​ ನಿಂತುಕೊಂಡಿದ್ದು ಯಾಕೆ?
ತುಕಾಲಿ ಸಂತೋಷ್, ವರ್ತೂರು ಸಂತೋಷ್​
ಮದನ್​ ಕುಮಾರ್​
|

Updated on: Jan 29, 2024 | 9:36 PM

Share

ಬಿಗ್​ ಬಾಸ್​ ಮನೆಯೊಳಗೆ ಕಾಲಿಡುವುದಕ್ಕೂ ಮೊದಲು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ (Tukali Santhosh)​ ನಡುವೆ ಸ್ನೇಹ ಇರಲಿಲ್ಲ. ಆದರೆ ದೊಡ್ಮನೆಯೊಳಗೆ ಅವರು ಆತ್ಮೀಯ ಸ್ನೇಹಿತರಾದರು. ಇಬ್ಬರೂ ಜೊತೆಯಾಗಿ ಫಿನಾಲೆ ತನಕ ಪೈಪೋಟಿ ನೀಡಿದರು ಎಂಬುದು ಗಮನಾರ್ಹ ಸಂಗತಿ. ಜನವರಿ 28ರಂದು ಬಿಗ್​ ಬಾಸ್​ (BBK 10) ಫಿನಾಲೆ ನಡೆಯಿತು. ಅಂತಿಮವಾಗಿ ಕಾರ್ತಿಕ್​ ಮಹೇಶ್​ ಟ್ರೋಫಿ ಗೆದ್ದರು. ತುಕಾಲಿ ಸಂತೋಷ್​ 5ನೇ ರನ್ನರ್​ಅಪ್​ ಹಾಗೂ ವರ್ತೂರು ಸಂತೋಷ್​ (Varthur Santhosh) 4ನೇ ರನ್ನರ್​ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಶೋ ಮುಗಿದ ಬಳಿಕ ‘ಟಿವಿ 9 ಕನ್ನಡ’ದ ಜೊತೆ ಮಾತನಾಡಿದ ತುಕಾಲಿ ಸಂತೋಷ್​ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಒಂದು ಹಂತದಲ್ಲಿ ವರ್ತೂರು ಸಂತೋಷ್​ ಅವರು ಬಿಗ್​ ಬಾಸ್​ ಆಟವನ್ನು ಅರ್ಧಕ್ಕೆ ತೊರೆಯುವ ನಿರ್ಧಾರ ಮಾಡಿದ್ದರು. ಹೊರಗೆ ಹೋಗಲೇಬೇಕು ಎಂದು ಕಣ್ಣೀರು ಹಾಕಿದ್ದರು. ಅಂಥ ಸಂದರ್ಭದಲ್ಲಿ ಅವರಿಗೆ ಧೈರ್ಯ ತುಂಬಿದವರು ತುಕಾಲಿ ಸಂತೋಷ್​. ಅಷ್ಟಕ್ಕೂ ತುಕಾಲಿ ಸಂತೋಷ್​ ಅವರು ವರ್ತೂರು ಪರವಾಗಿ ನಿಂತಿದ್ದು ಯಾಕೆ ಎಂಬುದನ್ನು ಅವರೀಗ ವಿವರಿಸಿದ್ದಾರೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

‘ವರ್ತೂರು ಸಂತೋಷ್​ ಅವರದ್ದು ಮುಗ್ಧ ಮನಸ್ಸು. ಎಲ್ಲರಿಗೂ ಬೆಂಬಲ ನೀಡುವಂಥ ವ್ಯಕ್ತಿತ್ವ. ಯಾರ ಜೊತೆಗೂ ಬೇಸರ ಮಾಡಿಕೊಳ್ಳಲ್ಲ. ಅಂಥ ವ್ಯಕ್ತಿ ನನ್ನ ಫ್ರೆಂಡ್​. ನನ್ನಿಂದ ಅವರು ಏನೂ ನಿರೀಕ್ಷೆ ಮಾಡಿಲ್ಲ. ಅವರು ಅರ್ಧಕ್ಕೆ ಮನೆ ಬಿಟ್ಟು ಹೋಗುತ್ತೇನೆ ಎಂದಾಗ ಬೇಸರ ಆಯ್ತು. ಅಂಥ ಸ್ನೇಹವನ್ನು ಬಿಟ್ಟುಕೊಡಲು ನನಗೆ ಆಗಲ್ಲ. ರೈತರ ಪರವಾಗಿ ಬಂದಿದ್ದಾರೆ. ಚೆನ್ನಾಗಿ ಆಡುತ್ತಿದ್ದಾರೆ. ಈ ಶೋ ಮೂಲಕ ರೈತರಿಗೆ ಒಂದಷ್ಟು ವಿಷಯ ತಿಳಿಸಲಿ. ಕೊನೆವರೆಗೂ ಉಳಿದುಕೊಳ್ಳಲಿ ಎಂಬುದು ನನ್ನ ಆಸೆಯಾಗಿತ್ತು’ ಎಂದು ತುಕಾಲಿ ಸಂತೋಷ್​ ಹೇಳಿದ್ದಾರೆ.

‘ನಮ್ಮ ಅಣ್ಣ ಟಾಪ್​ 3 ಅಥವಾ ಟಾಪ್​ 2 ಸ್ಥಾನದಲ್ಲಿ ಇರುತ್ತಾರೆ ಎಂದುಕೊಂಡೆ. ಅದು ಆಗಲಿಲ್ಲ. ಏನಾಯ್ತೋ ಏನೋ. ಐದನೆಯವನಾಗಿ ನೀನು ಹೋಗು, ಆರನೆಯವನಾಗಿ ಅವನು ಹೋಗಲಿ ಅಂತ ದೇವರ ತಥಾಸ್ತು ಎಂದಿರಬಹುದು. ಅವರು ಹೊರಬಂದಾಗ ಕಣ್ಣೀರು ತಡೆಯೋಕೆ ಆಗಲಿಲ್ಲ. ಮನಸ್ಸಿನಲ್ಲಿ ನೋವು ಇಟ್ಟುಕೊಂಡು ಆಡುವುದು ಸುಲಭವಲ್ಲ. ಹಾಗಾಗಿ ಆರಂಭದಲ್ಲಿ ವರ್ತೂರು ಸಂತೋಷ್​ ಚೆನ್ನಾಗಿ ಆಟವಾಡಲು ಸಾಧ್ಯವಾಗಿರಲಿಲ್ಲ’ ಎಂದು ತುಕಾಲಿ ಸಂತೋಷ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?