AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 11 Elimination: ಎಲಿಮಿನೇಷನ್ ವಿಷಯ ತಿಳಿದ ಕೂಡಲೇ ಅಳುತ್ತಾ ಕುಸಿದು ಕುಳಿತ ಐಶ್ವರ್ಯಾ

ಪ್ರತಿ ಭಾನುವಾರ ಬಂದರೆ ಬಿಗ್ ಬಾಸ್ ಸ್ಪರ್ಧಿಗಳ ಎದೆಯಲ್ಲಿ ಢವಢವ ಶುರು ಆಗುತ್ತದೆ. ಈ ವಾರ ಐಶ್ವರ್ಯಾ ಸಿಂಧೋಗಿ ಮತ್ತು ಚೈತ್ರಾ ಕುಂದಾಪುರ ಅವರು ಡೇಂಜರ್​ ಝೋನ್ ತಲುಪಿದ್ದರು. ಎಲಿಮಿನೇಷನ್​ ಪ್ರಕ್ರಿಯೆ ಬಗ್ಗೆ ಐಶ್ವರ್ಯಾ ಸಿಂಧೋಗಿ ಅವರಿಗೆ ಅಸಲಿ ವಿಚಾರ ತಿಳಿದಾಗ ಅವರು ಕಣ್ಣೀರು ಹಾಕುತ್ತಾ ಅಲ್ಲಿಯೇ ಕುಸಿದು ಕುಳಿತುಕೊಂಡರು.

BBK 11 Elimination: ಎಲಿಮಿನೇಷನ್ ವಿಷಯ ತಿಳಿದ ಕೂಡಲೇ ಅಳುತ್ತಾ ಕುಸಿದು ಕುಳಿತ ಐಶ್ವರ್ಯಾ
ಐಶ್ವರ್ಯಾ ಸಿಂಧೋಗಿ
ಮದನ್​ ಕುಮಾರ್​
|

Updated on: Dec 08, 2024 | 11:19 PM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ 70 ದಿನಗಳು ಕಳೆದಿವೆ. ದಿನದಿಂದ ದಿನಕ್ಕೆ ಆಟದ ರೋಚಕತೆ ಹೆಚ್ಚಾಗುತ್ತಿದೆ. ಪ್ರತಿ ಸಂಡೇ ಒಬ್ಬರು ಎಲಿಮಿನೇಟ್ ಆಗುತ್ತಾರೆ. ಆದರೆ ಕೆಲವು ವಾರ ವಿನಾಯಿತಿ ಇರುತ್ತದೆ. ಈ ವಾರ (ಡಿಸೆಂಬರ್​ 8) ಕೂಡ ಯಾರೂ ಎಲಿಮಿನೇಟ್ ಆಗಿಲ್ಲ. ಆದರೆ ಈ ವಿಚಾರವನ್ನು ಬಿಗ್ ಬಾಸ್​ ಮನೆಯೊಳಗಿನ ಸದಸ್ಯರಿಗೆ ಇನ್ನೂ ತಿಳಿಸಿಲ್ಲ. ನಾಮಿನೇಷನ್ ಆಗಿದ್ದವರ ಪೈಕಿ ಈ ವಾರ ಚೈತ್ರಾ ಕುಂದಾಪುರ ಮತ್ತು ಐಶ್ವರ್ಯಾ ಸಿಂಧೋಗಿ ಅವರು ಡೇಂಜರ್​ ಜೋನ್ ತಲುಪಿದ್ದರು. ಆದರೆ ಕೊನೇ ಕ್ಷಣದಲ್ಲಿ ಐಶ್ವರ್ಯಾ ಅವರಿಗೆ ಒಂದು ಟ್ವಿಸ್ಟ್​ ನೀಡಲಾಯಿತು.

ಈ ವಾರ ಎಲಿಮಿನೇಷನ್ ಪ್ರಕ್ರಿಯೆ ಸ್ವಲ್ಪ ಬೇರೆ ರೀತಿ ಇರಲಿದೆ ಎಂದು ಕಿಚ್ಚ ಸುದೀಪ್ ಅವರು ತಿಳಿಸಿದರು. ಡೇಂಜರ್​ ಜೋನ್​ನಲ್ಲಿ ಇರುವ ಚೈತ್ರಾ ಕುಂದಾಪುರ ಅವರು ಕನ್ಫೆಷನ್​ ರೂಮ್​ಗೆ ಬರಬೇಕು. ಐಶ್ವರ್ಯಾ ಸಿಂಧೋಗಿ ಅವರು ಆ್ಯಕ್ಟಿವಿಟಿ ಏರಿಯಾಗೆ ಬರಬೇಕು ಎಂದು ಆದೇಶಿಸಲಾಯಿತು. ಟೆನ್ಷನ್​ ಮಾಡಿಕೊಂಡ ಐಶ್ವರ್ಯಾ ಅವರು ಆ್ಯಕ್ಟಿವಿಟಿ ಏರಿಯಾದಲ್ಲಿ ಬಂದು ನಿಂತುಕೊಂಡರು.

ಇನ್ನೇನು ತಾವು ಎಲಿಮಿನೇಟ್​ ಆಗಬಹುದು ಎಂದುಕೊಂಡಿದ್ದ ಐಶ್ವರ್ಯಾ ಅವರಿಗೆ ಕೊನೇ ಹಂತದಲ್ಲಿ ಸರ್ಪ್ರೈಸ್​ ಸಿಕ್ಕಿತು. ‘ವಾಪಸ್ ಹೋಗಿ ಆಟ ಆಡಿ’ ಎಂದು ಕಿಚ್ಚ ಸುದೀಪ್ ಅವರು ಹೇಳಿದರು. ಆ ಮಾತು ಕೇಳಿ ಐಶ್ವರ್ಯಾ ಅವರಿಗೆ ನಂಬಲು ಸಾಧ್ಯವಾಗಲಿಲ್ಲ. ಕೂಡಲೇ ಅವರು ಅಳಲು ಆರಂಭಿಸಿದರು. ನಿಂತಲ್ಲೇ ಅವರು ಕುಸಿದರು. ಬಳಿಕ ಕುಳಿತುಕೊಂಡು ಕಣ್ಣೀರು ಹಾಕಿದರು. ವಾಪಸ್ ಅವರು ಬಿಗ್ ಬಾಸ್​ ಮನೆಯ ಒಳಗೆ ಬಂದಾಗ ಎಲ್ಲರಿಗೂ ಅಚ್ಚರಿ ಆಯಿತು.

ಚೈತ್ರಾ ಕುಂದಾಪುರ ಎಲಿಮಿನೇಟ್​ ಆಗಿದ್ದಾರೆ ಎಂದೇ ಬಹುತೇಕರು ಭಾವಿಸಿದ್ದಾರೆ. ಸದ್ಯಕ್ಕೆ ಅವರನ್ನು ಕನ್ಫೆಷನ್​ ರೂಮ್​ನಲ್ಲಿ ಇರಿಸಲಾಗಿದೆ. ಅಸಲಿ ವಿಷಯ ಏನೆಂದರೆ, ಈ ವಾರ ಎಲಿಮಿನೇಷನ್ ಇಲ್ಲ. ಓಟಿಂಗ್ ಲೈನ್ಸ್ ಓಪನ್ ಆಗಿರಲಿಲ್ಲ. ಜನರ ವೋಟಿಂಗ್ ಬಂದಿದ್ದು ಟಾಸ್ಕ್​ಗೆ ಮಾತ್ರ. ಹಾಗಾಗಿ ಚೈತ್ರಾ ಕೂಡ ವಾಪಸ್ ಮನೆಯ ಒಳಗೆ ಹೋಗಲಿದ್ದಾರೆ. ಆದರೆ ಆ ವಿಷಯನ್ನು ಸೋಮವಾರದ (ಡಿ.9) ಸಂಚಿಕೆಯಲ್ಲಿ ತೋರಿಸಲಾಗುವುದು.

ಇದನ್ನೂ ಓದಿ: ದಿನದಿನಕ್ಕೂ ಚೈತ್ರಾಗೆ ಹುಚ್ಚು ಜಾಸ್ತಿ ಆಗುತ್ತಿದೆ: ಮುಲಾಜಿಲ್ಲದೇ ಹೇಳಿದ ರಜತ್​

ಸದ್ಯಕ್ಕೆ ಚೈತ್ರಾ ಕುಂದಾಪುರ ಅವರು ಕನ್ಫೆಷನ್​ ರೂಮ್​ನಲ್ಲಿ ಕುಳಿತು ಎಲ್ಲವನ್ನೂ ನೋಡುತ್ತಿದ್ದಾರೆ. ಕೆಲವರು ಒಂದು ನಿಮಿಷ ಕೂಡ ಚೈತ್ರಾ ಅವರನ್ನು ನೆನಪಿಸಿಕೊಳ್ಳತ್ತಿಲ್ಲ. ಆ ವಿಚಾರ ತಿಳಿದ ಚೈತ್ರಾ ಅವರಿಗೆ ಬೇಸರ ಆಗಿದೆ. ಕೆಲವರು ಮಾತ್ರ ಚೈತ್ರಾ ಬಗ್ಗೆ ಮಾತನಾಡುತ್ತಿದರು. ‘ಕನಿಷ್ಠ ಇಷ್ಟು ಜನರಾದರೂ ಮಿಸ್ ಮಾಡಿಕೊಳ್ಳುವ ಹಾಗೆ ನಾನು ಬದುಕಿದ್ದೇನಲ್ಲ’ ಎಂದು ಚೈತ್ರಾ ಅವರು ಎಮೋಷನಲ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು