Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನಿಗೆ ಬಂಪರ್ ಚಾನ್ಸ್; ಬಿಗ್ ಬಾಸ್ ಮುಗಿಯುವುದಕ್ಕೂ ಮೊದಲೇ ಹೊಸ ಶೋ ಅವಕಾಶ

ಸಿಂಗರ್ ಹನುಮಂತ ಅವರು ಈಗಾಗಲೇ ಹಲವು ರಿಯಾಲಿಟಿ ಶೋಗಳಲ್ಲಿ ಮಿಂಚಿದ್ದಾರೆ. ಅವರಿಗೆ ಸಖತ್ ಜನಪ್ರಿಯತೆ ಇದೆ. ಅವರನ್ನು ಕಂಡರೆ ಇಷ್ಟಪಡುವ ಅಭಿಮಾನಿ ಬಳಗ ದೊಡ್ಡದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಬಂದ ಬಳಿಕ ಅವರ ಜನಪ್ರಿಯತೆ ಜಾಸ್ತಿ ಆಯಿತು. ಈಗ ಅವರಿಗೆ ಇನ್ನೊಂದು ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ.

ಹನುಮಂತನಿಗೆ ಬಂಪರ್ ಚಾನ್ಸ್; ಬಿಗ್ ಬಾಸ್ ಮುಗಿಯುವುದಕ್ಕೂ ಮೊದಲೇ ಹೊಸ ಶೋ ಅವಕಾಶ
Bhavya Gowda, Hanumantha, Rajath
Follow us
ಮದನ್​ ಕುಮಾರ್​
|

Updated on: Jan 25, 2025 | 7:08 PM

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ ಮುಗಿದ ಬಳಿಕ ‘ಬಾಯ್ಸ್ ವರ್ಸಸ್ ಗರ್ಲ್ಸ್​’ ಕಾರ್ಯಕ್ರಮ ಶುರುವಾಗಲಿದೆ. ಈ ಕಾರ್ಯಕ್ರಮದಲ್ಲಿ ಯಾರೆಲ್ಲ ಸ್ಪರ್ಧಿಸಲಿದ್ದಾರೆ ಎಂಬುದು ಈಗಾಗಲೇ ಬಹಿರಂಗ ಆಗಿದೆ. ವಿಶೇಷ ಏನೆಂದರೆ, ಹನುಮಂತ ಅವರು ಹೊಸದಾಗಿ ಈ ಶೋಗೆ ಸೇರ್ಪಡೆ ಆಗಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಫೈನಲಿಸ್ಟ್​ ಆಗಿರುವ ಅವರಿಗೆ ಇದು ಹೊಸ ಅವಕಾಶ. ಬಿಗ್ ಬಾಸ್ ಮುಗಿಯುವುದಕ್ಕೂ ಮುನ್ನವೇ ಇಂಥ ಚಾನ್ಸ್ ಸಿಕ್ಕಿದ್ದಕ್ಕೆ ಅವರಿಗೆ ಖುಷಿ ಆಗಿದೆ.

ಹನುಮಂತ ಅವರ ವ್ಯಕ್ತಿತ್ವ ತುಂಬ ಡಿಫರೆಂಟ್. ಹಳ್ಳಿಯಿಂದ ಬಂದಿರುವ ಅವರು ತುಂಬ ಸಿಂಪಲ್. ಬಣ್ಣದ ಲೋಕದಲ್ಲಿ ಇದ್ದರೂ ಕೂಡ ಅವರೂ ಬಣ್ಣ ಬದಲಿಸುವುದಿಲ್ಲ. ನೇರ ನಡೆ-ನಡಿಯ ಕಾರಣಕ್ಕೆ ಅವರು ಎಲ್ಲರಿಗೂ ಇಷ್ಟ ಆಗಿದ್ದಾರೆ. ಆದ್ದರಿಂದಲೇ ಅವರಿಗೆ ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಂದ ಮೆಚ್ಚುಗೆ ಸಿಕ್ಕಿತು. ಈಗ ‘ಬಾಯ್ಸ್​ ವರ್ಸಸ್ ಗರ್ಲ್ಸ್​’ ಶೋನಲ್ಲಿ ಅವರು ಯಾವ ರೀತಿ ಮನರಂಜನೆ ನೀಡುತ್ತಾರೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಬಿಗ್ ಬಾಸ್ ಮನೆಗೆ ಹನುಮಂತ ಬಂದಿದ್ದು ವೈಲ್ಡ್ ಕಾರ್ಡ್​ ಸ್ಪರ್ಧಿಯಾಗಿ. ಅವರು ಬಂದ ಬಳಿಕ ಶೋ ಸ್ವರೂಪ ಬದಲಾಗಿದ್ದು ನಿಜ. ಮುಗ್ಧತೆಯ ಕಾರಣದಿಂದ ಹನುಮಂತ ಅವರು ಗಮನ ಸೆಳೆದರು. ಕೊಟ್ಟಮಾತಿಗೆ ಅವರು ಎಂದಿಗೂ ತಪ್ಪಿಲ್ಲ. ಯಾರ ಜೊತೆ ಎಷ್ಟೇ ಸ್ನೇಹ ಇದ್ದರೂ ಕೂಡ ಅವರು ಆಟದಲ್ಲಿ ಪಕ್ಷಪಾತ ಮಾಡಿಲ್ಲ. ಹಾಗಾಗಿ ಅವರಿಗೆ ಫ್ಯಾನ್ಸ್ ಸಂಖ್ಯೆ ಹೆಚ್ಚಾಯಿತು.

ಇದನ್ನೂ ಓದಿ: ಸುದೀಪ್ ಇಲ್ಲದ ಬಿಗ್​ ಬಾಸ್ ಊಹಿಸೋಕೆ ಆಗಲ್ಲ; ಮುಂದಿನ ಆಯ್ಕೆ ಏನು?

ಫೆಬ್ರವರಿ 1ರಿಂದ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಕಾರ್ಯಕ್ರಮ ಶುರುವಾಗಲಿದೆ. ಶೀರ್ಷಿಕೆಯೇ ಹೇಳುವಂತೆ ಹೆಣ್ಮಕ್ಕಳು ಮತ್ತು ಗಂಡ್ಮಕ್ಕಳ ನಡುವೆ ನಡೆಯುವ ಜಿದ್ದಾಜಿದ್ದಿಯೇ ಈ ಕಾರ್ಯಕ್ರಮದ ಹೈಲೈಟ್. ಹನುಮಂತನ ಜೊತೆ ನಿವೇದಿತಾ ಗೌಡ, ಪಾವಗಡ ಮಂಜು, ಐಶ್ವರ್ಯಾ ಸಿಂಧೋಗಿ, ರಜತ್, ಭವ್ಯಾ ಗೌಡ ಮುಂತಾದವರು ‘ಬಾಯ್ಸ್ ವರ್ಸಸ್ ಗರ್ಲ್ಸ್’ ಭಾಗವಹಿಸಲಿದ್ದಾರೆ. ಈ ರಿಯಾಲಿಟಿ ಶೋ ನೋಡಲು ವೀಕ್ಷಕರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ