Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಆಸ್ಪತ್ರೆಗೆ ದಾಖಲಾಗಿದೆ. ಹಾಸ್ಪಿಟಲ್ ಬೆಡ್​ನಲ್ಲಿ ಮಲಗಿರುವ ಅವರ ಫೋಟೋ ಲಭ್ಯವಾಗಿದೆ. ಹಾಗಾದರೆ ಗೋಲ್ಡ್ ಸುರೇಶ್ ಅವರಿಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು? ಸದ್ಯ ಅವರ ಪರಿಸ್ಥಿತಿ ಹೇಗಿದೆ? ಈ ಬಗ್ಗೆ ಇಲ್ಲಿದೆ ಮಾಹಿತಿ..

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್
Gold Suresh
Follow us
ಮದನ್​ ಕುಮಾರ್​
|

Updated on: Feb 03, 2025 | 6:52 PM

ಉತ್ತರ ಕರ್ನಾಟದ ಗೋಲ್ಡ್ ಸುರೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಸ್ಪರ್ಧಿಸಿದ ಬಳಿಕ ರಾಜ್ಯಾದ್ಯಂತ ಸಖತ್ ಫೇಮಸ್ ಆದರು. ಈಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಮಲಗಿರುವ ಅವರ ಫೋಟೋ ಹಾಗೂ ವಿಡಿಯೋ ಲಭ್ಯವಾಗಿದೆ. ಹಾಗಂತ, ಅವರನ್ನು ಇಷ್ಟಪಡುವವರು ಆತಂಕಪಡುವ ಅವಶ್ಯಕತೆ ಇಲ್ಲ. ಯಾಕೆಂದರೆ, ತುಂಬ ಗಂಭೀರವಾದ ಆರೋಗ್ಯ ಸಮಸ್ಯೆ ಏನಿಲ್ಲ. ಸದ್ಯ ಸುರೇಶ್ ಅವರು ಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಗೋಲ್ಡ್ ಸುರೇಶ್ ಅವರ ಕಾಲಿಗೆ ಪೆಟ್ಟಾಗಿತ್ತು. ಟಾಸ್ಕ್ ಆಡುವಾಗ ಅವರು ಪೆಟ್ಟು ಮಾಡಿಕೊಂಡಿದ್ದರು. ಅದರಿಂದಾಗಿ ಅವರಿಗೆ ಕೆಲವು ಟಾಸ್ಕ್​ಗಳಲ್ಲಿ ಹಿನ್ನಡೆ ಆಗಿತ್ತು. ಕೆಲವರು ಗೋಲ್ಡ್ ಸುರೇಶ್ ಅವರ ಅನಾರೋಗ್ಯವನ್ನೇ ಮುಂದಿಟ್ಟುಕೊಂಡು ಲೇವಡಿ ಮಾಡಿದ್ದರು. ಆದರೂ ಕೂಡ ಸುರೇಶ್ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದರು.

ಕಾಲು ನೋವು ಹೆಚ್ಚಾಗಿದ್ದರಿಂದ ಸುರೇಶ್ ಅವರಿಗೆ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ಡಾಕ್ಟರ್ ಸಲಹೆ ಮೇರೆಗೆ ಗೋಲ್ಡ್ ಸುರೇಶ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಎರಡು ದಿನಗಳ ಬಳಿಕ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಮರಳುವ ನಿರೀಕ್ಷೆ ಇದೆ. ಬಳಿಕ ಒಂದೂವರೆ ತಿಂಗಳು ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ.

ಇದನ್ನೂ ಓದಿ: ಹನುಮಂತನ ಮದುವೆಯ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡ ಗೋಲ್ಡ್ ಸುರೇಶ್

ಬಿಗ್ ಬಾಸ್ ಆಟದಲ್ಲಿ ಗೋಲ್ಡ್ ಸುರೇಶ್ ಅವರು ಸಾಕಷ್ಟು ಪೈಪೋಟಿ ನೀಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಬಿಗ್ ಬಾಸ್ ಆಟವನ್ನು ಅರ್ಧಕ್ಕೆ ತೊರೆಯಬೇಕಾಯಿತು. ಅವರ ಆರ್ಥಿಕ ವ್ಯವಹಾರಗಳಲ್ಲಿ ಏರುಪೇರು ಆಗಿದ್ದರಿಂದ ಅದನ್ನು ನಿಭಾಯಿಸಲು ಅವರ ಕುಟುಂಬದವರಿಗೆ ಕಷ್ಟ ಆಗಿತ್ತು. ಹಾಗಾಗಿ ಸುರೇಶ್ ಅವರು ಅರ್ಧದಲ್ಲೇ ಬಿಗ್ ಬಾಸ್ ಶೋ ತೊರೆದಿದ್ದರು. ಆ ಬಳಿಕ ಮತ್ತೆ ಬಿಗ್ ಬಾಸ್ ಮನೆಗೆ ಹೋಗಲು ಅವರು ಬಯಸಿದ್ದರು. ಆದರೆ ಫಿನಾಲೆ ಹತ್ತಿರ ಇದ್ದಿದ್ದರಿಂದ ಅವರಿಗೆ ಸೆಕೆಂಡ್ ಚಾನ್ಸ್ ನೀಡಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಕರ್ನಾಟಕ ಲೋಕಸೇವಾ ಆಯೋಗದ ಪ್ರಮಾದಗಳನ್ನು ಅಂಗೀಕರಿಸಿದ ಸಿದ್ದರಾಮಯ್ಯ
ಕರ್ನಾಟಕ ಲೋಕಸೇವಾ ಆಯೋಗದ ಪ್ರಮಾದಗಳನ್ನು ಅಂಗೀಕರಿಸಿದ ಸಿದ್ದರಾಮಯ್ಯ
ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಪ್ರಧಾನಿ ಮೋದಿ
ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಮೊದಲ ಪ್ರಧಾನಿ ಮೋದಿ
ಮಾರ್ಚ್ 22 ರಂದು ತಮಿಳುನಾಡು ನಡೆಸುವ ಸಭೆಯಲ್ಲಿ ಭಾಗವಹಿಸಲು ಆಹ್ವಾನ
ಮಾರ್ಚ್ 22 ರಂದು ತಮಿಳುನಾಡು ನಡೆಸುವ ಸಭೆಯಲ್ಲಿ ಭಾಗವಹಿಸಲು ಆಹ್ವಾನ
ಬಲೂಚ್ ದಂಗೆಕೋರರು ಪಾಕ್ ರೈಲನ್ನು ಹೈಜಾಕ್ ಮಾಡಿದ್ದು ಹೇಗೆಂದು ನೋಡಿ
ಬಲೂಚ್ ದಂಗೆಕೋರರು ಪಾಕ್ ರೈಲನ್ನು ಹೈಜಾಕ್ ಮಾಡಿದ್ದು ಹೇಗೆಂದು ನೋಡಿ