Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಎಲಿಮಿನೇಷನ್: ದೊಡ್ಮನೆಯಲ್ಲಿ ಹಂಸಾ ಜರ್ನಿ ಇಲ್ಲಿಗೆ ಮುಕ್ತಾಯ

ಬಿಗ್ ಬಾಸ್​ ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾಗ ಹಂಸಾ ಅವರು ಸಾಕಷ್ಟು ಕಷ್ಟಪಟ್ಟಿದ್ದರು. ಸಾಧ್ಯವಾದಷ್ಟು ಗುರುತಿಸಿಕೊಳ್ಳಲು ಪ್ರಯತ್ನಿಸಿದ್ದರು. ಆದರೂ ಕೂಡ ಅವರು ಎಲಿಮಿನೇಟ್​ ಆಗುವುದು ತಪ್ಪಲಿಲ್ಲ. ಸಾಮಾನ್ಯವಾಗಿ ಪ್ರತಿ ಭಾನುವಾರ ಎಲಿಮಿನೇಷನ್ ನಡೆಯುತ್ತದೆ. ಆದರೆ ಈ ಬಾರಿ ಸೋಮವಾರ ಎಲಿಮಿನೇಷನ್​ ಪ್ರತಿಕ್ರಿಯೆಯ ಪ್ರಸಾರ ಮಾಡಲಾಗಿದೆ.

ಬಿಗ್ ಬಾಸ್ ಎಲಿಮಿನೇಷನ್: ದೊಡ್ಮನೆಯಲ್ಲಿ ಹಂಸಾ ಜರ್ನಿ ಇಲ್ಲಿಗೆ ಮುಕ್ತಾಯ
ಹಂಸಾ
Follow us
ಮದನ್​ ಕುಮಾರ್​
|

Updated on: Oct 28, 2024 | 11:02 PM

ನಟಿ ಹಂಸಾ ಅವರು ಬಿಗ್ ಬಾಸ್​ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. 28ನೇ ದಿನಕ್ಕೆ ಅವರ ಜರ್ನಿ ಅಂತ್ಯವಾಗಿದೆ. ಕಳೆದ ವಾರ ಚೈತ್ರಾ ಕುಂದಾಪುರ, ಗೋಲ್ಡ್​ ಸುರೇಶ್, ಉಗ್ರಂ ಮಂಜು, ಭವ್ಯಾ, ಮೋಕ್ಷಿತಾ ಪೈ, ಹಂಸಾ, ಮಾನಸಾ ಮುಂತಾದವರು ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಹಂಸಾ ಅವರು ಎಲಿಮಿನೇಟ್​ ಆಗಬೇಕಾಯಿತು. ಡೇಂಜರ್​ ಝೋನ್​ನ ಅಂತಿಮ ಹಂತಕ್ಕೆ ಮೋಕ್ಷಿತಾ ಮತ್ತು ಹಂಸಾ ಬಂದಿದ್ದರು. ಇಬ್ಬರಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಭಾನುವಾರ (ಅ.27) ತೋರಿಸಿರಲಿಲ್ಲ. ಆದರೆ ಸೋಮವಾರದ (ಅ.28) ಸಂಚಿಕೆಯಲ್ಲಿ ಹಂಸಾ ಎಲಿಮಿನೇಟ್ ಆಗಿರುವುದು ಸ್ಪಷ್ಟವಾಗಿದೆ.

ಪ್ರತಿ ವಾರ ಎಲಿಮಿನೇಟ್ ಆದವರನ್ನು ಕಿಚ್ಚ ಸುದೀಪ್ ಅವರು ವೇದಿಕೆಗೆ ಕರೆಸಿ ಮಾತನಾಡಿಸುತ್ತಾರೆ. ಆದರೆ ಇತ್ತೀಚೆಗೆ ಅವರ ತಾಯಿ ನಿಧನರಾದ್ದರಿಂದ ವೀಕೆಂಡ್ ಸಂಚಿಕೆ ನಡೆಸಿಕೊಡಲು ಸುದೀಪ್ ಅವರಿಗೆ ಸಾಧ್ಯವಾಗಿಲ್ಲ. ಹಾಗಾಗಿ ಹಂಸಾ ಅವರು ವೇದಿಕೆಯಲ್ಲಿ ಸುದೀಪ್ ಜೊತೆ ಮಾತನಾಡದೇ ಬಿಗ್ ಬಾಸ್​ ಆಟವನ್ನು ಮುಗಿಸುವಂತಾಯಿತು. ಈ ಮೊದಲು ಎಲಿಮಿನೇಟ್ ಆದ ರಂಜಿತ್, ಜಗದೀಶ್ ಅವರಿಗೂ ವೇದಿಕೆಗೆ ಬರುವ ಅವಕಾಶ ಸಿಕ್ಕಿರಲಿಲ್ಲ.

ಎಲಿಮಿನೇಟ್ ಆಗುವುದಕ್ಕೂ ಮುನ್ನ ಹಂಸಾ ಅವರು ತಮ್ಮ ಇಷ್ಟು ದಿನಗಳ ಜರ್ನಿಯನ್ನು ಮೆಲುಕು ಹಾಕಿದರು. ‘ಇದು ಜೀವನಪೂರ್ತಿ ಇರುವಂತಹ ನೆನಪು. 17 ರೀತಿಯ ವ್ಯಕ್ತಿತ್ವ ಇರುವ ಜನರ ಮಧ್ಯೆ ನಾನು ಒಂದೇ ಮನೆಯಲ್ಲಿ ಇನ್ಮುಂದೆ ಎಂದಿಗೂ ಇರುವುದಿಲ್ಲ ಅನಿಸುತ್ತದೆ. ಹೊರಗಡೆಯಿಂದ ಬಿಗ್ ಬಾಸ್ ಕಾರ್ಯಕ್ರಮವನ್ನು ನೋಡುವುದಕ್ಕೂ ಒಳಗಡೆಯಿಂದ ನೋಡೋದಕ್ಕೂ ವ್ಯತ್ಯಾಸ ಇದೆ. ಇಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುವಾಗ ಫ್ರೆಂಡ್ಸ್​ ಹಾಗೂ ಫ್ಯಾಮಿಲಿಯ ಸಲಹೆ ಇರಲ್ಲ. ಹೊರಗೆ ಹೋದ ಬಳಿಕ ನಾನು ಮತ್ತಷ್ಟು ಸ್ಟ್ರಾಂಗ್ ಆಗುತ್ತೇನೆ. ನನಗೆ ತಾಳ್ಮೆ ಇದೆ ಎಂಬುದು ಇಲ್ಲಿಗೆ ಬಂದ ಬಳಿಕ ತಿಳಿಯಿತು’ ಎಂದಿದ್ದಾರೆ ಹಂಸಾ.

ಇದನ್ನೂ ಓದಿ: ಬಿಗ್ ಬಾಸ್ ಒಪ್ಪಂದದ ಮೇಲೆ ಅನುಮಾನ; ಸ್ಪರ್ಧಿಗಳ ಹೆಸರು ಮೊದಲೇ ಗೊತ್ತಿತ್ತು ಎಂದ ತ್ರಿವಿಕ್ರಮ್

ಹಂಸಾ ಅವರು ಎಲಿಮಿನೇಟ್ ಆಗುವಾಗ ಅವರಿಗೆ ಒಂದು ವಿಶೇಷ ಅಧಿಕಾರ ನೀಡಲಾಯಿತು. ಮುಂದಿನ ವಾರಕ್ಕೆ ಒಬ್ಬರನ್ನು ಅವರು ನೇರವಾಗಿ ನಾಮಿನೇಟ್ ಮಾಡಬಹುದು ಎಂದು ಬಿಗ್ ಬಾಸ್ ಹೇಳಿದಾಗ ಹಂಸಾ ಅವರು ಹನುಮಂತನನ್ನು ನಾಮಿನೇಟ್ ಮಾಡಿದರು. ಅದಕ್ಕೆ ಅವರು ಕಾರಣವನ್ನೂ ನೀಡಿದರು. ‘ಹನುಮಂತ ಅವರು ಈ ಮನೆಗೆ ಬಂದು 1 ವಾರ ಆಗಿದೆ. ಧನರಾಜ್ ಒಬ್ಬರನ್ನು ಬಿಟ್ಟು ಬೇರೆ ಯಾರ ಜತೆಗೂ ಹನುಮಂತ ಬೆರೆತಿಲ್ಲ. ಸಿಂಗಿಂಗ್ ಅವರ ಪ್ಲಸ್ ಪಾಯಿಂಟ್. ಆದ್ರೆ ನಾವು ಕೇಳಿದಾಗ ಮಾತ್ರ ಅವರು ಹಾಡುತ್ತಾರೆ. ಅವರಾಗಿಯೇ ಹಾಡಿನ ಮೂಲಕ ನಮಗೆ ಮನರಂಜನೆಯನ್ನು ನೀಡಿಲ್ಲ’ ಅಂತ ಹಂಸಾ ಹೇಳಿದರು. ಹಾಗಾಗಿ ಹನುಮಂತ ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಹವ್ವೂರ್ ರಾಣಾ ಹಸ್ತಾಂತರದಲ್ಲಿ ಕಾಂಗ್ರೆಸ್ ಪಾತ್ರ ಇದೆ;ಪಿ. ಚಿದಂಬರಂ
ತಹವ್ವೂರ್ ರಾಣಾ ಹಸ್ತಾಂತರದಲ್ಲಿ ಕಾಂಗ್ರೆಸ್ ಪಾತ್ರ ಇದೆ;ಪಿ. ಚಿದಂಬರಂ
ಯಾವುದೇ ಅಹಿತಕರ ಘಟನೆಗೆ ಆಸ್ಪದವೀಯದ ಪೋಲೀಸರು
ಯಾವುದೇ ಅಹಿತಕರ ಘಟನೆಗೆ ಆಸ್ಪದವೀಯದ ಪೋಲೀಸರು
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್​ಮನ್ ಗಿಲ್
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಜೆಡಿಎಸ್​ ಮುಖಂಡರ ಕೈಗಳಲ್ಲಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಪ್ಲಕಾರ್ಡ್​​
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಹನುಮ ಜಯಂತಿ: ಹನುಮಾನ್ ತೇರು ಎಳೆದ ಪ್ರಲ್ಹಾದ್ ಜೋಶಿ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಬ್ರಹ್ಮಾಂಡ ಗುರೂಜಿ ಭಯಾನಕ ಭವಿಷ್ಯ: ರೋಗ ರುಜಿನ ಹೆಚ್ಚಾಗೋ ಸಾಧ್ಯತೆ, ಎಚ್ಚರ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ಎಕ್ಸ್​ಪೋ ಉದ್ಘಾಟಿಸಿದ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್​ಡಿ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ಪ್ರತಿಭಟನೆ;ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!