AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಯಾವನೋ’ ಎಂದು ಕೂಗಿದ ಹಂಸಾ; ಇರುವ ಗೌರವವನ್ನೂ ಕಳೆದುಕೊಂಡ ಜಗದೀಶ್

ಆರಂಭದಲ್ಲಿ ಜಗದೀಶ್​ ಅವರಿಗೆ ಎಲ್ಲರೂ ಸರ್​ ಎಂದು ಕರೆಯುತ್ತಿದ್ದರು. ಆದರೆ ಈಗ ‘ಯಾವನೋ ನೀನು..’ ಎಂದು ಪ್ರಶ್ನೆ ಮಾಡುವ ಮಟ್ಟಕ್ಕೆ ಎಲ್ಲರೂ ಬಂದಿದ್ದಾರೆ. ಜಗದೀಶ್ ಅವರಿಗೆ ಇರುವ ಗೌರವ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಲಕ್ಷಣ ಕಾಣಿಸಿದೆ. ಎರಡನೇ ವಾರದಲ್ಲಿ ಜಗದೀಶ್​ ಆರ್ಭಟ ಜಾಸ್ತಿ ಆಗಿದೆ.

‘ನೀನು ಯಾವನೋ’ ಎಂದು ಕೂಗಿದ ಹಂಸಾ; ಇರುವ ಗೌರವವನ್ನೂ ಕಳೆದುಕೊಂಡ ಜಗದೀಶ್
ಜಗದೀಶ್​, ಹಂಸಾ
ಮದನ್​ ಕುಮಾರ್​
|

Updated on: Oct 07, 2024 | 8:06 PM

Share

ಕೇವಲ ಕಿರಿಕ್​ ಮಾಡುವುದರಿಂದಲೇ ಜಗದೀಶ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಸದ್ದು ಮಾಡುತ್ತಿದ್ದಾರೆ. ಮೊದಲ ವಾರದಲ್ಲಿ ಅವರು ಸಿಕ್ಕಾಪಟ್ಟೆ ಕೂಗಾಡಿದ್ದರು. ಅದರಿಂದ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿತು. ಹಾಗಾಗಿ ಇದು ಅವರಿಗೆ ಯಶಸ್ಸಿನ ಸೂತ್ರವಾಗಿದೆ. ಚಿಕ್ಕ ಚಿಕ್ಕ ಕಾರಣಕ್ಕೂ ಜಗಳ ಮಾಡುವುದನ್ನೇ ಅವರು ಕಾಯಕ ಮಾಡಿಕೊಂಡಿದ್ದಾರೆ. ಇದರಿಂದಾಗಿ ಇನ್ನುಳಿದ ಸ್ಪರ್ಧಿಗಳ ಕಣ್ಣಲ್ಲಿ ಜಗದೀಶ್​ ಬಗ್ಗೆ ಇರುವ ಗೌರವ ಕಡಿಮೆ ಆಗಿದೆ. ಈಗ ಬಿಗ್​ ಬಾಸ್​ ಮನೆಯ ಮೊದಲ ಕ್ಯಾಪ್ಟನ್​ ಹಂಸಾ ಕೂಡ ಜಗದೀಶ್​ಗೆ ಏಕವಚನದಲ್ಲಿ ಮಾತನಾಡಿಸಿದ್ದಾರೆ.

ನಟಿ ಹಂಸಾ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಮೊದಲ ಕ್ಯಾಪ್ಟನ್ ಆಗಿ ಆಯ್ಕೆ ಆಗಿದ್ದಾರೆ. ಹಂಸಾ ಅವರ ಆಯ್ಕೆಯ ಬಗ್ಗೆ ಜಗದೀಶ್​ಗೆ ಅಸಮಾಧಾನ ಇದೆ. ಹಂಸಾ ಅವರನ್ನು ಬೇಕಾದಂತೆ ಆಡಿಸಬೇಕು ಎಂದು ಜಗದೀಶ್ ತೀರ್ಮಾನ ಮಾಡಿದ್ದಾರೆ. ‘ಹಂಸಾ ಕ್ಯಾಪ್ಟನ್​ ಆದರೂ ಅಧಿಕಾರ ನನ್ನದೇ’ ಎಂದು ಜಗದೀಶ್​ ಹೇಳಿದ್ದರು. ಈಗ ಆ ಮಾತನ್ನು ನಿಜವಾಗಿಸಲು ಜಗದೀಶ್​ ಪ್ರಯತ್ನಿಸುತ್ತಿದ್ದಾರೆ.

ಸದ್ಯಕ್ಕೆ ಜಗದೀಶ್ ಅವರು ನರಕದಲ್ಲಿ ಇದ್ದಾರೆ. ಈ ಮೊದಲು ಸ್ವರ್ಗದಲ್ಲಿ ಇದ್ದ ಅವರ ಕೆಲವು ವಸ್ತುಗಳನ್ನು ಅಲ್ಲಿಯೇ ಬಿಟ್ಟು ಬಂದಿದ್ದಾರೆ. ಅದನ್ನೆಲ್ಲ ವಾಪಸ್​ ತಂದುಕೊಡುವಂತೆ ಹಂಸಾ ಬಳಿಕ ಆರ್ಡರ್​ ಮಾಡಿದ್ದಾರೆ. ಪದೇ ಪದೇ ಅದು ಕೊಡಿ, ಇದು ಕೊಡಿ ಎಂದು ಕೇಳಿದ್ದಕ್ಕೆ ಹಂಸಾಗೆ ಕಿರಿಕಿರಿ ಆಗಿದೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲಿಂದ ಅದು ವಿಕೋಪಕ್ಕೆ ಹೋಗಿದೆ.

ಇದನ್ನೂ ಓದಿ: Bigg Boss Elimination: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ

‘ನಿನಗೆ ಸಾಮರ್ಥ್ಯ ಇಲ್ಲ ಎಂದರೆ ಬಿಗ್​ ಬಾಸ್​ಗೆ ಹೇಳು. ನೀನೇನು ಡಾನ್​ ಅಲ್ಲ. ಕೆಪಾಸಿಟಿ ಇಲ್ಲ ಎಂದರೆ ರಿಸೈನ್​ ಮಾಡಿ ಹೋಗು’ ಎಂದು ಹಂಸಾಗೆ ಜಗದೀಶ್​ ಹೇಳಿದ್ದಾರೆ. ‘ಮನೆಗೆ ಹೋಗು ಅಂತ ಹೇಳೋಕೆ ನೀನು ಯಾವನೋ..’ ಎಂದು ಹಂಸಾ ಅವರು ಏಕವಚನದಲ್ಲಿಯೇ ಬೈಯ್ದಿದ್ದಾರೆ. ಈ ಎಲ್ಲ ಜಗಳಕ್ಕೆ ಗೋಲ್ಡ್​ ಸುರೇಶ್​ ಅವರು ಕುಮ್ಮಕ್ಕು ನೀಡಿದ್ದಾರೆ. ‘ಈ ವಾರದ ಕಂಟೆಂಟ್​ ಇನ್ನೂ ಖರಾಬ್​ ಆಗಿ ಇರಲಿದೆ’ ಎಂದು ಜಗದೀಶ್​ ಹೇಳಿದ್ದಾರೆ. ಆ ಮೂಲಕ ಅವರು ಬೇಕಂತಲೇ ಗಲಾಟೆ ಮಾಡಲು ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್