AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್

ಬಿಗ್ ಬಾಸ್ ಕನ್ನಡ 12 ಮೂರನೇ ವಾರದಲ್ಲೇ ಅಚ್ಚರಿಯ ಫಿನಾಲೆಗೆ ಸಿದ್ಧವಾಗಿದೆ. ಸುದೀಪ್ ಎಚ್ಚರಿಕೆಯಂತೆ, ಪ್ರಸ್ತುತ ಸ್ಪರ್ಧಿಗಳಲ್ಲಿ ಅರ್ಧದಷ್ಟು ಮಂದಿ ಮನೆಯಿಂದ ಹೊರಹೋಗಲಿದ್ದಾರೆ. ಕಳಪೆ ಪ್ರದರ್ಶನ ಮತ್ತು ಜಗಳ ಇದಕ್ಕೆ ಮುಖ್ಯ ಕಾರಣ. ಹೊರಹೋಗುವವರ ಜಾಗಕ್ಕೆ ಹೊಸ ಸ್ಪರ್ಧಿಗಳ ಬ್ಯಾಚ್ ಪ್ರವೇಶಿಸಲಿದೆ.

ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on:Oct 14, 2025 | 5:03 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂರನೇ ವಾರದಲ್ಲೇ ಒಂದು ಫಿನಾಲೆ ನಡೆಯಲಿದೆ ಎಂದು ಬಿಗ್ ಬಾಸ್ ಘೋಷಣೆ ಮಾಡಿದ್ದರು. ಇದರಲ್ಲಿ ಇರೋ ವಿಶೇಷತೆ ಏನು ಎಂಬ ಬಗ್ಗೆ ಅನೇಕರಿಗೆ ಕುತೂಹಲ ಮೂಡಿತ್ತು. ಇದಕ್ಕೆ ಸುದೀಪ್ ಕಡೆಯಿಂದ ಉತ್ತರ ಸಿಕ್ಕಿದೆ. ಅರ್ಧದಷ್ಟು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೊದಲ ಫಿನಾಲೆಯಿಂದ ಔಟ್ ಆಗಲಿದ್ದಾರಂತೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದ ಬಳಿಕ 100 ದಿನಗಳ ಬಳಿಕವೇ ಫಿನಾಲೆ ನಡೆಯುತ್ತಿತ್ತು. ಆದರೆ, ಈ ಬಾರಿ ಸಾಕಷ್ಟು ಟ್ವಿಸ್ಟ್​ಗಳನ್ನು ಇಡಲು ವಾಹಿನಿ ನಿರ್ಧರಿಸಿದೆ. ಈ ಕಾರಣದಿಂದಲೇ ಬಿಗ್ ಬಾಸ್ ಆರಂಭ ಆದ ಮೂರನೇ ವಾರಕ್ಕೆ ಒಂದು ಫಿನಾಲೆ ನಡೆಯಲಿದೆ. ಈಗ ಇರುವ 17 ಸ್ಪರ್ಧಿಗಳ ಪೈಕಿ ಅರ್ಧದಷ್ಟು ಮಂದಿ ಔಟ್ ಆಗುವ ಸೂಚನೆಯನ್ನು ಸುದೀಪ್ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವ 17 ಮಂದಿ ಪೈಕಿ ಎಲ್ಲರೂ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಇದು ಸುದೀಪ್ ಬೇಸರಕ್ಕೆ ಕಾರಣ ಆಗಿದೆ. ಸ್ಪರ್ಧಿಗಳು ನಿತ್ಯ ಜಗಳದಲ್ಲೇ ಸಮಯ ಕಳೆಯುತ್ತಿದ್ದಾರೆ. ಯಾರೊಬ್ಬರೂ ಆಟವನ್ನು ಸರಿಯಾಗಿ ಆರಂಭಿಸಿಲ್ಲ ಎಂಬುದು ಸುದೀಪ್ ಅಭಿಪ್ರಾಯ. ಹೀಗಾಗಿ, ಸ್ಪರ್ಧಿಗಳಿಗೆ ಎಚ್ಚರಿಕೆ ನೀಡುವಾಗ ಅವರು ದೊಡ್ಡ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್ಟ್

‘ಬಿಗ್ ಬಾಸ್ ಫಿನಾಲೆ ನಡೆಯೋಕೆ ಒಂದೇ ವಾರ ಇದೆ. ಈ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಔಟ್ ಆಗಬುದು’ ಎಂದು ಸುದೀಪ್ ಎಚ್ಚರಿಸಿದ್ದಾರೆ. ಈ ಮೊದಲು ಕೂಡ ಸುದೀಪ್ ಈ ಬಗ್ಗೆ ಪರೋಕ್ಷವಾಗಿ ಹೇಳಿದ್ದರು. ಔಟ್ ಆದವರ ಜಾಗಕ್ಕೆ ಬರೋಕೆ ಮತ್ತೊಂದು ಬ್ಯಾಚ್ ರೆಡಿ ಇದೆ ಎಂದು ಹೇಳಿದ್ದರು. ಅವರು ಹೇಳುವುದನ್ನು ನೋಡಿದರೆ ಫಿನಾಲೆಯಲ್ಲಿ ಒಂದಷ್ಟು ಮಂದಿ ಔಟ್ ಆಗೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:02 pm, Sun, 12 October 25

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!