AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್

ಬಿಗ್ ಬಾಸ್ ಕನ್ನಡ 12 ಮೂರನೇ ವಾರದಲ್ಲೇ ಅಚ್ಚರಿಯ ಫಿನಾಲೆಗೆ ಸಿದ್ಧವಾಗಿದೆ. ಸುದೀಪ್ ಎಚ್ಚರಿಕೆಯಂತೆ, ಪ್ರಸ್ತುತ ಸ್ಪರ್ಧಿಗಳಲ್ಲಿ ಅರ್ಧದಷ್ಟು ಮಂದಿ ಮನೆಯಿಂದ ಹೊರಹೋಗಲಿದ್ದಾರೆ. ಕಳಪೆ ಪ್ರದರ್ಶನ ಮತ್ತು ಜಗಳ ಇದಕ್ಕೆ ಮುಖ್ಯ ಕಾರಣ. ಹೊರಹೋಗುವವರ ಜಾಗಕ್ಕೆ ಹೊಸ ಸ್ಪರ್ಧಿಗಳ ಬ್ಯಾಚ್ ಪ್ರವೇಶಿಸಲಿದೆ.

ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
| Edited By: |

Updated on:Oct 14, 2025 | 5:03 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂರನೇ ವಾರದಲ್ಲೇ ಒಂದು ಫಿನಾಲೆ ನಡೆಯಲಿದೆ ಎಂದು ಬಿಗ್ ಬಾಸ್ ಘೋಷಣೆ ಮಾಡಿದ್ದರು. ಇದರಲ್ಲಿ ಇರೋ ವಿಶೇಷತೆ ಏನು ಎಂಬ ಬಗ್ಗೆ ಅನೇಕರಿಗೆ ಕುತೂಹಲ ಮೂಡಿತ್ತು. ಇದಕ್ಕೆ ಸುದೀಪ್ ಕಡೆಯಿಂದ ಉತ್ತರ ಸಿಕ್ಕಿದೆ. ಅರ್ಧದಷ್ಟು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೊದಲ ಫಿನಾಲೆಯಿಂದ ಔಟ್ ಆಗಲಿದ್ದಾರಂತೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದ ಬಳಿಕ 100 ದಿನಗಳ ಬಳಿಕವೇ ಫಿನಾಲೆ ನಡೆಯುತ್ತಿತ್ತು. ಆದರೆ, ಈ ಬಾರಿ ಸಾಕಷ್ಟು ಟ್ವಿಸ್ಟ್​ಗಳನ್ನು ಇಡಲು ವಾಹಿನಿ ನಿರ್ಧರಿಸಿದೆ. ಈ ಕಾರಣದಿಂದಲೇ ಬಿಗ್ ಬಾಸ್ ಆರಂಭ ಆದ ಮೂರನೇ ವಾರಕ್ಕೆ ಒಂದು ಫಿನಾಲೆ ನಡೆಯಲಿದೆ. ಈಗ ಇರುವ 17 ಸ್ಪರ್ಧಿಗಳ ಪೈಕಿ ಅರ್ಧದಷ್ಟು ಮಂದಿ ಔಟ್ ಆಗುವ ಸೂಚನೆಯನ್ನು ಸುದೀಪ್ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವ 17 ಮಂದಿ ಪೈಕಿ ಎಲ್ಲರೂ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಇದು ಸುದೀಪ್ ಬೇಸರಕ್ಕೆ ಕಾರಣ ಆಗಿದೆ. ಸ್ಪರ್ಧಿಗಳು ನಿತ್ಯ ಜಗಳದಲ್ಲೇ ಸಮಯ ಕಳೆಯುತ್ತಿದ್ದಾರೆ. ಯಾರೊಬ್ಬರೂ ಆಟವನ್ನು ಸರಿಯಾಗಿ ಆರಂಭಿಸಿಲ್ಲ ಎಂಬುದು ಸುದೀಪ್ ಅಭಿಪ್ರಾಯ. ಹೀಗಾಗಿ, ಸ್ಪರ್ಧಿಗಳಿಗೆ ಎಚ್ಚರಿಕೆ ನೀಡುವಾಗ ಅವರು ದೊಡ್ಡ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್ಟ್

‘ಬಿಗ್ ಬಾಸ್ ಫಿನಾಲೆ ನಡೆಯೋಕೆ ಒಂದೇ ವಾರ ಇದೆ. ಈ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಔಟ್ ಆಗಬುದು’ ಎಂದು ಸುದೀಪ್ ಎಚ್ಚರಿಸಿದ್ದಾರೆ. ಈ ಮೊದಲು ಕೂಡ ಸುದೀಪ್ ಈ ಬಗ್ಗೆ ಪರೋಕ್ಷವಾಗಿ ಹೇಳಿದ್ದರು. ಔಟ್ ಆದವರ ಜಾಗಕ್ಕೆ ಬರೋಕೆ ಮತ್ತೊಂದು ಬ್ಯಾಚ್ ರೆಡಿ ಇದೆ ಎಂದು ಹೇಳಿದ್ದರು. ಅವರು ಹೇಳುವುದನ್ನು ನೋಡಿದರೆ ಫಿನಾಲೆಯಲ್ಲಿ ಒಂದಷ್ಟು ಮಂದಿ ಔಟ್ ಆಗೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:02 pm, Sun, 12 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!