AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್

ಬಿಗ್ ಬಾಸ್ ಕನ್ನಡ 12 ಮೂರನೇ ವಾರದಲ್ಲೇ ಅಚ್ಚರಿಯ ಫಿನಾಲೆಗೆ ಸಿದ್ಧವಾಗಿದೆ. ಸುದೀಪ್ ಎಚ್ಚರಿಕೆಯಂತೆ, ಪ್ರಸ್ತುತ ಸ್ಪರ್ಧಿಗಳಲ್ಲಿ ಅರ್ಧದಷ್ಟು ಮಂದಿ ಮನೆಯಿಂದ ಹೊರಹೋಗಲಿದ್ದಾರೆ. ಕಳಪೆ ಪ್ರದರ್ಶನ ಮತ್ತು ಜಗಳ ಇದಕ್ಕೆ ಮುಖ್ಯ ಕಾರಣ. ಹೊರಹೋಗುವವರ ಜಾಗಕ್ಕೆ ಹೊಸ ಸ್ಪರ್ಧಿಗಳ ಬ್ಯಾಚ್ ಪ್ರವೇಶಿಸಲಿದೆ.

ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
| Updated By: ಮಂಜುನಾಥ ಸಿ.|

Updated on:Oct 14, 2025 | 5:03 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂರನೇ ವಾರದಲ್ಲೇ ಒಂದು ಫಿನಾಲೆ ನಡೆಯಲಿದೆ ಎಂದು ಬಿಗ್ ಬಾಸ್ ಘೋಷಣೆ ಮಾಡಿದ್ದರು. ಇದರಲ್ಲಿ ಇರೋ ವಿಶೇಷತೆ ಏನು ಎಂಬ ಬಗ್ಗೆ ಅನೇಕರಿಗೆ ಕುತೂಹಲ ಮೂಡಿತ್ತು. ಇದಕ್ಕೆ ಸುದೀಪ್ ಕಡೆಯಿಂದ ಉತ್ತರ ಸಿಕ್ಕಿದೆ. ಅರ್ಧದಷ್ಟು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೊದಲ ಫಿನಾಲೆಯಿಂದ ಔಟ್ ಆಗಲಿದ್ದಾರಂತೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದ ಬಳಿಕ 100 ದಿನಗಳ ಬಳಿಕವೇ ಫಿನಾಲೆ ನಡೆಯುತ್ತಿತ್ತು. ಆದರೆ, ಈ ಬಾರಿ ಸಾಕಷ್ಟು ಟ್ವಿಸ್ಟ್​ಗಳನ್ನು ಇಡಲು ವಾಹಿನಿ ನಿರ್ಧರಿಸಿದೆ. ಈ ಕಾರಣದಿಂದಲೇ ಬಿಗ್ ಬಾಸ್ ಆರಂಭ ಆದ ಮೂರನೇ ವಾರಕ್ಕೆ ಒಂದು ಫಿನಾಲೆ ನಡೆಯಲಿದೆ. ಈಗ ಇರುವ 17 ಸ್ಪರ್ಧಿಗಳ ಪೈಕಿ ಅರ್ಧದಷ್ಟು ಮಂದಿ ಔಟ್ ಆಗುವ ಸೂಚನೆಯನ್ನು ಸುದೀಪ್ ನೀಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿರುವ 17 ಮಂದಿ ಪೈಕಿ ಎಲ್ಲರೂ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಇದು ಸುದೀಪ್ ಬೇಸರಕ್ಕೆ ಕಾರಣ ಆಗಿದೆ. ಸ್ಪರ್ಧಿಗಳು ನಿತ್ಯ ಜಗಳದಲ್ಲೇ ಸಮಯ ಕಳೆಯುತ್ತಿದ್ದಾರೆ. ಯಾರೊಬ್ಬರೂ ಆಟವನ್ನು ಸರಿಯಾಗಿ ಆರಂಭಿಸಿಲ್ಲ ಎಂಬುದು ಸುದೀಪ್ ಅಭಿಪ್ರಾಯ. ಹೀಗಾಗಿ, ಸ್ಪರ್ಧಿಗಳಿಗೆ ಎಚ್ಚರಿಕೆ ನೀಡುವಾಗ ಅವರು ದೊಡ್ಡ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್ಟ್

‘ಬಿಗ್ ಬಾಸ್ ಫಿನಾಲೆ ನಡೆಯೋಕೆ ಒಂದೇ ವಾರ ಇದೆ. ಈ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಔಟ್ ಆಗಬುದು’ ಎಂದು ಸುದೀಪ್ ಎಚ್ಚರಿಸಿದ್ದಾರೆ. ಈ ಮೊದಲು ಕೂಡ ಸುದೀಪ್ ಈ ಬಗ್ಗೆ ಪರೋಕ್ಷವಾಗಿ ಹೇಳಿದ್ದರು. ಔಟ್ ಆದವರ ಜಾಗಕ್ಕೆ ಬರೋಕೆ ಮತ್ತೊಂದು ಬ್ಯಾಚ್ ರೆಡಿ ಇದೆ ಎಂದು ಹೇಳಿದ್ದರು. ಅವರು ಹೇಳುವುದನ್ನು ನೋಡಿದರೆ ಫಿನಾಲೆಯಲ್ಲಿ ಒಂದಷ್ಟು ಮಂದಿ ಔಟ್ ಆಗೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:02 pm, Sun, 12 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!