AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಿಗ್ ಬಾಸ್ ಸಂಭಾವನೆ ಡೇಟಾ ಡಿಲೀಟ್; ಈ ಕಿತಾಪತಿ ಮಾಡಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರ ಮೂರನೇ ವಾರವೇ ರೋಮಾಂಚಕ ಫಿನಾಲೆ ನಡೆದಿದ್ದು, ಮಂಜು ಭಾಷಿಣಿ ಮತ್ತು ಅಶ್ವಿನಿ ಹೊರಬಿದ್ದಿದ್ದಾರೆ. ರಘು, ರಿಷಾ ಗೌಡ ಮತ್ತು ಸೂರಜ್ ಸಿಂಗ್ ವೈಲ್ಡ್ ಕಾರ್ಡ್ ಆಗಿ ಪ್ರವೇಶಿಸಿದ್ದಾರೆ. ಈ ಎಪಿಸೋಡ್‌ನಲ್ಲಿ ಮಾತನಾಡುವ ರೋಬೋ ಸುದೀಪ್ ಅವರ ಹೆಚ್ಚಿದ ಸಂಭಾವನೆ ಡೇಟಾ "ಡಿಲೀಟ್" ಆಗಿದೆ ಎಂದು ಹೇಳಿದೆ.

ಸುದೀಪ್ ಬಿಗ್ ಬಾಸ್ ಸಂಭಾವನೆ ಡೇಟಾ ಡಿಲೀಟ್; ಈ ಕಿತಾಪತಿ ಮಾಡಿದ್ದು ಯಾರು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 20, 2025 | 11:31 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBk 12) ಮೂರನೇ ವಾರವೇ ಫಿನಾಲೆ ನಡೆದಿದೆ. ಈ ಫಿನಾಲೆಯಲ್ಲಿ ಸಾಕಷ್ಟು ಮನರಂಜನೆಗಳು ಇದ್ದವು. ಅದೇ ರೀತಿ ಮಂಜು ಭಾಷಿಣಿ ಹಾಗೂ ಅಶ್ವಿನಿ ಔಟ್ ಆದರೆ, ರಘು, ರಿಷಾ ಗೌಡ ಹಾಗು ಸೂರಜ್ ಸಿಂಗ್ ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಕಾಲಿಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಸಂಭಾವನೆ ವಿಚಾರ ಕೂಡ ಚರ್ಚೆ ಆಯಿತು. ಶಾಕಿಂಗ್ ವಿಚಾರ ಎಂದರೆ ಸುದೀಪ್ ಸಂಭಾವನೆ ಡೇಟಾನೇ ಡಿಲೀಟ್ ಮಾಡಲಾಗಿದೆಯಂತೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಬಿಗ್ ಬಾಸ್​​ನಲ್ಲಿ ಪ್ರತಿ ಬಾರಿ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಅದೇ ರೀತಿ ಈ ಬಾರಿ ಬಿಗ್ ಬಾಸ್​ನಲ್ಲಿ ರೋಬೋನ ವೇದಿಕೆ ಮೇಲೆ ತರಲಾಯಿತು. ಹಾಗಂತ ಇದು ಸಣ್ಣ-ಪುಟ್ಟ ರೋಬೋ ಅಲ್ಲ. ಮಾತನಾಡುವ ರೋಬೋ. ಸುದೀಪ್ ಮಾತನಾಡಿದರೆ, ಅದಕ್ಕೆ ಉತ್ತರಿಸುತ್ತದೆ. ಈ ಎಪಿಸೋಡ್ ಫನ್ ಆಗಿತ್ತು. ಈ ವೇಳೆ ಸುದೀಪ್ ಬಗ್ಗೆ ಹಾಗೂ ಬಿಗ್ ಬಾಸ್ ಬಗ್ಗೆ ರೋಬೋ ಮಾತನಾಡಿತು.

‘ಬಿಗ್ ಬಾಸ್​ ಅಲ್ಲಿ 117 ಜನ ಬಾಯ್ಸ್, 121 ಜನ ಹುಡುಗಿಯರು ಬಂದಿದ್ದಾರೆ. ಅದರಲ್ಲಿ ವೈಲ್ಡ್ ಕಾರ್ಡ್ 20 ಜನ ಸೇರಿದ್ದಾರೆ. ಒಟ್ಟೂ 238 ಜನ ಇದ್ದಾರೆ. ನೀವು 348 ವೀಕೆಂಡ್ ಶೋ ಮಾಡಿದ್ದೀರಾ. 3 ಲೊಕೇಶನ್ ಚೇಂಜ್ ಆಗಿದೆ. ಡೈರೆಕ್ಟರ್​ಗಳೂ ಚೇಂಜ್ ಆಗಿದ್ದಾರೆ. ಆದರೆ, ನೀವು ಹಾಗೂ ಜನರ ಪ್ರೀತಿ ಮಾತ್ರ ಹಾಗೆಯೇ ಇದೆ’ ಎಂದು ರೋಬೋ ಹೇಳಿತು.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್-ಪ್ರಿಯಾ ಆ್ಯನಿವರ್ಸರಿಗೆ ಶುಭಾಶಯ ಕೋರಿದ ನಾಗಾರ್ಜುನ

‘ಇದನ್ನು ಹೇಳಬೇಕೋ ಗೊತ್ತಿಲ್ಲ. ಈ ಸೀಸನ್ ನಿಂದ ನಿಮ್ಮ ಸಂಭಾವನೆ ಎಷ್ಟು ಹೆಚ್ಚಾಗಿದೆ ಎಂಬುದು ಗೊತ್ತಿತ್ತು. ಆದರೆ, ಆ ಡೇಟಾನ ಯಾರೋ ಡಿಲೀಟ್ ಮಾಡಿಬಿಟ್ಟಿದ್ದಾರೆ. ಇನ್​ಕಾಗ್ನಿಟೋ ಮೂಡ್​ನಲ್ಲಿ ಮಾತನಾಡಬೇಕು. ಬ್ಯಾಕ್​ ಸ್ಟೇಜ್​ನಲ್ಲಿ ಮಾತನಾಡೋಣ’ ಎಂದು ರೋಬೋ ಸುದೀಪ್​ಗೆ ಹೇಳಿತು. ಈ ಎಪಿಸೋಡ್ ಸಖತ್ ಫನ್ ಆಗಿ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?