AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಿಗ್ ಬಾಸ್ ಸಂಭಾವನೆ ಡೇಟಾ ಡಿಲೀಟ್; ಈ ಕಿತಾಪತಿ ಮಾಡಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರ ಮೂರನೇ ವಾರವೇ ರೋಮಾಂಚಕ ಫಿನಾಲೆ ನಡೆದಿದ್ದು, ಮಂಜು ಭಾಷಿಣಿ ಮತ್ತು ಅಶ್ವಿನಿ ಹೊರಬಿದ್ದಿದ್ದಾರೆ. ರಘು, ರಿಷಾ ಗೌಡ ಮತ್ತು ಸೂರಜ್ ಸಿಂಗ್ ವೈಲ್ಡ್ ಕಾರ್ಡ್ ಆಗಿ ಪ್ರವೇಶಿಸಿದ್ದಾರೆ. ಈ ಎಪಿಸೋಡ್‌ನಲ್ಲಿ ಮಾತನಾಡುವ ರೋಬೋ ಸುದೀಪ್ ಅವರ ಹೆಚ್ಚಿದ ಸಂಭಾವನೆ ಡೇಟಾ "ಡಿಲೀಟ್" ಆಗಿದೆ ಎಂದು ಹೇಳಿದೆ.

ಸುದೀಪ್ ಬಿಗ್ ಬಾಸ್ ಸಂಭಾವನೆ ಡೇಟಾ ಡಿಲೀಟ್; ಈ ಕಿತಾಪತಿ ಮಾಡಿದ್ದು ಯಾರು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 20, 2025 | 11:31 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBk 12) ಮೂರನೇ ವಾರವೇ ಫಿನಾಲೆ ನಡೆದಿದೆ. ಈ ಫಿನಾಲೆಯಲ್ಲಿ ಸಾಕಷ್ಟು ಮನರಂಜನೆಗಳು ಇದ್ದವು. ಅದೇ ರೀತಿ ಮಂಜು ಭಾಷಿಣಿ ಹಾಗೂ ಅಶ್ವಿನಿ ಔಟ್ ಆದರೆ, ರಘು, ರಿಷಾ ಗೌಡ ಹಾಗು ಸೂರಜ್ ಸಿಂಗ್ ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಕಾಲಿಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಸಂಭಾವನೆ ವಿಚಾರ ಕೂಡ ಚರ್ಚೆ ಆಯಿತು. ಶಾಕಿಂಗ್ ವಿಚಾರ ಎಂದರೆ ಸುದೀಪ್ ಸಂಭಾವನೆ ಡೇಟಾನೇ ಡಿಲೀಟ್ ಮಾಡಲಾಗಿದೆಯಂತೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಬಿಗ್ ಬಾಸ್​​ನಲ್ಲಿ ಪ್ರತಿ ಬಾರಿ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಅದೇ ರೀತಿ ಈ ಬಾರಿ ಬಿಗ್ ಬಾಸ್​ನಲ್ಲಿ ರೋಬೋನ ವೇದಿಕೆ ಮೇಲೆ ತರಲಾಯಿತು. ಹಾಗಂತ ಇದು ಸಣ್ಣ-ಪುಟ್ಟ ರೋಬೋ ಅಲ್ಲ. ಮಾತನಾಡುವ ರೋಬೋ. ಸುದೀಪ್ ಮಾತನಾಡಿದರೆ, ಅದಕ್ಕೆ ಉತ್ತರಿಸುತ್ತದೆ. ಈ ಎಪಿಸೋಡ್ ಫನ್ ಆಗಿತ್ತು. ಈ ವೇಳೆ ಸುದೀಪ್ ಬಗ್ಗೆ ಹಾಗೂ ಬಿಗ್ ಬಾಸ್ ಬಗ್ಗೆ ರೋಬೋ ಮಾತನಾಡಿತು.

‘ಬಿಗ್ ಬಾಸ್​ ಅಲ್ಲಿ 117 ಜನ ಬಾಯ್ಸ್, 121 ಜನ ಹುಡುಗಿಯರು ಬಂದಿದ್ದಾರೆ. ಅದರಲ್ಲಿ ವೈಲ್ಡ್ ಕಾರ್ಡ್ 20 ಜನ ಸೇರಿದ್ದಾರೆ. ಒಟ್ಟೂ 238 ಜನ ಇದ್ದಾರೆ. ನೀವು 348 ವೀಕೆಂಡ್ ಶೋ ಮಾಡಿದ್ದೀರಾ. 3 ಲೊಕೇಶನ್ ಚೇಂಜ್ ಆಗಿದೆ. ಡೈರೆಕ್ಟರ್​ಗಳೂ ಚೇಂಜ್ ಆಗಿದ್ದಾರೆ. ಆದರೆ, ನೀವು ಹಾಗೂ ಜನರ ಪ್ರೀತಿ ಮಾತ್ರ ಹಾಗೆಯೇ ಇದೆ’ ಎಂದು ರೋಬೋ ಹೇಳಿತು.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್-ಪ್ರಿಯಾ ಆ್ಯನಿವರ್ಸರಿಗೆ ಶುಭಾಶಯ ಕೋರಿದ ನಾಗಾರ್ಜುನ

‘ಇದನ್ನು ಹೇಳಬೇಕೋ ಗೊತ್ತಿಲ್ಲ. ಈ ಸೀಸನ್ ನಿಂದ ನಿಮ್ಮ ಸಂಭಾವನೆ ಎಷ್ಟು ಹೆಚ್ಚಾಗಿದೆ ಎಂಬುದು ಗೊತ್ತಿತ್ತು. ಆದರೆ, ಆ ಡೇಟಾನ ಯಾರೋ ಡಿಲೀಟ್ ಮಾಡಿಬಿಟ್ಟಿದ್ದಾರೆ. ಇನ್​ಕಾಗ್ನಿಟೋ ಮೂಡ್​ನಲ್ಲಿ ಮಾತನಾಡಬೇಕು. ಬ್ಯಾಕ್​ ಸ್ಟೇಜ್​ನಲ್ಲಿ ಮಾತನಾಡೋಣ’ ಎಂದು ರೋಬೋ ಸುದೀಪ್​ಗೆ ಹೇಳಿತು. ಈ ಎಪಿಸೋಡ್ ಸಖತ್ ಫನ್ ಆಗಿ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್