AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​

Coffee Nadu Chandu | Bigg Boss Kannada: ಕಾಫಿ ನಾಡು ಚಂದು ಅವರು ಬಿಗ್​ ಬಾಸ್​ಗೆ ಹೋದರೆ ವೀಕ್ಷಕರಿಗೆ ಸಖತ್​ ಮನರಂಜನೆ ಸಿಗಲಿದೆ ಎಂಬುದು ಕೆಲವರ ಲೆಕ್ಕಾಚಾರ. ಹಾಗಾಗಿ ಅವರ ಹೆಸರನ್ನು ಜನರು ಶಿಫಾರಸ್ಸು ಮಾಡುತ್ತಿದ್ದಾರೆ.

Coffee Nadu Chandu: ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​
ಕಾಫಿನಾಡು ಚಂದು
TV9 Web
| Edited By: |

Updated on:Jul 18, 2022 | 1:27 PM

Share

ಬಿಗ್​ ಬಾಸ್​ ಎಂದರೆ ವೀಕ್ಷಕರಿಗೆ ಸಖತ್ ಇಷ್ಟ. ಬೇರೆಲ್ಲ ರಿಯಾಲಿಟಿ ಶೋಗಿಂತ ಈ ಕಾರ್ಯಕ್ರಮ ಸಿಕ್ಕಾಪಟ್ಟೆ ಭಿನ್ನವಾಗಿರುತ್ತದೆ. ಬಿಗ್​ ಬಾಸ್​ ಎಪಿಸೋಡ್​ಗಳು ಹೇಗಿರುತ್ತವೆ ಎಂಬುದಕ್ಕಿಂತಲೂ ಈ ಬಾರಿ ಭಾಗವಹಿಸುವ ಸ್ಪರ್ಧಿಗಳು ಯಾರು ಎಂಬುದನ್ನು ತಿಳಿಯುವ ಕೌತುಕವೇ ಹೆಚ್ಚಾಗಿರುತ್ತದೆ. ಪ್ರತಿ ಬಾರಿ ಬಿಗ್​ ಬಾಸ್​ (BBK 9) ಆರಂಭಕ್ಕೂ ಮುನ್ನ ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಚರ್ಚೆ ನಡೆಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್​ ಸೃಷ್ಟಿ ಮಾಡಿದ ವ್ಯಕ್ತಿಗಳು ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡುತ್ತಾರೆ ಎಂಬುದು ವೀಕ್ಷಕರ ಊಹೆ. ಹಾಗಾಗಿ ಈ ಬಾರಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಕಾಫಿ ನಾಡು ಚಂದು ಕೂಡ ಚಾನ್ಸ್​ ಪಡೆಯಬಹುದು ಎಂದು ಕೆಲವರು ಊಹಿಸಿದ್ದಾರೆ. ಅಷ್ಟೇ ಅಲ್ಲ, ಚಂದುಗೆ (Coffee Nadu Chandu) ಅವಕಾಶ ಕೊಡಬೇಕು ಎಂದು ನೆಟ್ಟಿಗರು ಪರಮೇಶ್ವರ್​ ಗುಂಡ್ಕಲ್​ ಬಳಿ ಮನವಿ ಕೂಡ ಮಾಡಿದ್ದಾರೆ!

ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ಗಾಗಿ ‘ಕಲರ್ಸ್​ ಕನ್ನಡ’ ವಾಹಿನಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೊಡ್ಮನೆ ಸೆಟ್​ ವರ್ಕ್​ ಪ್ರಗತಿಯಲ್ಲಿದೆ. ಈಗಾಗಲೇ ಪ್ರೋಮೋ ಶೂಟ್​ ಮಾಡಲಾಗಿದೆ. ಕಿಚ್ಚ ಸುದೀಪ್​ ಅವರೇ ಈ ಸಲ ಕೂಡ ನಿರೂಪಣೆಯ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ಅಪ್​ಡೇಟ್​ ನೀಡಲು ಕಲರ್ಸ್​ ಕನ್ನಡ ವಾಹಿನಿಯ ಬಿಸ್ನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಅವರು ಒಂದೆರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಅದಕ್ಕೆ ಕಮೆಂಟ್​ ಮಾಡಿರುವ ನೆಟ್ಟಿಗರು ಕಾಫಿ ನಾಡು ಚಂದು ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

ಚಿಕ್ಕಮಗಳೂರು ಮೂಲದ ಚಂದು ಅವರು ವೃತ್ತಿಯಲ್ಲಿ ಆಟೋ ಡ್ರೈವರ್​ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನೇಕ ವಿಡಿಯೋಗಳನ್ನು ಹಂಚಿಕೊಂಡು ಅವರು ಫೇಮಸ್​ ಆಗಿದ್ದಾರೆ. ತಮ್ಮದೇ ಆದ ಶೈಲಿಯಲ್ಲಿ ಹಲವರಿಗೆ ಬರ್ತ್​ಡೇ ವಿಶ್​ ಮಾಡುವ ಮೂಲಕ ಅವರು ನೋಡುಗರಲ್ಲಿ ನಗು ಉಕ್ಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿಡಿಯೋಗಳು ವೈರಲ್​ ಆಗಿವೆ. ಅವರ ಶೈಲಿಯಲ್ಲೇ ಬರ್ತ್​ಡೇ ವಿಶ್​ ಮಾಡುವುದು ಟ್ರೆಂಡ್​ ಆಗಿದೆ!

ಇದನ್ನೂ ಓದಿ
Image
BBK 9: ಈ ಬಾರಿ ಕನ್ನಡ ಬಿಗ್​ ಬಾಸ್​ನಲ್ಲಿ ಯಾರೆಲ್ಲ ಇರಬೇಕು? ಈಗಲೇ ಶುರುವಾಗಿದೆ ಚರ್ಚೆ
Image
BBK 9: ‘ಕನ್ನಡ ಬಿಗ್​ ಬಾಸ್​’ 9ನೇ ಸೀಸನ್​ ಕೆಲಸ ಶುರು; ಬಿಗ್​ ಅಪ್​ಡೇಟ್​ ನೀಡಿದ ಪರಮೇಶ್ವರ್​ ಗುಂಡ್ಕಲ್​
Image
‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
Image
ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ

ಇಷ್ಟೆಲ್ಲ ಫೇಮಸ್​ ಆಗಿರುವ ಕಾಫಿ ನಾಡು ಚಂದು ಅವರು ಬಿಗ್​ ಬಾಸ್​ಗೆ ಹೋದರೆ ವೀಕ್ಷಕರಿಗೆ ಸಖತ್​ ಮನರಂಜನೆ ಸಿಗಲಿದೆ ಎಂಬುದು ಕೆಲವರ ಲೆಕ್ಕಾಚಾರ. ಹಾಗಾಗಿ ‘ಈ ಬಾರಿ ಕಾಫಿ ನಾಡು ಚಂದು ಅವರಿಗೆ ಅವಕಾಶ ನೀಡಿ’ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಆದರೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಯಾರಿಗೆಲ್ಲ ಚಾನ್ಸ್​ ಸಿಗಲಿದೆ ಎಂಬುದು ಸದ್ಯಕ್ಕಂತೂ ಸಸ್ಪೆನ್ಸ್​ ಆಗಿ ಉಳಿದುಕೊಂಡಿದೆ.

Published On - 1:27 pm, Mon, 18 July 22

Follow Us
17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಿದ್ದರಾಮಯ್ಯ ಸಜ್ಜು
17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಿದ್ದರಾಮಯ್ಯ ಸಜ್ಜು
ಸಿಬ್ಬಂದಿ ಬಳಿ ಪೈಲ್ಸ್​ ಆಪರೇಷನ್​ ಆಗಿರುವ ಪ್ರೂಫ್ ಕೇಳಿದ ಹಿರಿಯ ಅಧಿಕಾರಿ
ಸಿಬ್ಬಂದಿ ಬಳಿ ಪೈಲ್ಸ್​ ಆಪರೇಷನ್​ ಆಗಿರುವ ಪ್ರೂಫ್ ಕೇಳಿದ ಹಿರಿಯ ಅಧಿಕಾರಿ
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್