AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಸುದೀಪ್ ಎದುರು ನಡೆಯಲಿಲ್ಲ ಶೋಭಾ ಡ್ರಾಮಾ; ಗೆಟ್​ ಔಟ್​ ಎಂದ ಕಿಚ್ಚ

ನಟಿ ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಇಲ್ಲಸಲ್ಲದ ಡ್ರಾಮಾ ಮಾಡಿದ್ದಾರೆ. ಅದರಿಂದಾಗಿ ಕಿಚ್ಚ ಸುದೀಪ್​ ಅವರಿಗೆ ವಿಪರೀತ ಕೋಪ ಬಂದಿದೆ. ಈ ಕೂಡಲೇ ಮನೆ ಬಿಟ್ಟು ಹೋಗಿ ಎಂದು ಶೋಭಾಗೆ ಸುದೀಪ್​ ಆಜ್ಞೆ ಮಾಡಿದ್ದಾರೆ. ಕ್ಷಣಕ್ಕೊಂದು ಮಾತು ಬದಲಿಸಿ, ಪ್ರೇಕ್ಷಕರ ವೋಟ್​ಗೆ ಬೆಲೆ ನೀಡದ ಶೋಭಾ ಅವರಿಗೆ ಸುದೀಪ್​ ಅವರು ಗೆಟ್​ ಔಟ್​ ಎಂದಿದ್ದಾರೆ.

Bigg Boss Elimination: ಸುದೀಪ್ ಎದುರು ನಡೆಯಲಿಲ್ಲ ಶೋಭಾ ಡ್ರಾಮಾ; ಗೆಟ್​ ಔಟ್​ ಎಂದ ಕಿಚ್ಚ
ಶೋಭಾ ಶೆಟ್ಟಿ, ಸುದೀಪ್
Follow us
ಮದನ್​ ಕುಮಾರ್​
|

Updated on: Dec 01, 2024 | 11:35 PM

ವೈಲ್ಡ್ ಕಾರ್ಡ್​ ಮೂಲಕ ಬಿಗ್ ಬಾಸ್ ಮನೆಗೆ ಬರುವಾಗ ಶೋಭಾ ಶೆಟ್ಟಿ ಅವರು ಸಖತ್ ಸೌಂಡ್ ಮಾಡಿದ್ದರು. ಗೌತಮಿಯ ಮುಖವಾಡ ಕಳಚುತ್ತೇನೆ ಎಂದು ಸವಾಲು ಹಾಕಿದ್ದರು. ಈ ಮೊದಲೇ ಅವರು ‘ತೆಲುಗು ಬಿಗ್ ಬಾಸ್’ ಶೋನಲ್ಲಿ ಅನುಭವ ಗಳಿಸಿ ಬಂದಿದ್ದರು. ಹಾಗಿದ್ದರೂ ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಗಟ್ಟಿಯಾಗಿ ನಿಂತುಕೊಳ್ಳಲು ಶೋಭಾ ಶೆಟ್ಟಿಗೆ ಸಾಧ್ಯವಾಗಿಲ್ಲ. ಆದರೆ ಅದು ಇಲ್ಲಿ ಸಮಸ್ಯೆಯೇ ಅಲ್ಲ. ನಿಜಕ್ಕೂ ಭಾನುವಾರದ (ಡಿಸೆಂಬರ್​ 1) ಸಂಚಿಕೆಯಲ್ಲಿ ಸುದೀಪ್​ ಅವರ ಕೋಪಕ್ಕೆ ಕಾರಣ ಆಗಿದ್ದು ಶೋಭಾ ಅವರ ಡ್ರಾಮಾ!

ಶೋಭಾ ಶೆಟ್ಟಿ ಅವರಿಗೆ ಪ್ರೇಕ್ಷಕರಿಂದ ಹೆಚ್ಚಿನ ವೋಟ್​ ಬಂದಿದ್ದರಿಂದ ಅವರು ಸೇಫ್​ ಆದರು. ಆ ವಿಚಾರವನ್ನು ಸುದೀಪ್ ಮೊದಲು ಘೋಷಿಸಿದಾಗ, ‘ಜನರು ನನ್ನನ್ನು ವೋಟ್​ ಮಾಡಿ ಉಳಿಸಿದ್ದಾರೆ. ಏನು ಮಾತನಾಡಬೇಕು ಅಂತ ತಿಳಿಯುತ್ತಿಲ್ಲ. ಅನಾರೋಗ್ಯದ ಕಾರಣದಿಂದ ನನಗೆ ಆಟ ಆಡೋಕೆ ಆಗಲ್ಲ ಎನಿಸುತ್ತಿದೆ’ ಶೋಭಾ ಹೇಳಿದರು. ಆಗ ಅವರಿಗೆ ಸುದೀಪ್ ಬುದ್ಧಿಮಾತು ಹೇಳಿದರು. ‘ತಾಯಿ ನಿಧನರಾದಾಗಲೂ ನಾನು ನನ್ನ ಕರ್ತವ್ಯ ಮಾಡಿದ್ದೆ’ ಎಂದು ಹೇಳುವ ಮೂಲಕ ಸುದೀಪ್ ಅವರು ಶೋಭಾಗೆ ಸ್ಫೂರ್ತಿ ತುಂಬಿದರು.

ಸುದೀಪ್ ಮಾತಿನಿಂದ ಶೋಭಾಗೆ ಧೈರ್ಯ ಬಂತು. ‘ಕ್ಷಮಿಸಿ ಸರ್. ನಾನೇ ಪ್ರೇಕ್ಷಕರನ್ನು ತಪ್ಪಾಗಿ ಅರ್ಥ ಮಾಡಿಕೊಂಡಿದ್ದೆ. ನಿಮ್ಮ ಪ್ರೀತಿ, ಬೆಂಬಲಕ್ಕೆ ಧನ್ಯವಾದ. ನನ್ನ ಆಟ ನಾನು ತೋರಿಸುತ್ತೇನೆ. ಕಮ್​ಬ್ಯಾಕ್ ಮಾಡುತ್ತೇನೆ. ನನ್ನನ್ನು ನಾನು ಸಾಬೀತು ಮಾಡಿಕೊಳ್ಳುತ್ತೇನೆ. ಸುದೀಪ್ ಸರ್ ಮೌಲ್ಯಯುತ ಮಾತುಗಳಿಗೆ ಥ್ಯಾಂಕ್ಸ್’ ಎಂದು ಭಾಷಣ ಬಿಗಿದರು.

ಆದರೆ ಸಂಚಿಕೆ ಮುಗಿಯುವ ವೇಳೆಗೆ ಶೋಭಾ ಶೆಟ್ಟಿ ಅವರು ಹೊಸ ಡ್ರಾಮಾ ಶುರು ಮಾಡಿದರು. ಕೊನೆಯಲ್ಲಿ ಶಿಶಿರ್ ಮತ್ತು ಐಶ್ವರ್ಯಾ ಅವರು ಡೇಂಜರ್​ ಜೋನ್​ನಲ್ಲಿ ಇದ್ದರು. ಅವರಿಬ್ಬರ ಪೈಕಿ ಯಾರು ಹೊರಗೆ ಹೋಗುತ್ತಾರೆ ಎಂದು ಕೇಳಿದಾಗ ಶೋಭಾ ಕಣ್ಣೀರಿನ ಡ್ರಾಮಾ ಆರಂಭಿಸಿದರು. ‘ನನಗೆ ಇಲ್ಲಿ ಇರಲು ಆಗುತ್ತಿಲ್ಲ’ ಎಂದು ಅತ್ತರು. ಅದರಿಂದ ಸುದೀಪ್ ಅವರಿಗೆ ವಿಪರೀತ ಕೋಪ ಬಂತು.

ಇದನ್ನೂ ಓದಿ: ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ

‘ವೋಟ್ ಮಾಡಿದ ಜನಗಳಿಗೆ ಏನು ಮರ್ಯಾದೆ ಕೊಡುತ್ತೀದ್ದಿರಿ ನೀವು? ಅವರೇನು ಮೂರ್ಖರಾ? ಮೊದಲು ನೀವು ಮಾತನಾಡಿದ್ದು ಡ್ರಾಮಾನಾ? ನನ್ನ ಮಾತಿಗೆ ಮತ್ತು ಜನರಿಗೆ ಬೆಲೆ ಕೊಡದೇ ಇರುವವರ ಬಗ್ಗೆ ನನಗೆ ಸಿಂಪಥಿ ಬೇಡ. ಇದೆಲ್ಲ ದೊಡ್ಡ ಡ್ರಾಮಾ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಥರ ಯಾವತ್ತೂ ನಡದೇ ಇಲ್ಲ. ಜನರ ವೋಟ್​ಗೆ ನೀವು ಬೆಲೆ ಕೊಡಲಿಲ್ಲ. ನನ್ನನ್ನೇನು ಮೂರ್ಖ ಅಂದುಕೊಂಡಿದ್ದೀರಾ? ಚಲೋ.. ನಾನು ನಿಮ್ಮನ್ನು ಮನೆಗೆ ಕಳಿಸುತ್ತೇನೆ. ವೋಟ್ ಹಾಕಿದವರಿಗೆ ನಾನು ಕ್ಷಮೆ ಕೇಳುತ್ತೇನೆ’ ಎಂದು ಸುದೀಪ್ ಅವರು ಅಂತಿಮ ತೀರ್ಮಾನ ನೀಡಿದರು. ಶೋಭಾ ಮನೆ ಬಿಟ್ಟು ಹೋದರೋ ಇಲ್ಲವೋ ಎಂಬುದು ಸೋಮವಾರದ (ಡಿ.2) ಸಂಚಿಕೆಯಲ್ಲಿ ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ