AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸ್ಪರ್ಧಿಗಳು ಬಂದಿದ್ದೇಕೆ? ಬಾಯ್ತಪ್ಪಿ ನಿಜ ಹೇಳಿದ ಚೈತ್ರಾ

ಬಿಗ್ ಬಾಸ್ ಕನ್ನಡ 11 ಮನೆಗೆ ಮಾಜಿ ಸ್ಪರ್ಧಿಗಳು ಅತಿಥಿಗಳಾಗಿ ಬಂದಿದ್ದು, ಅವರ ಉದ್ದೇಶದ ಬಗ್ಗೆ ಚರ್ಚೆ ಶುರುವಾಗಿತ್ತು. ಚೈತ್ರಾ ಕುಂದಾಪುರ, ತಾವು ಸ್ಪರ್ಧಿಗಳ ಒಗ್ಗಟ್ಟು ಪರೀಕ್ಷಿಸಲು ಬಂದಿರುವುದಾಗಿ ಬಹಿರಂಗಪಡಿಸಿದ್ದಾರೆ. ಅತಿಥಿಗಳ ವರ್ತನೆಗೆ ಗಿಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ವೀಕೆಂಡ್‌ನಲ್ಲಿ ಸುದೀಪ್‌ ಎದುರು ಚರ್ಚೆಗೆ ಬರಬಹುದು. ಕಳೆದ ಸೀಸನ್‌ನಲ್ಲೂ ಇಂತಹದ್ದೇ ಘಟನೆ ನಡೆದಿತ್ತು.

ಮಾಜಿ ಸ್ಪರ್ಧಿಗಳು ಬಂದಿದ್ದೇಕೆ? ಬಾಯ್ತಪ್ಪಿ ನಿಜ ಹೇಳಿದ ಚೈತ್ರಾ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on: Nov 27, 2025 | 11:14 AM

Share

‘ಬಿಗ್ ಬಾಸ್ ಕನ್ನಡ ಸೀಸನ 11’ರ ಸ್ಪರ್ಧಿಗಳು ಈ ಸೀಸನ್​ಗೆ ಅತಿಥಿಗಳಾಗಿ ಬಂದಿದ್ದಾರೆ. ಇಡೀ ಬಿಗ್ ಬಾಸ್ ಮನೆ ಪ್ಯಾಲೇಸ್ ಆಗಿ ಬದಲಾಗಿದ್ದು, ಅತಿಥಿಗಳ ಅಬ್ಬರ ಜೋರಾಗಿದೆ. ಅವರು ಮನಸ್ಸಿಗೆ ಬಂದ ಕೆಲಸಗಳನ್ನು ಸ್ಪರ್ಧಿಗಳಿಂದ ಮಾಡಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಚೈತ್ರಾ ಅವರು ಆಡಿದ ಒಂದು ಮಾತು ಚರ್ಚೆ ಹುಟ್ಟುಹಾಕಿದೆ. ಅವರು ದೊಡ್ಮನೆಗೆ ಬಂದಿದ್ದು ಏಕೆ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

ಈ ಬಾರಿ ಬಿಗ್ ಬಾಸ್​ಗೆ ಚೈತ್ರಾ, ಮಂಜು, ರಜತ್, ಮೋಕ್ಷಿತಾ, ತ್ರಿವಿಕ್ರಂ ಅತಿಥಿಗಳಾಗಿ ಬಂದಿದ್ದಾರೆ. ಅವರುಗಳು ಇಡೀ ಮನೆಯನ್ನು ಆಳುತ್ತಿದ್ದಾರೆ. ಕಿರಿಕಿರಿ ಮಾಡಿದ ಗಿಲ್ಲಿಗೆ ವಿರುದ್ಧ ತಿರುಗಿ ಬಿದ್ದಿದ್ದಾರೆ.ಅಶ್ವಿನಿ ಅವರು ತಪ್ಪು ಮಾಡಿದಾಗ ಚೈತ್ರಾ ಮಾತನಾಡುತ್ತಿದ್ದರು. ಈ ವೇಳೆ ಅವರು ಒಂದು ವಿಷಯ ರಿವೀಲ್ ಮಾಡಿಬಿಟ್ಟಿದ್ದಾರೆ.

‘ನಿಮ್ಮಲ್ಲಿ ಒಗ್ಗಟ್ಟಿಲ್ಲ. ನಿಮ್ಮಲ್ಲಿ ಎಷ್ಟು ಒಗ್ಗಟು ಇದೆ ಎಂದು ನೋಡಬೇಕು. ಅದನ್ನು ಪರೀಕ್ಷೆ ಮಾಡೋಕೆ ನಾವು ಬಂದಿರೋದು’ ಎಂದು ಚೈತ್ರಾ ಕುಂದಾಪುರ ಅವರು ಹೇಳಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಸ್ಪರ್ಧಿಗಳು ಇಷ್ಟು ಕಠಿಣವಾಗಿ ನಡೆದುಕೊಳ್ಳಲು ಬಿಗ್ ಬಾಸ್ ಸೂಚನೆ ಕೂಡ ಇರಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಅತಿಥಿಗಳು ನಡೆದುಕೊಂಡ ರೀತಿಗೆ ಒಂದಾದ ಗಿಲ್ಲಿ-ಅಶ್ವಿನಿ; ಮೂಡಿತು ಗೆಳೆತನ

ಬಿಗ್ ಬಾಸ್ ಸೀಸನ್ 10ರಲ್ಲಿ ಪ್ರಥಮ್ ಅವರನ್ನು ಲಾರ್ಡ್ ಆಗಿ ದೊಡ್ಮನೆಗೆ ಕರೆಸಲಾಗಿತ್ತು. ಈ ವೇಳೆ ಅವರು ತಮಗೆ ಬೇಕಂತೆ ಸ್ಪರ್ಧಿಗಳನ್ನು ನಡೆಸಿಕೊಂಡಿದ್ದರು.ಇದನ್ನು ವಿರೋಧಿಸಬೇಕಿತ್ತು ಎಂಬರ್ಥದಲ್ಲಿ ಸುದೀಪ್ ಮಾತನಾಡಿದ್ದರು. ಈ ಬಾರಿ ಬಂದ ಅತಿಥಿಗಳು ಮನೆಯವರನ್ನು ತಮಗೆ ಬೇಕಾದ ರೀತಿ ನಡೆಸುಕೊಳ್ಳುತ್ತಿದ್ದಾರೆ. ಈ ಬಗ್ಗೆ ವೀಕಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಅತಿಥಿಗಳ ಉದ್ದಟತನವನ್ನು ಗಿಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಬಹುದು. ಅವರು ಎಲ್ಲೆ ಮೀರಿ ನಡೆದುಕೊಂಡಿದ್ದಕ್ಕೆ ಪ್ರಶ್ನೆ ಮಾಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!