AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ನಲ್ಲಿ ಸ್ವಾರ್ಥಿ ಯಾರು? ಸುದೀಪ್​ ಎದುರು ಮುಲಾಜಿಲ್ಲದೇ ಪಟ್ಟಿ ನೀಡಿದ ಸ್ಪರ್ಧಿಗಳು

Bigg Boss Kannada | Aryavardhan Guruji: ದೊಡ್ಮನೆಯಲ್ಲಿ ಹೆಚ್ಚು ಕಾಳಜಿ ಮಾಡುವುದು ಯಾರು? ಹೆಚ್ಚು ಸ್ವಾರ್ಥ ಬುದ್ಧಿ ಹೊಂದಿರುವವರು ಯಾರು? ಈ ವಿಚಾರದ ಕುರಿತು ಕಿಚ್ಚ ಸುದೀಪ್ ಎದುರಲ್ಲೇ ಚರ್ಚೆ ನಡೆದಿದೆ.

BBK9: ಬಿಗ್​ ಬಾಸ್​ನಲ್ಲಿ ಸ್ವಾರ್ಥಿ ಯಾರು? ಸುದೀಪ್​ ಎದುರು ಮುಲಾಜಿಲ್ಲದೇ ಪಟ್ಟಿ ನೀಡಿದ ಸ್ಪರ್ಧಿಗಳು
ಬಿಗ್ ಬಾಸ್ ಕನ್ನಡ ಸೀಸನ್ 9
TV9 Web
| Updated By: ಮದನ್​ ಕುಮಾರ್​|

Updated on:Nov 20, 2022 | 3:36 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಭಾವನೆಗಳ ಆಟ ಮುಂದುವರಿಸಿದೆ. ಈ ರಿಯಾಲಿಟಿ ಶೋನಲ್ಲಿ ಒಂದೊಂದು ಸಂದರ್ಭಕ್ಕೆ ತಕ್ಕಂತೆ ಒಂದೊಂದು ರೀತಿಯಲ್ಲಿ ಇರಬೇಕಾದ ಅನಿವಾರ್ಯತೆ ಸ್ಪರ್ಧಿಗಳಿಗೆ ಎದುರಾಗುತ್ತದೆ. ಸ್ನೇಹ ಕಾಪಾಡಿಕೊಳ್ಳುವುದರ ಜೊತೆಗೆ ನಿಷ್ಠುರವಾಗಿಯೂ ಇರಬೇಕಾದ ಸಂದರ್ಭ ಬರುತ್ತದೆ. ಅದರಲ್ಲೂ, ಟಾಸ್ಕ್​ ವಿಚಾರ ಬಂದಾಗ ಮುಲಾಜು ನೋಡಿಕೊಂಡು ಕೂರಲು ಸಾಧ್ಯವೇ ಇಲ್ಲ. ಈ ವಾರದ ಸಂಡೇ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಎಲ್ಲರಿಗೂ ನೇರವಾಗಿ ಒಂದು ಟಾಸ್ಕ್​ ನೀಡಿದ್ದಾರೆ. ದೊಡ್ಮನೆಯಲ್ಲಿ ಇರುವವರ ಪೈಕಿ ಹೆಚ್ಚು ಕಾಳಜಿ ಮಾಡುವವರು ಯಾರು ಹಾಗೂ ಹೆಚ್ಚು ಸ್ವಾರ್ಥಿ ಯಾರು ಎಂಬ ಪ್ರಶ್ನೆಯನ್ನು ಸುದೀಪ್ ಕೇಳಿದ್ದಾರೆ. ಅದಕ್ಕೆ ಎಲ್ಲರೂ ನೇರವಾಗಿಯೇ ಉತ್ತರ ನೀಡಿದ್ದಾರೆ. ಸ್ವಾರ್ಥಿಗಳ ಪಟ್ಟಿಯಲ್ಲಿ ರೂಪೇಶ್​ ರಾಜಣ್ಣ (Rupesh Rajanna) ಮತ್ತು ಆರ್ಯವರ್ಧನ್​ ಗುರೂಜಿ ಹೆಸರು ಹೆಚ್ಚಾಗಿ ಕೇಳಿಬಂದಿದೆ!

ರೂಪೇಶ್​ ರಾಜಣ್ಣ ಅವರು ಕನ್ನಡಪರ ಹೋರಾಟದ ಮೂಲಕ ಗುರುತಿಸಿಕೊಂಡವರು. ಈಗ ಅವರಿಗೆ ಬಿಗ್​ ಬಾಸ್​ ಶೋನಿಂದ ಜನಪ್ರಿಯತೆ ಹೆಚ್ಚಿದೆ. ಆರಂಭದ ವಾರಗಳಲ್ಲಿ ಕೊಂಚ ಸೈಲೆಂಟ್​ ಆಗಿದ್ದ ಅವರು ಈಗ ವೈಲೆಂಟ್​ ಆಗಿದ್ದಾರೆ. ತಮ್ಮ ಅನಿಸಿಕೆಯನ್ನು ನೇರವಾಗಿ ಹೇಳುವ ಮೂಲಕ ಗಮನ ಸೆಳೆಯುತ್ತಿ​ದ್ದಾರೆ. ಅವರಿಂದಾಗಿ ಮನೆಯಲ್ಲಿ ಕೆಲವೊಮ್ಮೆ ಜಗಳ ಆಗಿದ್ದು ಕೂಡ ಇದೆ. ಅವರಲ್ಲಿನ ಒಂದಷ್ಟು ಗುಣಗಳು ಇನ್ನಿತರ ಸ್ಪರ್ಧಿಗಳಿಗೆ ಇಷ್ಟ ಆಗಿಲ್ಲ. ಅವರಿಗೆ ಸ್ವಾರ್ಥ ಬುದ್ಧಿ ಹೆಚ್ಚಿದೆ ಎಂದು ಬಹುತೇಕರು ಹೇಳಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಅದೇ ರೀತಿ, ಆರ್ಯವರ್ಧನ್​ ಗುರೂಜಿ ಕೂಡ ಹಲವು ಕಾರಣಗಳಿಂದಾಗಿ ಗಮನ ಸೆಳೆಯುತ್ತಾರೆ. ಬಿಗ್​ ಬಾಸ್​ ಒಟಿಟಿಯಿಂದ ಟಿವಿ ಸೀಸನ್​ ತನಕ ಅವರ ಬಿಗ್​ ಬಾಸ್​ ಜರ್ನಿ ನಡೆದುಕೊಂಡು ಬಂದಿದೆ. ಕೆಲವೊಮ್ಮೆ ಮುಗ್ಧರಂತೆ ಕಾಣಿಸಿಕೊಳ್ಳುವ ಅವರಿಗೆ ದೊಡ್ಮನೆಯ ಒಂದಷ್ಟು ಸದಸ್ಯರಿಂದ ‘ಸ್ವಾರ್ಥಿ’ ಎಂಬ ಹಣೆಪಟ್ಟಿ ಸಿಕ್ಕಿದೆ.

ದೀಪಿಕಾ ದಾಸ್​, ರಾಕೇಶ್​ ಅಡಿಗ, ಪ್ರಶಾಂತ್​ ಸಂಬರ್ಗಿ, ರೂಪೇಶ್​ ಶೆಟ್ಟಿ ಕೂಡ ಸ್ವಾರ್ಥಿಗಳ ಪಟ್ಟಿಯಲ್ಲಿ ಇದ್ದಾರೆ. ಆದರೆ ಅತಿ ಹೆಚ್ಚು ಅಂಕ ಪಡೆದಿದ್ದು ರೂಪೇಶ್​ ರಾಜಣ್ಣ ಮತ್ತು ಆರ್ಯವರ್ಧನ್​ ಗುರೂಜಿ. ಈ ಕುರಿತಂತೆ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಹಂಚಿಕೊಂಡಿದೆ. ಇದು ಭಾನುವಾರ (ನ.20) ರಾತ್ರಿಯ ಸಂಚಿಕೆಯಲ್ಲಿ ಪ್ರಸಾರ ಆಗಲಿದೆ.

7ನೇ ವಾರವೇ ಆರ್ಯವರ್ಧನ್​ ಗುರೂಜಿ ಔಟ್​ ಆಗಬೇಕಿತ್ತು. ಆದರೆ ಆ ವಾರದಲ್ಲಿ ಎಲಿಮಿನೇಷನ್​ ಇಲ್ಲದ ಕಾರಣ ಅವರು ಸೇಫ್​ ಆಗಿದ್ದರು. ಮಗಳನ್ನು ನೋಡಬೇಕು ಎಂಬ ತವಕದಲ್ಲಿ ಇರುವ ತಾವು ಎಲಿಮಿನೇಟ್​ ಆದರೂ ಚಿಂತೆ ಇಲ್ಲ ಎಂದು ಗುರೂಜಿ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:36 pm, Sun, 20 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ