AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ನಲ್ಲಿ ಸ್ವಾರ್ಥಿ ಯಾರು? ಸುದೀಪ್​ ಎದುರು ಮುಲಾಜಿಲ್ಲದೇ ಪಟ್ಟಿ ನೀಡಿದ ಸ್ಪರ್ಧಿಗಳು

Bigg Boss Kannada | Aryavardhan Guruji: ದೊಡ್ಮನೆಯಲ್ಲಿ ಹೆಚ್ಚು ಕಾಳಜಿ ಮಾಡುವುದು ಯಾರು? ಹೆಚ್ಚು ಸ್ವಾರ್ಥ ಬುದ್ಧಿ ಹೊಂದಿರುವವರು ಯಾರು? ಈ ವಿಚಾರದ ಕುರಿತು ಕಿಚ್ಚ ಸುದೀಪ್ ಎದುರಲ್ಲೇ ಚರ್ಚೆ ನಡೆದಿದೆ.

BBK9: ಬಿಗ್​ ಬಾಸ್​ನಲ್ಲಿ ಸ್ವಾರ್ಥಿ ಯಾರು? ಸುದೀಪ್​ ಎದುರು ಮುಲಾಜಿಲ್ಲದೇ ಪಟ್ಟಿ ನೀಡಿದ ಸ್ಪರ್ಧಿಗಳು
ಬಿಗ್ ಬಾಸ್ ಕನ್ನಡ ಸೀಸನ್ 9
TV9 Web
| Edited By: |

Updated on:Nov 20, 2022 | 3:36 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಭಾವನೆಗಳ ಆಟ ಮುಂದುವರಿಸಿದೆ. ಈ ರಿಯಾಲಿಟಿ ಶೋನಲ್ಲಿ ಒಂದೊಂದು ಸಂದರ್ಭಕ್ಕೆ ತಕ್ಕಂತೆ ಒಂದೊಂದು ರೀತಿಯಲ್ಲಿ ಇರಬೇಕಾದ ಅನಿವಾರ್ಯತೆ ಸ್ಪರ್ಧಿಗಳಿಗೆ ಎದುರಾಗುತ್ತದೆ. ಸ್ನೇಹ ಕಾಪಾಡಿಕೊಳ್ಳುವುದರ ಜೊತೆಗೆ ನಿಷ್ಠುರವಾಗಿಯೂ ಇರಬೇಕಾದ ಸಂದರ್ಭ ಬರುತ್ತದೆ. ಅದರಲ್ಲೂ, ಟಾಸ್ಕ್​ ವಿಚಾರ ಬಂದಾಗ ಮುಲಾಜು ನೋಡಿಕೊಂಡು ಕೂರಲು ಸಾಧ್ಯವೇ ಇಲ್ಲ. ಈ ವಾರದ ಸಂಡೇ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಎಲ್ಲರಿಗೂ ನೇರವಾಗಿ ಒಂದು ಟಾಸ್ಕ್​ ನೀಡಿದ್ದಾರೆ. ದೊಡ್ಮನೆಯಲ್ಲಿ ಇರುವವರ ಪೈಕಿ ಹೆಚ್ಚು ಕಾಳಜಿ ಮಾಡುವವರು ಯಾರು ಹಾಗೂ ಹೆಚ್ಚು ಸ್ವಾರ್ಥಿ ಯಾರು ಎಂಬ ಪ್ರಶ್ನೆಯನ್ನು ಸುದೀಪ್ ಕೇಳಿದ್ದಾರೆ. ಅದಕ್ಕೆ ಎಲ್ಲರೂ ನೇರವಾಗಿಯೇ ಉತ್ತರ ನೀಡಿದ್ದಾರೆ. ಸ್ವಾರ್ಥಿಗಳ ಪಟ್ಟಿಯಲ್ಲಿ ರೂಪೇಶ್​ ರಾಜಣ್ಣ (Rupesh Rajanna) ಮತ್ತು ಆರ್ಯವರ್ಧನ್​ ಗುರೂಜಿ ಹೆಸರು ಹೆಚ್ಚಾಗಿ ಕೇಳಿಬಂದಿದೆ!

ರೂಪೇಶ್​ ರಾಜಣ್ಣ ಅವರು ಕನ್ನಡಪರ ಹೋರಾಟದ ಮೂಲಕ ಗುರುತಿಸಿಕೊಂಡವರು. ಈಗ ಅವರಿಗೆ ಬಿಗ್​ ಬಾಸ್​ ಶೋನಿಂದ ಜನಪ್ರಿಯತೆ ಹೆಚ್ಚಿದೆ. ಆರಂಭದ ವಾರಗಳಲ್ಲಿ ಕೊಂಚ ಸೈಲೆಂಟ್​ ಆಗಿದ್ದ ಅವರು ಈಗ ವೈಲೆಂಟ್​ ಆಗಿದ್ದಾರೆ. ತಮ್ಮ ಅನಿಸಿಕೆಯನ್ನು ನೇರವಾಗಿ ಹೇಳುವ ಮೂಲಕ ಗಮನ ಸೆಳೆಯುತ್ತಿ​ದ್ದಾರೆ. ಅವರಿಂದಾಗಿ ಮನೆಯಲ್ಲಿ ಕೆಲವೊಮ್ಮೆ ಜಗಳ ಆಗಿದ್ದು ಕೂಡ ಇದೆ. ಅವರಲ್ಲಿನ ಒಂದಷ್ಟು ಗುಣಗಳು ಇನ್ನಿತರ ಸ್ಪರ್ಧಿಗಳಿಗೆ ಇಷ್ಟ ಆಗಿಲ್ಲ. ಅವರಿಗೆ ಸ್ವಾರ್ಥ ಬುದ್ಧಿ ಹೆಚ್ಚಿದೆ ಎಂದು ಬಹುತೇಕರು ಹೇಳಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಅದೇ ರೀತಿ, ಆರ್ಯವರ್ಧನ್​ ಗುರೂಜಿ ಕೂಡ ಹಲವು ಕಾರಣಗಳಿಂದಾಗಿ ಗಮನ ಸೆಳೆಯುತ್ತಾರೆ. ಬಿಗ್​ ಬಾಸ್​ ಒಟಿಟಿಯಿಂದ ಟಿವಿ ಸೀಸನ್​ ತನಕ ಅವರ ಬಿಗ್​ ಬಾಸ್​ ಜರ್ನಿ ನಡೆದುಕೊಂಡು ಬಂದಿದೆ. ಕೆಲವೊಮ್ಮೆ ಮುಗ್ಧರಂತೆ ಕಾಣಿಸಿಕೊಳ್ಳುವ ಅವರಿಗೆ ದೊಡ್ಮನೆಯ ಒಂದಷ್ಟು ಸದಸ್ಯರಿಂದ ‘ಸ್ವಾರ್ಥಿ’ ಎಂಬ ಹಣೆಪಟ್ಟಿ ಸಿಕ್ಕಿದೆ.

ದೀಪಿಕಾ ದಾಸ್​, ರಾಕೇಶ್​ ಅಡಿಗ, ಪ್ರಶಾಂತ್​ ಸಂಬರ್ಗಿ, ರೂಪೇಶ್​ ಶೆಟ್ಟಿ ಕೂಡ ಸ್ವಾರ್ಥಿಗಳ ಪಟ್ಟಿಯಲ್ಲಿ ಇದ್ದಾರೆ. ಆದರೆ ಅತಿ ಹೆಚ್ಚು ಅಂಕ ಪಡೆದಿದ್ದು ರೂಪೇಶ್​ ರಾಜಣ್ಣ ಮತ್ತು ಆರ್ಯವರ್ಧನ್​ ಗುರೂಜಿ. ಈ ಕುರಿತಂತೆ ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಹಂಚಿಕೊಂಡಿದೆ. ಇದು ಭಾನುವಾರ (ನ.20) ರಾತ್ರಿಯ ಸಂಚಿಕೆಯಲ್ಲಿ ಪ್ರಸಾರ ಆಗಲಿದೆ.

7ನೇ ವಾರವೇ ಆರ್ಯವರ್ಧನ್​ ಗುರೂಜಿ ಔಟ್​ ಆಗಬೇಕಿತ್ತು. ಆದರೆ ಆ ವಾರದಲ್ಲಿ ಎಲಿಮಿನೇಷನ್​ ಇಲ್ಲದ ಕಾರಣ ಅವರು ಸೇಫ್​ ಆಗಿದ್ದರು. ಮಗಳನ್ನು ನೋಡಬೇಕು ಎಂಬ ತವಕದಲ್ಲಿ ಇರುವ ತಾವು ಎಲಿಮಿನೇಟ್​ ಆದರೂ ಚಿಂತೆ ಇಲ್ಲ ಎಂದು ಗುರೂಜಿ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:36 pm, Sun, 20 November 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ