AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಕನ್ನಡಪರ ಹೋರಾಟಗಾರರಿಗೆ ಪ್ರಶಾಂತ್​ ಸಂಬರ್ಗಿ ಅವಮಾನ? ಕೂಡಲೇ ಬಿಗ್​ಬಾಸ್​ನಿಂದ ಹೊರಗೆ ಕಳಿಸುವಂತೆ ಪ್ರತಿಭಟನೆ

Prashanth Sambargi | Rupesh Rajanna: ಪ್ರಶಾಂತ್​ ಸಂಬರ್ಗಿ ಮಾತನಾಡುವ ರೀತಿ ಅನೇಕರಿಗೆ ಇಷ್ಟ ಆಗುವುದಿಲ್ಲ. ಅದನ್ನು ಹಲವು ಬಾರಿ ಕೆಲವರು ನೇರವಾಗಿ ಹೇಳಿದ್ದುಂಟು. ಈ ವಿಚಾರವಾಗಿ ಈಗ ಮನೆಯಾಚೆಗೂ ವಿವಾದ ಸೃಷ್ಟಿ ಆಗಿದೆ.

BBK9: ಕನ್ನಡಪರ ಹೋರಾಟಗಾರರಿಗೆ ಪ್ರಶಾಂತ್​ ಸಂಬರ್ಗಿ ಅವಮಾನ? ಕೂಡಲೇ ಬಿಗ್​ಬಾಸ್​ನಿಂದ ಹೊರಗೆ ಕಳಿಸುವಂತೆ ಪ್ರತಿಭಟನೆ
ಪ್ರಶಾಂತ್ ಸಂಬರ್ಗಿ
TV9 Web
| Edited By: |

Updated on: Nov 03, 2022 | 5:16 PM

Share

ಪ್ರಶಾಂತ್​ ಸಂಬರ್ಗಿ (Prashanth Sambargi) ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ. ಈ ಹಿಂದಿನ ಬಿಗ್​ ಬಾಸ್​ ಸೀಸನ್​ನಲ್ಲಿ ಅವರು ಸಿಕ್ಕಾಪಟ್ಟೆ ಜಗಳ ಮಾಡಿಕೊಂಡಿದ್ದರು. ಈ ಬಾರಿ ಕೂಡ ಅದು ಮುಂದುವರಿದಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಸ್ಪರ್ಧಿಸುವ ಅವಕಾಶ ಪಡೆದಿರುವ ಅವರು ಒಂದಿಲ್ಲೊಂದು ಕಾರಣಕ್ಕೆ ರಾದ್ಧಾಂತ ಮಾಡುತ್ತಿದ್ದಾರೆ. ಅದು ಅವರ ಆಟದ ವೈಖರಿ ಎಂದು ಎಲ್ಲರೂ ಸುಮ್ಮನಾಗಿದ್ದರು. ಆದರೆ ಈಗ ಪ್ರಶಾಂತ್​ ಸಂಬರ್ಗಿ ಅವರು ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ರೂಪೇಶ್​ ರಾಜಣ್ಣ (Rupesh Rajanna) ಬಗ್ಗೆ ಮಾತನಾಡುವಾಗ ಪ್ರಶಾಂತ್​ ಅವರು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆರೋಪಿಸಿದ್ದಾರೆ. ಅಲ್ಲದೇ, ಬಿಗ್​ ಬಾಸ್ ಶೋ ವಿರುದ್ಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಜಗಳಗಳು ಕಾಮನ್​. ಆದರೆ ಹೊರಗಿನ ವ್ಯಕ್ತಿ, ಸಂಸ್ಥೆ ಅಥವಾ ಸಂಘಟನೆಗಳ ಬಗ್ಗೆ ಸ್ಪರ್ಧಿಗಳು ಆಕ್ಷೇಪಾರ್ಹವಾಗಿ ಮಾತನಾಡಿದಾಗ ದೊಡ್ಮನೆ ಆಚೆಗೂ ವಿವಾದದ ಕಿಡಿ ಹೊತ್ತಿಕೊಳ್ಳುತ್ತದೆ. ಕನ್ನಡಪರ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರೂಪೇಶ್​ ರಾಜಣ್ಣ ಅವರು ಈ ಬಾರಿಯ ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಪ್ರಶಾಂತ್​ ಸಂಬರ್ಗಿ ಟಾರ್ಗೆಟ್​ ಮಾಡಿದ್ದಾರೆ. ಅಷ್ಟೇ ಆಗಿದ್ದರೆ ಯಾರೂ ಕಿರಿಕ್​ ಮಾಡುತ್ತಿರಲಿಲ್ಲ. ಆದರೆ ಎಲ್ಲ ಕನ್ನಡಪರ ಹೋರಾಟಗಾರರ ಕುರಿತು ಮಾತನಾಡುವಾಗ ಪ್ರಶಾಂತ್​ ಸಂಬರ್ಗಿ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ.

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಹೊರಗೆ ಕಳಿಸದೇ ಇದ್ದರೆ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಪ್ರಸಾರ ಆಗುತ್ತಿದೆ. ಕಿಚ್ಚ ಸುದೀಪ್​ ಅವರು ಇದರ ನಿರೂಪಣೆ ಮಾಡುತ್ತಿದ್ದಾರೆ. ಹೊಸ ಸ್ಪರ್ಧಿಗಳ ಜೊತೆ ಹಳಬರಿಗೂ ಈ ಬಾರಿ ಅವಕಾಶ ನೀಡಲಾಗಿದೆ. ಪ್ರಶಾಂತ್​ ಸಂಬರ್ಗಿ ಕೂಡ ಹಳೇ ಸ್ಪರ್ಧಿ. ಅವರು ಮಾತನಾಡುವ ರೀತಿ ಅನೇಕರಿಗೆ ಇಷ್ಟ ಆಗುವುದಿಲ್ಲ. ಅದನ್ನು ಹಲವು ಬಾರಿ ಕೆಲವರು ನೇರವಾಗಿ ಹೇಳಿದ್ದುಂಟು. ಆದರೆ ಇಷ್ಟು ದಿನ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿದ್ದ ಅವರ ಕಿರಿಕ್​ ಈಗ ಮನೆಯಾಚೆಗೂ ಕಿಡಿ ಹೊತ್ತಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್