Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಕನ್ನಡಪರ ಹೋರಾಟಗಾರರಿಗೆ ಪ್ರಶಾಂತ್​ ಸಂಬರ್ಗಿ ಅವಮಾನ? ಕೂಡಲೇ ಬಿಗ್​ಬಾಸ್​ನಿಂದ ಹೊರಗೆ ಕಳಿಸುವಂತೆ ಪ್ರತಿಭಟನೆ

Prashanth Sambargi | Rupesh Rajanna: ಪ್ರಶಾಂತ್​ ಸಂಬರ್ಗಿ ಮಾತನಾಡುವ ರೀತಿ ಅನೇಕರಿಗೆ ಇಷ್ಟ ಆಗುವುದಿಲ್ಲ. ಅದನ್ನು ಹಲವು ಬಾರಿ ಕೆಲವರು ನೇರವಾಗಿ ಹೇಳಿದ್ದುಂಟು. ಈ ವಿಚಾರವಾಗಿ ಈಗ ಮನೆಯಾಚೆಗೂ ವಿವಾದ ಸೃಷ್ಟಿ ಆಗಿದೆ.

BBK9: ಕನ್ನಡಪರ ಹೋರಾಟಗಾರರಿಗೆ ಪ್ರಶಾಂತ್​ ಸಂಬರ್ಗಿ ಅವಮಾನ? ಕೂಡಲೇ ಬಿಗ್​ಬಾಸ್​ನಿಂದ ಹೊರಗೆ ಕಳಿಸುವಂತೆ ಪ್ರತಿಭಟನೆ
ಪ್ರಶಾಂತ್ ಸಂಬರ್ಗಿ
Follow us
TV9 Web
| Updated By: ಮದನ್​ ಕುಮಾರ್​

Updated on: Nov 03, 2022 | 5:16 PM

ಪ್ರಶಾಂತ್​ ಸಂಬರ್ಗಿ (Prashanth Sambargi) ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ. ಈ ಹಿಂದಿನ ಬಿಗ್​ ಬಾಸ್​ ಸೀಸನ್​ನಲ್ಲಿ ಅವರು ಸಿಕ್ಕಾಪಟ್ಟೆ ಜಗಳ ಮಾಡಿಕೊಂಡಿದ್ದರು. ಈ ಬಾರಿ ಕೂಡ ಅದು ಮುಂದುವರಿದಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ (Bigg Boss Kannada Season 9) ಸ್ಪರ್ಧಿಸುವ ಅವಕಾಶ ಪಡೆದಿರುವ ಅವರು ಒಂದಿಲ್ಲೊಂದು ಕಾರಣಕ್ಕೆ ರಾದ್ಧಾಂತ ಮಾಡುತ್ತಿದ್ದಾರೆ. ಅದು ಅವರ ಆಟದ ವೈಖರಿ ಎಂದು ಎಲ್ಲರೂ ಸುಮ್ಮನಾಗಿದ್ದರು. ಆದರೆ ಈಗ ಪ್ರಶಾಂತ್​ ಸಂಬರ್ಗಿ ಅವರು ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ರೂಪೇಶ್​ ರಾಜಣ್ಣ (Rupesh Rajanna) ಬಗ್ಗೆ ಮಾತನಾಡುವಾಗ ಪ್ರಶಾಂತ್​ ಅವರು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆರೋಪಿಸಿದ್ದಾರೆ. ಅಲ್ಲದೇ, ಬಿಗ್​ ಬಾಸ್ ಶೋ ವಿರುದ್ಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಜಗಳಗಳು ಕಾಮನ್​. ಆದರೆ ಹೊರಗಿನ ವ್ಯಕ್ತಿ, ಸಂಸ್ಥೆ ಅಥವಾ ಸಂಘಟನೆಗಳ ಬಗ್ಗೆ ಸ್ಪರ್ಧಿಗಳು ಆಕ್ಷೇಪಾರ್ಹವಾಗಿ ಮಾತನಾಡಿದಾಗ ದೊಡ್ಮನೆ ಆಚೆಗೂ ವಿವಾದದ ಕಿಡಿ ಹೊತ್ತಿಕೊಳ್ಳುತ್ತದೆ. ಕನ್ನಡಪರ ಹೋರಾಟದ ಮೂಲಕ ಗುರುತಿಸಿಕೊಂಡಿರುವ ರೂಪೇಶ್​ ರಾಜಣ್ಣ ಅವರು ಈ ಬಾರಿಯ ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಪ್ರಶಾಂತ್​ ಸಂಬರ್ಗಿ ಟಾರ್ಗೆಟ್​ ಮಾಡಿದ್ದಾರೆ. ಅಷ್ಟೇ ಆಗಿದ್ದರೆ ಯಾರೂ ಕಿರಿಕ್​ ಮಾಡುತ್ತಿರಲಿಲ್ಲ. ಆದರೆ ಎಲ್ಲ ಕನ್ನಡಪರ ಹೋರಾಟಗಾರರ ಕುರಿತು ಮಾತನಾಡುವಾಗ ಪ್ರಶಾಂತ್​ ಸಂಬರ್ಗಿ ಅವಮಾನ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ.

ಪ್ರಶಾಂತ್​ ಸಂಬರ್ಗಿ ಅವರನ್ನು ಕೂಡಲೇ ಬಿಗ್​​ ಬಾಸ್​ ಮನೆಯಿಂದ ಹೊರಗೆ ಕಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಹೊರಗೆ ಕಳಿಸದೇ ಇದ್ದರೆ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಬಿಗ್​ ಬಾಸ್​ ಸಿಬ್ಬಂದಿ ಜೊತೆಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಪ್ರಸಾರ ಆಗುತ್ತಿದೆ. ಕಿಚ್ಚ ಸುದೀಪ್​ ಅವರು ಇದರ ನಿರೂಪಣೆ ಮಾಡುತ್ತಿದ್ದಾರೆ. ಹೊಸ ಸ್ಪರ್ಧಿಗಳ ಜೊತೆ ಹಳಬರಿಗೂ ಈ ಬಾರಿ ಅವಕಾಶ ನೀಡಲಾಗಿದೆ. ಪ್ರಶಾಂತ್​ ಸಂಬರ್ಗಿ ಕೂಡ ಹಳೇ ಸ್ಪರ್ಧಿ. ಅವರು ಮಾತನಾಡುವ ರೀತಿ ಅನೇಕರಿಗೆ ಇಷ್ಟ ಆಗುವುದಿಲ್ಲ. ಅದನ್ನು ಹಲವು ಬಾರಿ ಕೆಲವರು ನೇರವಾಗಿ ಹೇಳಿದ್ದುಂಟು. ಆದರೆ ಇಷ್ಟು ದಿನ ಬಿಗ್​ ಬಾಸ್​ ಮನೆಗೆ ಮಾತ್ರ ಸೀಮಿತವಾಗಿದ್ದ ಅವರ ಕಿರಿಕ್​ ಈಗ ಮನೆಯಾಚೆಗೂ ಕಿಡಿ ಹೊತ್ತಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ