AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು

ಬೆಂಗಾಲಿ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ (43) ಅವರು 'ಭೋಲೆ ಬಾಬಾ ಪರ್ ಕರೆಗಾ' ಧಾರಾವಾಹಿ ಶೂಟಿಂಗ್ ವೇಳೆ ಪಶ್ಚಿಮ ಬಂಗಾಳದ ದಿಘಾದಲ್ಲಿ ಸಮುದ್ರದಲ್ಲಿ ಮುಳುಗಿ ನಿಧನರಾಗಿದ್ದಾರೆ. ಶೂಟಿಂಗ್ ಮುಗಿದ ನಂತರ ತಲ್ಸಾರಿ ಸಮುದ್ರ ತೀರಕ್ಕೆ ತೆರಳಿದ್ದ ರಾಹುಲ್ ನಾಪತ್ತೆಯಾಗಿದ್ದರು. ಬಳಿಕ ಸಮುದ್ರದಲ್ಲಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕಿಸಲು ಸಾಧ್ಯವಾಗಲಿಲ್ಲ.

ಧಾರಾವಾಹಿ ಶೂಟಿಂಗ್ ವೇಳೆ ಸಮುದ್ರದಲ್ಲಿ ಮುಳುಗಿ ನಟನ ಸಾವು
ರಾಹುಲ್
ರಾಜೇಶ್ ದುಗ್ಗುಮನೆ
|

Updated on: Mar 30, 2026 | 10:03 AM

Share

ಸಿನಿಮಾ ಶೂಟಿಂಗ್ ವೇಳೆ ಸಂಭವಿಸುವ ಅವಘಡಗಳು ಕೆಲ ಕಲಾವಿದರ ಬದುಕನ್ನೇ ಬದಲಿಸಿಬಿಡುತ್ತವೆ. ಈಗ ಧಾರಾವಾಹಿ (Serial) ಶೂಟಿಂಗ್ ವೇಳೆ ಸಂಭವಿಸಿದ ಅವಘಡ ಎಲ್ಲರಿಗೂ ಶಾಕ್ ತರಿಸಿದೆ. ಬೆಂಗಾಲಿ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ ಅವರು ಭಾನುವಾರ (ಮಾರ್ಚ್ 29) ನಿಧನ ಹೊಂದಿದ್ದಾರೆ. ಸಮುದ್ರದಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ಇದು ಬೆಂಗಾಲಿ ಚಿತ್ರರಂಗಕ್ಕೆ ಹಾಗೂ ಅಲ್ಲಿನ ಕಿರುತೆರೆ ಲೋಕಕ್ಕೆ ಶಾಕಿಂಗ್ ಎನಿಸಿದೆ. ರಾಹುಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು.

‘ಭೋಲೆ ಬಾಬಾ ಪರ್ ಕರೆಗಾ’ ಹೆಸರಿನ ಧಾರಾವಾಹಿ ಶೂಟಿಂಗ್ ಪಶ್ಚಿಮ ಬಂಗಾಳದ ದಿಘಾದಲ್ಲಿ ನಡೆಯುತ್ತಿತ್ತು. ಮಧ್ಯಾಹ್ನದ ವೇಳೆ ಶೂಟ್ ಪೂರ್ಣಗೊಂಡಿದೆ. ಪ್ಯಾಕಪ್ ಆದ ಬಳಿಕ ರಾಹುಲ್ ಒಂಟಿಯಾಗಿ ತಲ್ಸಾರಿ ಸಮುದ್ರದ ಕಡೆ ತೆರಳಿದ್ದಾರೆ. ಆ ಬಳಿಕ ಅವರು ಕಾಣೆಯಾದರು. ಈ ಬಗ್ಗೆ ಚರ್ಚೆ ನಡೆಯಿತು. ಅವರ ಹುಡುಕಾಟ ಆರಂಭ ಆಯಿತು.

ರಾಹುಲ್ ಸಮುದ್ರದಲ್ಲಿ ಕಾಣಿಸಿದರು. ಅವರನ್ನು ಎತ್ತಲು ಅಲ್ಲಿದ್ದವರು ಪ್ರಯತ್ನಿಸಿದರು. ನಂತರ ಅವರನ್ನು ಹೊರಕ್ಕೆ ತಂದು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಸಂಜೆ ವೇಳೆ ಅವರು ನಿಧನ ಹೊಂದಿದ್ದಾಗಿ ವೈದ್ಯರು ಘೋಷಿಸಿದರು. ನೀರಿನಲ್ಲಿ ಮುಳುಗಿದ್ದರಿಂದಲೇ ನಿಧನ ಹೊಂದಿದ್ದಾಗಿ ಪ್ರಾಥಮಿಕ ವರದಿಗಳು ಹೇಳಿವೆ.

ಇದನ್ನೂ ಓದಿ: ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ

ಈ ವಿಷಯವಾಗಿ ರಾಹುಲ್ ಪತ್ನಿ ಪ್ರಿಯಾಂಕಾ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಕಷ್ಟದ ಸಂದರ್ಭದಲ್ಲಿ ಖಾಸಗಿತನಕ್ಕೆ ಗೌರವ ಕೊಡಿ ಎಂದು ಅವರು ಬೇಡಿಕೊಂಡಿದ್ದಾರೆ. 2008ರಲ್ಲಿ ಸೀರಿಯಲ್ ಸೆಟ್ ಅಲ್ಲಿ ಇಬ್ಬರೂ ಭೇಟಿ ಆದರು. ನಿಜ ಜೀವನದಲ್ಲಿ ಇವರ ಮಧ್ಯೆ ಪ್ರೀತಿ ಮೂಡಿತು. 2010ರಲ್ಲಿ ಇವರು ಮದುವೆ ಆದರು. 2017ರಲ್ಲಿ ಇವರು ಬೇರೆ ಆದರು. 2018ರಲ್ಲಿ ಡಿವೋರ್ಸ್​​ಗೆ ಅರ್ಜಿ ಸಲ್ಲಿಸಿದರು. ಅಚ್ಚರಿ ಎಂದರೆ 2023ರಲ್ಲಿ ಇಬ್ಬರೂ ಮತ್ತೆ ಒಂದಾದರು. ಈ ದಂಪತಿಗೆ ಸೊಹೊಜ್ ಹೆಸರಿನ ಮಗ ಇದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?
ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?
VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ
VIDEO: ಟಾಸ್ ಫಿಕ್ಸಿಂಗ್..? ಮುಂಬೈ ಇಂಡಿಯನ್ಸ್ ವಿರುದ್ಧ ಗಂಭೀರ ಆರೋಪ
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಗ್ಯಾಸ್ ಸಿಲಿಂಡರ್ ಅಭಾವ ಬಗ್ಗೆ ಭಕ್ತರಿಗೆ ಸಿದ್ಧಗಂಗಾಶ್ರೀ ಮಹತ್ವದ ಕರೆ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ
ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ರೋಹಿತ್ ಶರ್ಮಾ