AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್​ಗೆ ಕಿರುತೆರೆ ಬೆಂಬಲ, ಮಂಗಳವಾರ ಚಿತ್ರೀಕರಣ ಇಲ್ಲ

Cauvery Dispute: ಕಾವೇರಿ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಮಂಗಳವಾರ ಬೆಂಗಳೂರು ಬಂದ್ ಆಚರಿಸುತ್ತಿದ್ದು, ಕಿರುತೆರೆಯವರು ಬೆಂಬಲ ನೀಡಿದ್ದು, ಮಂಗಳವಾರ ಚಿತ್ರೀಕರಣ ಬಂದ್ ಮಾಡಿದೆ.

ಬೆಂಗಳೂರು ಬಂದ್​ಗೆ ಕಿರುತೆರೆ ಬೆಂಬಲ, ಮಂಗಳವಾರ ಚಿತ್ರೀಕರಣ ಇಲ್ಲ
ಬೆಂಗಳೂರು ಬಂದ್
ಮಂಜುನಾಥ ಸಿ.
|

Updated on: Sep 24, 2023 | 8:05 PM

Share

ಕಾವೇರಿ ಸಮಸ್ಯೆ (Cauvery Dispute) ಮತ್ತೆ ಭುಗಿಲೆದ್ದಿದ್ದು, ಸುಪ್ರೀಂಕೋರ್ಟ್ ಆದೇಶದನ್ವಯ ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಹರಿಯ ಬಿಡಬೇಕಿದೆ. ಈ ಬಗ್ಗೆ ಸ್ಪಷ್ಟ ನಿಲುವಿಗೆ ಸರ್ಕಾರ ಇನ್ನಷ್ಟೆ ಬರಬೇಕಿದೆ. ಇದರ ನಡುವೆ ರೈತರು, ಕನ್ನಡ ಪರ ಸಂಘಟನೆಗಳು ಇನ್ನಿತರೆ ಕೆಲವು ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು ಮಂಗಳವಾರ (ಸೆಪ್ಟೆಂಬರ್ 24) ಬಂದ್​ಗೆ ಕರೆ ನೀಡಿವೆ. ಬಂದ್​ಗೆ ಹಲವು ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಿವೆ.

ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದ್ದು, ಬಂದ್​ಗೆ ಆಟೋ-ಟ್ಯಾಕ್ಸಿ, ಚಾಲಕರು, ಐಟಿ-ಬಿಟಿ ಒಕ್ಕೂಟ ಇನ್ನೂ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ. ಇದರ ನಡುವೆ ಕನ್ನಡ ಕಿರುತೆರೆ ವಲಯವೂ ಸಹ ಮಂಗಳವಾರದ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ.

ಈ ಬಗ್ಗೆ ಇಂದು (ಸೆಪ್ಟೆಂಬರ್ 24) ಸಭೆ ನಡೆಸಿ ತೀರ್ಮಾನ ಪ್ರಕಟಿಸಿದ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು. ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಬೆಂಬಲ ನೀಡುತ್ತಿರುವುದಾಗಿ ಘೋಷಿಸಿರುವುದು ಮಾತ್ರವೇ ಅಲ್ಲದೆ ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದಿದ್ದಾರೆ ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ಹೇಳಿದ್ದಾರೆ.

ಇದನ್ನೂ ಓದಿ:ಸೆ.26ರಂದು ಬೆಂಗಳೂರು ಬಂದ್ ಫಿಕ್ಸ್, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಪೂರ್ಣ ವಿವರ

ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಬಂದ್ ಮಾಡುವ ಜೊತೆಗೆ ಬಂದ್ ದಿನದಂದು ನಿಗದಿ ಪಡಿಸಿದ ಸ್ಥಳಕ್ಕೆ ಹಾಜರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಹ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ತನ್ನ ಸದಸ್ಯರು ಹಾಗೂ ಪದಾಧಿಕಾರಿಗಳ ಬಳಿ ಮನವಿ ಮಾಡಿದೆ.

ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಹಲವಾರು ಸಂಘಟನೆಗಳು ಸ್ವಯಂಘೋಷಿತವಾಗಿ ಬೆಂಬಲ ನೀಡುತ್ತಿವೆ. ಕಾವೇರಿ ವಿವಾದ ಕುರಿತಾಗಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ನೇತೃತ್ವದಲ್ಲಿ ಈ ಬೆಂಗಳೂರು ಬಂದ್ ನಡೆಯುತ್ತಿದೆ. ಆಟೋ-ಟ್ಯಾಕ್ಸಿ, ಖಾಸಗಿ ಬಸ್, ಲಾರಿ, ಕಾರ್ಮಿಕ ಸಂಘಟನೆ, ಐಟಿ-ಬಿಟಿ, ಹೋಟೆಲ್-ಕಾಂಡಿಮೆಂಟ್ಸ್, ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡಿವೆ.

ಚಿತ್ರೋದ್ಯಮವು ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದೆಯಾದರೂ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆಯೇ ಎಂಬ ಬಗ್ಗೆ ಅಧಿಕೃತ ಹೇಳಕೆ ಹೊರಬಿದ್ದಿಲ್ಲ. ಕನ್ನಡ ಚಿತ್ರರಂಗದ ಹಲವು ಸ್ಟಾರ್ ನಟ-ನಟಿಯರು ಕಾವೇರಿ ಹೋರಾಟದ ಪರವಾಗಿ ತಾವು ಇರುವುದಾಗಿ ಈಗಾಗಲೇ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ