AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chethana Raj: ನಟಿ ಚೇತನಾ ರಾಜ್​ಗೆ ಕಾಸ್ಮೆಟಿಕ್​ ಸರ್ಜರಿ ನಡೆಸಿದ್ದ ಆಸ್ಪತ್ರೆಗೆ ಬೀಗ; ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಆದೇಶ

Chethana Raj Death: ಬೆಂಗಳೂರಿನಲ್ಲಿ ಕಿರುತೆರೆ ನಟಿ ಚೇತನಾ ರಾಜ್​ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಚೇತನಾಗೆ ಕಾಸ್ಮೆಟಿಕ್​ ಸರ್ಜರಿ ನಡೆಸಿದ್ದ ಆಸ್ಪತ್ರೆಗೆ ಬೀಗ ಹಾಕುವಂತೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಆದೇಶ ನೀಡಿದ್ದಾರೆ.

Chethana Raj: ನಟಿ ಚೇತನಾ ರಾಜ್​ಗೆ ಕಾಸ್ಮೆಟಿಕ್​ ಸರ್ಜರಿ ನಡೆಸಿದ್ದ ಆಸ್ಪತ್ರೆಗೆ ಬೀಗ; ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಆದೇಶ
ಚೇತನಾ ರಾಜ್​
TV9 Web
| Updated By: shivaprasad.hs|

Updated on: May 18, 2022 | 10:16 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಿರುತೆರೆ ನಟಿ ಚೇತನಾ ರಾಜ್​ (Chethana Raj) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಚೇತನಾಗೆ ಕಾಸ್ಮೆಟಿಕ್​ ಸರ್ಜರಿ ನಡೆಸಿದ್ದ ಆಸ್ಪತ್ರೆಗೆ ಬೀಗ ಹಾಕುವಂತೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಆದೇಶ ನೀಡಿದ್ದಾರೆ. ಈ ಮೊದಲು ‘ಶೆಟ್ಟಿ ಕಾಸ್ಮೆಟಿಕ್ ಸೆಂಟರ್​’ಗೆ ಜಿಲ್ಲಾ ಆರೋಗ್ಯ ಅಧಿಕಾರಿ ನೋಟಿಸ್ ನೀಡಿದ್ದರು. ‘‘ಶೆಟ್ಟಿ ಕಾಸ್ಮೆಟಿಕ್ ಸೆಂಟರ್​ಗೆ ಪಾಲಿಕ್ಲಿನಿಕ್ ಮತ್ತು ಡಿಸ್ಪೆನ್ಸರಿಯನ್ನು ನಡೆಸಲು ಮಾತ್ರ ಪರವಾನಗಿ ನೀಡಲಾಗಿತ್ತು. ಅವರು ಮಾಡಿದ ಸರ್ಜರಿಗೆ ಪರವಾನಗಿ ಇರಲಿಲ್ಲ. ಈ ಸಂಬಂಧ ಘಟನೆಯ ಬಗ್ಗೆ ಲಿಖಿತ ವಿವರಣೆಯನ್ನು ಸಲ್ಲಿಸದಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’’ ಎಂದು ಬೆಂಗಳೂರು ನಗರದ ಜಿಲ್ಲಾ ಆರೋಗ್ಯಾಧಿಕಾರಿ ಎಎನ್​ಐಗೆ ತಿಳಿಸಿದ್ದರು. ಇದೀಗ ಕಾಸ್ಮೆಟಿಕ್ ಕೇಂದ್ರಕ್ಕೆ ಬೀಗ ಹಾಕುವಂತೆ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ್ದ ಮಾಹಿತಿ:

ಇದನ್ನೂ ಓದಿ
Image
Chethana Raj: ವೈದ್ಯರ ನಿರ್ಲಕ್ಷ್ಯದಿಂದಲೇ ಚೇತನಾ ರಾಜ್ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ ನಟಿಯ ತಂದೆ; ಯುಡಿಆರ್ ಪ್ರತಿ TV9​ಗೆ ಲಭ್ಯ
Image
Cosmetic Surgery: ಫ್ಯಾಟ್​ ಸರ್ಜರಿಯಿಂದ ಅಪಾಯವಿದೆಯಾ?; ಯಾವೆಲ್ಲ ದೇಶಗಳಲ್ಲಿ ಕಾಸ್ಮೆಟಿಕ್ ಸರ್ಜರಿಗೆ ನಿಷೇಧ?
Image
ಫ್ಯಾಟ್​ ಸರ್ಜರಿ ವೈಫಲ್ಯದಿಂದ ನಟಿ ಚೇತನಾ ರಾಜ್​ ನಿಧನ: ಪುತ್ರಿಯ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಪ್ಪ-ಅಮ್ಮ
Image
Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು

ಇದನ್ನೂ ಓದಿ: ಫ್ಯಾಟ್​ ಸರ್ಜರಿಯಿಂದ ಅಪಾಯವಿದೆಯಾ?; ಯಾವೆಲ್ಲ ದೇಶಗಳಲ್ಲಿ ಕಾಸ್ಮೆಟಿಕ್ ಸರ್ಜರಿಗೆ ನಿಷೇಧ?

ಚೇತನಾ ರಾಜ್ ಸಾವಿಗೆ ವೈದ್ಯರೇ ಕಾರಣ ಎಂದು ಆರೋಪಿಸಿರುವ ನಟಿಯ ತಂದೆ:

ಚೇತನಾ ಪರ ದೂರು ನೀಡಿರುವ ಅವರ ತಂದೆ ವರದರಾಜು, ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗಳು ಚೇತನಾ ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ. ಡಾ.ಸಾಹೇಬ್ ಗೌಡ ಶೆಟ್ಟಿ, ಡಾ.ಶೆಟ್ಟಿ ಕಾಸ್ಮಿಟಿಕ್ ಸೆಂಟರ್ ಮೇಲೆ ಗಂಭೀರ ಆರೋಪ ಮಾಡಲಾಗಿದ್ದು, ಸುಬ್ರಹ್ಮಣ್ಯ ನಗರ ಠಾಣೆಯಲ್ಲಿ ಸಿಆರ್ ಪಿಸಿ 174(C) ಅಡಿ UDR (Unnatural Death Report) ದಾಖಲಾಗಿದೆ. ಅನುಮಾನಾಸ್ಪದ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಲಿದ್ದು, ಆರೋಪ ಸಾಬೀತಾದಲ್ಲಿ ಐಪಿಎಸ್ ಸೆಕ್ಷನ್ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ.

ಎಫ್ಎಸ್ಎಲ್ ರಿಪೋರ್ಟ್, ಮರಣೋತ್ತರ ಪರೀಕ್ಷಾ ವರದಿ ಹಾಗೂ ವೈದ್ಯರ ಕಮಿಟಿ ನೀಡುವ ವರದಿ ಬಳಿಕ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಸುಬ್ರಹ್ಮಣ್ಯಪುರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಚೇತನಾ ಮೃತದೇಹ ಶ್ವಾಸಕೋಶ ಸೇರಿದಂತೆ ಕೆಲ ಅಂಗಾಂಗಗಳ ಮಾದರಿ ಸಂಗ್ರಹಿಸಲಾಗಿದ್ದು, ಅದರ ಮಾದರಿಯನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆ ಸಿಬ್ಬಂದಿ ಎಫ್ಎಸ್​ಎಲ್​ಗೆ ರವಾನೆ ಮಾಡಲಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಹಾಗೂ ಎಫ್ಎಸ್​ಎಲ್ ರಿಪೋರ್ಟ್ ಈ ಪ್ರಕರಣದಲ್ಲಿ ಮಹತ್ವವಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಚೇತನಾ ಸಾವಿಗೆ ನಿಖರ ಕಾರಣವಾಗಿರುವ ಸಾಕ್ಷಿ ಲಭ್ಯವಾಗುವ ಸಾಧ್ಯತೆ ಇದೆ.

Fat ಸರ್ಜರಿ ಎಷ್ಟು ಅಪಾಯಕಾರಿ? | ಈ ಕುರಿತು ಮಾಹಿತಿ ನೀಡಿದ್ದಾರೆ ಡಾ.ಎಂ ರಮೇಶ್​:

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ