AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿ ಬಂತೋ: ತನಿಷಾ ಕುಪ್ಪಂಡ ಮೇಲಿನ ಅಭಿಮಾನಕ್ಕಾಗಿ ಒಂದು ಹೊಸ ಹಾಡು

‘ಬೆಂಕಿ ಬಂತೋ..’ ಹಾಡಿನ ಮೂಲಕ ತನಿಷಾ ಕುಪ್ಪಂಡ ಅವರಿಗೆ ಫ್ಯಾನ್ಸ್​ ಬೆಂಬಲ ನೀಡುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈ ಹಾಡಿಗೆ ಶಮಂತ್ ನಾಗರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಶಶಾಂಕ್ ಶೇಷಗಿರಿ ಅವರು ಧ್ವನಿ ನೀಡಿದ್ದಾರೆ. ಸಂಗೀತ ನಿರ್ದೇಶನ ಕೂಡ ಅವರದ್ದೇ.

ಬೆಂಕಿ ಬಂತೋ: ತನಿಷಾ ಕುಪ್ಪಂಡ ಮೇಲಿನ ಅಭಿಮಾನಕ್ಕಾಗಿ ಒಂದು ಹೊಸ ಹಾಡು
ತನಿಷಾ ಕುಪ್ಪಂಡ
ಮದನ್​ ಕುಮಾರ್​
|

Updated on: Jan 09, 2024 | 1:17 PM

Share

‘ಮಂಗಳಗೌರಿ’ ಧಾರಾವಾಹಿಯಲ್ಲಿ ವಿಲನ್​ ಪಾತ್ರ ಮಾಡಿ ಜನಪ್ರಿಯತೆ ಪಡೆದವರು ನಟಿ ತನಿಷಾ ಕುಪ್ಪಂಡ. ನಂತರ ಅವರು ಹಿರಿತೆರೆಗೆ ಕಾಲಿಟ್ಟರು. ‘ಪೆಂಟಗನ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆಯಿತು. ಬಳಿಕ ಕೋಮಲ್ ನಟನೆಯ ‘ಉಂಡೆನಾಮ’ ಸಿನಿಮಾದಲ್ಲೂ ತನಿಷಾ ಕುಪ್ಪಂಡ (Tanisha Kuppanda) ಅಭಿನಯಿಸಿದರು. ಇನ್ನೂ ಹಲವು ಹೊಸ ಸಿನಿಮಾಗಳು ಅವರ ಕೈಯಲ್ಲಿ ಇವೆ. ಬೋಲ್ಡ್ ಆಗಿ ಗುರುತಿಸಿಕೊಂಡಿರುವ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಟಫ್​ ಸ್ಪರ್ಧಿ ಆಗಿದ್ದಾರೆ. ವಿಶೇಷ ಏನೆಂದರೆ, ಅವರಿಗಾಗಿ ‘ಬೆಂಕಿ ಬಂತೋ..’ (Benki Bantho) ಎಂಬ ಹೊಸ ಹಾಡು ಬಿಡುಗಡೆ ಮಾಡಲಾಗಿದೆ.

‘ಬೆಂಕಿ ಬಂತೋ..’ ಹಾಡಿನ ಮೂಲಕ ತನಿಷಾ ಕುಪ್ಪಂಡ ಅವರಿಗೆ ಫ್ಯಾನ್ಸ್​ ಬೆಂಬಲ ನೀಡುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈ ಹಾಡಿಗೆ ಶಮಂತ್ ನಾಗರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಶಶಾಂಕ್ ಶೇಷಗಿರಿ ಅವರು ಧ್ವನಿ ನೀಡಿದ್ದಾರೆ. ಸಂಗೀತ ನಿರ್ದೇಶನ ಕೂಡ ಅವರದ್ದೇ. ತನಿಷಾ ಕುಪ್ಪಂಡ ಅವರ ಎನರ್ಜಿ, ಮಾತಿನ ಶೈಲಿ, ಎದುರಾಳಿ ಸ್ಪರ್ಧಿಗಳಿಗೆ ಟಕ್ಕರ್ ಕೊಡುವ ರೀತಿ ಸೇರಿದಂತೆ ಅನೇಕ ಗುಣಗಳನ್ನು ಈ ಹಾಡಿನಲ್ಲಿ ವರ್ಣಿಸಲಾಗಿದೆ.

‘ಬಿಗ್ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ತನಿಷಾ ಕುಪ್ಪಂಡ ಅವರು ಬೆಂಕಿ ಎಂದೇ ಫೇಮಸ್​ ಆಗಿದ್ದಾರೆ. ಎಲ್ಲರೂ ಅವರನ್ನು ಬೆಂಕಿ ಎಂದು ಕರೆಯುತ್ತಾರೆ. ಸಖತ್​ ಪೈಪೋಟಿ ನೀಡುವ ಮೂಲಕ ಅವರು ಈವರೆಗೂ ಬಂದಿದ್ದಾರೆ. ಅವರು ಫಿನಾಲೆಗೂ ಎಂಟ್ರಿ ನೀಡಬೇಕು, ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಈ ಹಾಡಿಗೆ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ವರ್ತೂರು ಸಂತೋಷ್​-ತನಿಷಾ ನಡುವಿನ ಸಂಬಂಧ ಎಂಥದ್ದು? ಹತ್ತಿರದಿಂದ ಕಂಡ ಪವಿ ಹೇಳಿದ್ದಿಷ್ಟು..

‘ಎ2 ಫಿಲ್ಮ್ಸ್​’ ಯೂಟ್ಯೂಬ್​ ಚಾನೆಲ್​ನಲ್ಲಿ ‘ಬೆಂಕಿ ಬಂತೋ..’ ಹಾಡು ಬಿಡುಗಡೆ ಆಗಿದೆ. ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಮೊದಲು ಬಂದಾಗ ತನಿಷಾ ಕುಪ್ಪಂಡ ಅವರನ್ನು ಅಸಮರ್ಥರ ಗುಂಪಿನಲ್ಲಿ ಇರಿಸಲಾಗಿತ್ತು. ಕಡಿಮೆ ವೋಟ್​ ಪಡೆದಿದ್ದರಿಂದ ಅವರು ಅಸಮರ್ಥರು ಎನಿಸಿಕೊಂಡಿದ್ದರು. ಆದರೆ ನಂತರದ ದಿನಗಳಲ್ಲಿ ಉತ್ತಮವಾಗಿ ಆಡುವ ಮೂಲಕ ಅವರು ಮೆಚ್ಚುಗೆ ಪಡೆದರು. ವೀಕ್ಷಕರಿಂದ ಅಪಾರ ವೋಟ್​ ಪಡೆದು 92 ದಿನಗಳಿಗೂ ಹೆಚ್ಚು ಕಾಲ ಬಿಗ್​ ಬಾಸ್​ ಮನೆಯಲ್ಲಿ ಫೈಟ್​ ನೀಡಿ ಮುನ್ನುಗ್ಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ