AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿ ಬಂತೋ: ತನಿಷಾ ಕುಪ್ಪಂಡ ಮೇಲಿನ ಅಭಿಮಾನಕ್ಕಾಗಿ ಒಂದು ಹೊಸ ಹಾಡು

‘ಬೆಂಕಿ ಬಂತೋ..’ ಹಾಡಿನ ಮೂಲಕ ತನಿಷಾ ಕುಪ್ಪಂಡ ಅವರಿಗೆ ಫ್ಯಾನ್ಸ್​ ಬೆಂಬಲ ನೀಡುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈ ಹಾಡಿಗೆ ಶಮಂತ್ ನಾಗರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಶಶಾಂಕ್ ಶೇಷಗಿರಿ ಅವರು ಧ್ವನಿ ನೀಡಿದ್ದಾರೆ. ಸಂಗೀತ ನಿರ್ದೇಶನ ಕೂಡ ಅವರದ್ದೇ.

ಬೆಂಕಿ ಬಂತೋ: ತನಿಷಾ ಕುಪ್ಪಂಡ ಮೇಲಿನ ಅಭಿಮಾನಕ್ಕಾಗಿ ಒಂದು ಹೊಸ ಹಾಡು
ತನಿಷಾ ಕುಪ್ಪಂಡ
ಮದನ್​ ಕುಮಾರ್​
|

Updated on: Jan 09, 2024 | 1:17 PM

Share

‘ಮಂಗಳಗೌರಿ’ ಧಾರಾವಾಹಿಯಲ್ಲಿ ವಿಲನ್​ ಪಾತ್ರ ಮಾಡಿ ಜನಪ್ರಿಯತೆ ಪಡೆದವರು ನಟಿ ತನಿಷಾ ಕುಪ್ಪಂಡ. ನಂತರ ಅವರು ಹಿರಿತೆರೆಗೆ ಕಾಲಿಟ್ಟರು. ‘ಪೆಂಟಗನ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆಯಿತು. ಬಳಿಕ ಕೋಮಲ್ ನಟನೆಯ ‘ಉಂಡೆನಾಮ’ ಸಿನಿಮಾದಲ್ಲೂ ತನಿಷಾ ಕುಪ್ಪಂಡ (Tanisha Kuppanda) ಅಭಿನಯಿಸಿದರು. ಇನ್ನೂ ಹಲವು ಹೊಸ ಸಿನಿಮಾಗಳು ಅವರ ಕೈಯಲ್ಲಿ ಇವೆ. ಬೋಲ್ಡ್ ಆಗಿ ಗುರುತಿಸಿಕೊಂಡಿರುವ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಟಫ್​ ಸ್ಪರ್ಧಿ ಆಗಿದ್ದಾರೆ. ವಿಶೇಷ ಏನೆಂದರೆ, ಅವರಿಗಾಗಿ ‘ಬೆಂಕಿ ಬಂತೋ..’ (Benki Bantho) ಎಂಬ ಹೊಸ ಹಾಡು ಬಿಡುಗಡೆ ಮಾಡಲಾಗಿದೆ.

‘ಬೆಂಕಿ ಬಂತೋ..’ ಹಾಡಿನ ಮೂಲಕ ತನಿಷಾ ಕುಪ್ಪಂಡ ಅವರಿಗೆ ಫ್ಯಾನ್ಸ್​ ಬೆಂಬಲ ನೀಡುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈ ಹಾಡಿಗೆ ಶಮಂತ್ ನಾಗರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಶಶಾಂಕ್ ಶೇಷಗಿರಿ ಅವರು ಧ್ವನಿ ನೀಡಿದ್ದಾರೆ. ಸಂಗೀತ ನಿರ್ದೇಶನ ಕೂಡ ಅವರದ್ದೇ. ತನಿಷಾ ಕುಪ್ಪಂಡ ಅವರ ಎನರ್ಜಿ, ಮಾತಿನ ಶೈಲಿ, ಎದುರಾಳಿ ಸ್ಪರ್ಧಿಗಳಿಗೆ ಟಕ್ಕರ್ ಕೊಡುವ ರೀತಿ ಸೇರಿದಂತೆ ಅನೇಕ ಗುಣಗಳನ್ನು ಈ ಹಾಡಿನಲ್ಲಿ ವರ್ಣಿಸಲಾಗಿದೆ.

‘ಬಿಗ್ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ತನಿಷಾ ಕುಪ್ಪಂಡ ಅವರು ಬೆಂಕಿ ಎಂದೇ ಫೇಮಸ್​ ಆಗಿದ್ದಾರೆ. ಎಲ್ಲರೂ ಅವರನ್ನು ಬೆಂಕಿ ಎಂದು ಕರೆಯುತ್ತಾರೆ. ಸಖತ್​ ಪೈಪೋಟಿ ನೀಡುವ ಮೂಲಕ ಅವರು ಈವರೆಗೂ ಬಂದಿದ್ದಾರೆ. ಅವರು ಫಿನಾಲೆಗೂ ಎಂಟ್ರಿ ನೀಡಬೇಕು, ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಈ ಹಾಡಿಗೆ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ವರ್ತೂರು ಸಂತೋಷ್​-ತನಿಷಾ ನಡುವಿನ ಸಂಬಂಧ ಎಂಥದ್ದು? ಹತ್ತಿರದಿಂದ ಕಂಡ ಪವಿ ಹೇಳಿದ್ದಿಷ್ಟು..

‘ಎ2 ಫಿಲ್ಮ್ಸ್​’ ಯೂಟ್ಯೂಬ್​ ಚಾನೆಲ್​ನಲ್ಲಿ ‘ಬೆಂಕಿ ಬಂತೋ..’ ಹಾಡು ಬಿಡುಗಡೆ ಆಗಿದೆ. ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಮೊದಲು ಬಂದಾಗ ತನಿಷಾ ಕುಪ್ಪಂಡ ಅವರನ್ನು ಅಸಮರ್ಥರ ಗುಂಪಿನಲ್ಲಿ ಇರಿಸಲಾಗಿತ್ತು. ಕಡಿಮೆ ವೋಟ್​ ಪಡೆದಿದ್ದರಿಂದ ಅವರು ಅಸಮರ್ಥರು ಎನಿಸಿಕೊಂಡಿದ್ದರು. ಆದರೆ ನಂತರದ ದಿನಗಳಲ್ಲಿ ಉತ್ತಮವಾಗಿ ಆಡುವ ಮೂಲಕ ಅವರು ಮೆಚ್ಚುಗೆ ಪಡೆದರು. ವೀಕ್ಷಕರಿಂದ ಅಪಾರ ವೋಟ್​ ಪಡೆದು 92 ದಿನಗಳಿಗೂ ಹೆಚ್ಚು ಕಾಲ ಬಿಗ್​ ಬಾಸ್​ ಮನೆಯಲ್ಲಿ ಫೈಟ್​ ನೀಡಿ ಮುನ್ನುಗ್ಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!