ಬೆಂಕಿ ಬಂತೋ: ತನಿಷಾ ಕುಪ್ಪಂಡ ಮೇಲಿನ ಅಭಿಮಾನಕ್ಕಾಗಿ ಒಂದು ಹೊಸ ಹಾಡು

‘ಬೆಂಕಿ ಬಂತೋ..’ ಹಾಡಿನ ಮೂಲಕ ತನಿಷಾ ಕುಪ್ಪಂಡ ಅವರಿಗೆ ಫ್ಯಾನ್ಸ್​ ಬೆಂಬಲ ನೀಡುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈ ಹಾಡಿಗೆ ಶಮಂತ್ ನಾಗರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಶಶಾಂಕ್ ಶೇಷಗಿರಿ ಅವರು ಧ್ವನಿ ನೀಡಿದ್ದಾರೆ. ಸಂಗೀತ ನಿರ್ದೇಶನ ಕೂಡ ಅವರದ್ದೇ.

ಬೆಂಕಿ ಬಂತೋ: ತನಿಷಾ ಕುಪ್ಪಂಡ ಮೇಲಿನ ಅಭಿಮಾನಕ್ಕಾಗಿ ಒಂದು ಹೊಸ ಹಾಡು
ತನಿಷಾ ಕುಪ್ಪಂಡ
Follow us
|

Updated on: Jan 09, 2024 | 1:17 PM

‘ಮಂಗಳಗೌರಿ’ ಧಾರಾವಾಹಿಯಲ್ಲಿ ವಿಲನ್​ ಪಾತ್ರ ಮಾಡಿ ಜನಪ್ರಿಯತೆ ಪಡೆದವರು ನಟಿ ತನಿಷಾ ಕುಪ್ಪಂಡ. ನಂತರ ಅವರು ಹಿರಿತೆರೆಗೆ ಕಾಲಿಟ್ಟರು. ‘ಪೆಂಟಗನ್’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆಯಿತು. ಬಳಿಕ ಕೋಮಲ್ ನಟನೆಯ ‘ಉಂಡೆನಾಮ’ ಸಿನಿಮಾದಲ್ಲೂ ತನಿಷಾ ಕುಪ್ಪಂಡ (Tanisha Kuppanda) ಅಭಿನಯಿಸಿದರು. ಇನ್ನೂ ಹಲವು ಹೊಸ ಸಿನಿಮಾಗಳು ಅವರ ಕೈಯಲ್ಲಿ ಇವೆ. ಬೋಲ್ಡ್ ಆಗಿ ಗುರುತಿಸಿಕೊಂಡಿರುವ ಅವರು ಈಗ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಟಫ್​ ಸ್ಪರ್ಧಿ ಆಗಿದ್ದಾರೆ. ವಿಶೇಷ ಏನೆಂದರೆ, ಅವರಿಗಾಗಿ ‘ಬೆಂಕಿ ಬಂತೋ..’ (Benki Bantho) ಎಂಬ ಹೊಸ ಹಾಡು ಬಿಡುಗಡೆ ಮಾಡಲಾಗಿದೆ.

‘ಬೆಂಕಿ ಬಂತೋ..’ ಹಾಡಿನ ಮೂಲಕ ತನಿಷಾ ಕುಪ್ಪಂಡ ಅವರಿಗೆ ಫ್ಯಾನ್ಸ್​ ಬೆಂಬಲ ನೀಡುತ್ತಿದ್ದಾರೆ. ಅವರೇ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಈ ಹಾಡಿಗೆ ಶಮಂತ್ ನಾಗರಾಜ್ ಅವರು ಸಾಹಿತ್ಯ ಬರೆದಿದ್ದಾರೆ. ಖ್ಯಾತ ಗಾಯಕ ಶಶಾಂಕ್ ಶೇಷಗಿರಿ ಅವರು ಧ್ವನಿ ನೀಡಿದ್ದಾರೆ. ಸಂಗೀತ ನಿರ್ದೇಶನ ಕೂಡ ಅವರದ್ದೇ. ತನಿಷಾ ಕುಪ್ಪಂಡ ಅವರ ಎನರ್ಜಿ, ಮಾತಿನ ಶೈಲಿ, ಎದುರಾಳಿ ಸ್ಪರ್ಧಿಗಳಿಗೆ ಟಕ್ಕರ್ ಕೊಡುವ ರೀತಿ ಸೇರಿದಂತೆ ಅನೇಕ ಗುಣಗಳನ್ನು ಈ ಹಾಡಿನಲ್ಲಿ ವರ್ಣಿಸಲಾಗಿದೆ.

‘ಬಿಗ್ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ತನಿಷಾ ಕುಪ್ಪಂಡ ಅವರು ಬೆಂಕಿ ಎಂದೇ ಫೇಮಸ್​ ಆಗಿದ್ದಾರೆ. ಎಲ್ಲರೂ ಅವರನ್ನು ಬೆಂಕಿ ಎಂದು ಕರೆಯುತ್ತಾರೆ. ಸಖತ್​ ಪೈಪೋಟಿ ನೀಡುವ ಮೂಲಕ ಅವರು ಈವರೆಗೂ ಬಂದಿದ್ದಾರೆ. ಅವರು ಫಿನಾಲೆಗೂ ಎಂಟ್ರಿ ನೀಡಬೇಕು, ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಈ ಹಾಡಿಗೆ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ವರ್ತೂರು ಸಂತೋಷ್​-ತನಿಷಾ ನಡುವಿನ ಸಂಬಂಧ ಎಂಥದ್ದು? ಹತ್ತಿರದಿಂದ ಕಂಡ ಪವಿ ಹೇಳಿದ್ದಿಷ್ಟು..

‘ಎ2 ಫಿಲ್ಮ್ಸ್​’ ಯೂಟ್ಯೂಬ್​ ಚಾನೆಲ್​ನಲ್ಲಿ ‘ಬೆಂಕಿ ಬಂತೋ..’ ಹಾಡು ಬಿಡುಗಡೆ ಆಗಿದೆ. ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಮೊದಲು ಬಂದಾಗ ತನಿಷಾ ಕುಪ್ಪಂಡ ಅವರನ್ನು ಅಸಮರ್ಥರ ಗುಂಪಿನಲ್ಲಿ ಇರಿಸಲಾಗಿತ್ತು. ಕಡಿಮೆ ವೋಟ್​ ಪಡೆದಿದ್ದರಿಂದ ಅವರು ಅಸಮರ್ಥರು ಎನಿಸಿಕೊಂಡಿದ್ದರು. ಆದರೆ ನಂತರದ ದಿನಗಳಲ್ಲಿ ಉತ್ತಮವಾಗಿ ಆಡುವ ಮೂಲಕ ಅವರು ಮೆಚ್ಚುಗೆ ಪಡೆದರು. ವೀಕ್ಷಕರಿಂದ ಅಪಾರ ವೋಟ್​ ಪಡೆದು 92 ದಿನಗಳಿಗೂ ಹೆಚ್ಚು ಕಾಲ ಬಿಗ್​ ಬಾಸ್​ ಮನೆಯಲ್ಲಿ ಫೈಟ್​ ನೀಡಿ ಮುನ್ನುಗ್ಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ