ವರ್ತೂರ್ ಸಂತೋಷ್​ನ ಮನವೊಲಿಸಲು ಭಾಗ್ಯಾಳ ಕರೆಸಿದ ಬಿಗ್ ಬಾಸ್

ಈ ಸೀಸನ್​ನಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಥಮ್, ಶಾಸಕ ಪ್ರದೀಪ್ ಈಶ್ವರ್, ನಟಿ ತಾರಾ ಹಾಗೂ ‘ಬೃಂದಾವನ’ ಧಾರಾವಾಹಿ ತಂಡದವರು ಬಂದು ಹೋಗಿದ್ದಾರೆ. ಈಗ ಸುಷ್ಮಾ ರಾವ್ ಕೂಡ ದೊಡ್ಮನೆಗೆ ಬಂದಿದ್ದಾರೆ. ಅವರು ಸಂತೋಷ್ ಅವರ ಮನ ಒಲಿಸಲು ಪ್ರಯತ್ನಿಸಿದ್ದಾರೆ.

ವರ್ತೂರ್ ಸಂತೋಷ್​ನ ಮನವೊಲಿಸಲು ಭಾಗ್ಯಾಳ ಕರೆಸಿದ ಬಿಗ್ ಬಾಸ್
ಬಿಗ್ ಬಾಸ್
Follow us
| Updated By: ರಾಜೇಶ್ ದುಗ್ಗುಮನೆ

Updated on:Nov 13, 2023 | 8:33 AM

ವರ್ತೂರು ಸಂತೋಷ್ ಅವರು ಬಿಗ್ ಬಾಸ್ (Bigg Boss) ಮನೆಯಿಂದ ಹೊರಹೋಗುವುದಾಗಿ ಹಠ ಹಿಡಿದು ಕುಳಿತಿದ್ದಾರೆ. ಅವರನ್ನು ಮನ ಒಲಿಸಲು ಮೊದಲು ಸುದೀಪ್ ಪ್ರಯತ್ನಿಸಿದರು. ಆದರೆ, ಇದು ಸಾಧ್ಯವಾಗಲಿಲ್ಲ. ಆ ಬಳಿಕ ಅವರು ವೇದಿಕೆಯಿಂದ ಹೊರ ನಡೆದರು. ಮನೆ ಮಂದಿ ಕೂಡ ವರ್ತೂರು ಸಂತೋಷ್ ಅವರ ಮನ ಒಲಿಸಲು ಪ್ರಯತ್ನಿಸಿದರು. ಬಳಿಕ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಭಾಗ್ಯ ಪಾತ್ರ ಮಾಡುತ್ತಿರುವ ಸುಷ್ಮಾ ರಾವ್ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ!

ಬಿಗ್ ಬಾಸ್​ನಲ್ಲಿ ಹೊರಗಿನಿಂದ ಅತಿಥಿಗಳು ಬರೋದು ಅಪರೂಪಕ್ಕೊಮ್ಮೆ. ಆದರೆ, ಈ ಬಾರಿಯ ಬಿಗ್ ಬಾಸ್ ಆ ರೀತಿಯಲ್ಲಿ ಇಲ್ಲ. ಈ ಸೀಸನ್​ನಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಥಮ್, ಶಾಸಕ ಪ್ರದೀಪ್ ಈಶ್ವರ್, ನಟಿ ತಾರಾ ಹಾಗೂ ‘ಬೃಂದಾವನ’ ಧಾರಾವಾಹಿ ತಂಡದವರು ಬಂದು ಹೋಗಿದ್ದಾರೆ. ಈಗ ಸುಷ್ಮಾ ರಾವ್ ಕೂಡ ದೊಡ್ಮನೆಗೆ ಬಂದಿದ್ದಾರೆ. ಅವರು ಸಂತೋಷ್ ಅವರ ಮನ ಒಲಿಸಲು ಪ್ರಯತ್ನಿಸಿದ್ದಾರೆ.

ಸುದೀಪ್ ಅವರು ಸಂತೋಷ್ ಅವರ ಬಳಿ ಬಿಗ್ ಬಾಸ್​ನಲ್ಲೇ ಇರುವಂತೆ ಕೋರಿದರು. ಆದರೆ, ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುವುದಾಗಿ ಹಠ ಹಿಡಿದರು. ಇದು ಸುದೀಪ್​ಗೆ ಬೇಸರ ಮೂಡಿಸಿದೆ. 34 ಲಕ್ಷ ವೋಟ್ ಬಿದ್ದ ಹೊರತಾಗಿಯೂ ತಾವು ಹೊರ ನಡೆಯುವುದಾಗಿ ಅವರು ಹೇಳಿದ್ದಾರೆ. ಹೀಗೇಕೆ ಎನ್ನುವ ಪ್ರಶ್ನೆ ಮನೆ ಮಂದಿಗೆ ಮೂಡಿದೆ. ‘ಹೊರಗೆ ಎಲ್ಲವೂ ಸಹಜವಾಗಿದೆ’ ಎಂದು ಸುದೀಪ್ ಹೇಳಿದರೂ ವರ್ತೂರು ಸಂತೋಷ್ ಅವರು ಒಪ್ಪಲು ರೆಡಿ ಇರಲಿಲ್ಲ. ಕೊನೆಗೆ ಸುದೀಪ್ ಅವರು ವೇದಿಕೆಯಿಂದ ನಡೆದ ಬಳಿಕ ದೊಡ್ಮನೆಗೆ ಸುಷ್ಮಾ ರಾವ್ ಬಂದಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಹಠ ಕಾಣುತ್ತಿಲ್ಲ’; ಎಂದ ಸುದೀಪ್; ‘ನನಗೆ ಅದು ತುಂಬಾ ಕಾಡುತ್ತಿದೆ’ ಎಂದ ಸಂತೋಷ್

‘ನಾನು ನಿನ್ನ ಅಕ್ಕ ಎಂದುಕೋ. ನಿನ್ನಿಂದ ಆಗಲ್ಲ ಎನ್ನೋದನ್ನು ತೆಗೆದುಹಾಕು’ ಎಂದು ಸುಷ್ಮಾ ಕೇಳಿಕೊಂಡಿದ್ದಾರೆ. ‘ನನ್ನ ಕೈಯಲ್ಲಿ ಆಗುತ್ತಿಲ್ಲ’ ಎಂದು ಸಂತೋಷ್ ಪದೇಪದೇ ಹೇಳುತ್ತಿದ್ದಾರೆ. ಡ್ರೋನ್ ಪ್ರತಾಪ್ ಊಟ ತಂದುಕೊಟ್ಟರೂ ಅದನ್ನು ಅವರು ಸ್ವೀಕರಿಸಲಿಲ್ಲ. ಇಂದಿನ ಎಪಿಸೋಡ್​ನಲ್ಲಿ ಅವರು ಇರುತ್ತಾರಾ ಅಥವಾ ಹೋಗುತ್ತಾರಾ ಅನ್ನೋ ಪ್ರಶ್ನೆಗೆ ಉತ್ತರ ಸಿಗಬೇಕಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:32 am, Mon, 13 November 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ