AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಗ್ಗೆ ಬಿಗ್​ಬಾಸ್ ಮನೆ ಒಳಗೆ ಏನು ಹೇಳಿಕೊಂಡಿದ್ದಾರೆ ವರ್ತೂರು ಸಂತೋಷ್?

Varthur Santhosh: ವರ್ತೂರು ಸಂತೋಷ್ ಮದುವೆಯಾಗಿರುವ ವಿಷಯ ವಿವಾದ ಎಬ್ಬಿಸಿದೆ. ಸಂತೋಷ್ ಅವರ ಮಾವ ಮಾಧ್ಯಮಗಳ ಮುಂದೆ ತಮ್ಮ ಅಳಿಯನ ಬಗ್ಗೆ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಖಾಸಗಿ ಜೀವನದ ಬಗ್ಗೆ, ಮದುವೆ ಬಗ್ಗೆ ವರ್ತೂರು ಸಂತೋಷ್ ಬಿಗ್​ಬಾಸ್ ಮನೆಯ ಒಳಗೆ ಏನು ಹೇಳುಕೊಂಡಿದ್ದಾರೆ ಎಂಬುದನ್ನು ಈ ವಾರ ಮನೆಯಿಂದ ಹೊರಗೆ ಬಂದ ಸದಸ್ಯರು ಹೇಳಿದ್ದಾರೆ.

ಮದುವೆ ಬಗ್ಗೆ ಬಿಗ್​ಬಾಸ್ ಮನೆ ಒಳಗೆ ಏನು ಹೇಳಿಕೊಂಡಿದ್ದಾರೆ ವರ್ತೂರು ಸಂತೋಷ್?
ವರ್ತೂರು ಸಂತೋಷ್
ಮಂಜುನಾಥ ಸಿ.
|

Updated on: Nov 20, 2023 | 10:40 PM

Share

ಹಳ್ಳಿಕಾರ್ ತಳಿಗಳ ಸಂರಕ್ಷಣೆ ಕುರಿತಾಗಿ ಕೆಲಸ ಮಾಡುತ್ತಿದ್ದ ವರ್ತೂರು ಸಂತೋಷ್ (Varthur Santhosh) ಬಿಗ್​ಬಾಸ್ ಮನೆಯ ಒಳಗೆ ಹೋದ ಬಳಿಕ ಒಂದರ ಹಿಂದೊಂದು ವಿವಾದಗಳಿಗೆ ಗುರಿಯಾಗುತ್ತಿದ್ದಾರೆ. ಬಿಗ್​ಬಾಸ್​ ಮನೆಯೊಳಗೆ ಹೋದ ಕೆಲವೇ ದಿನಗಳಲ್ಲಿ ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್ ಜೈಲು ಪಾಲಾದರು. ಅದಾದ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದರಾದರೂ, ಈಗ ವರ್ತೂರು ಸಂತೋಷ್​ರ ಖಾಸಗಿ ಜೀವನ ವಿವಾದಕ್ಕೆ ಈಡಾಗಿದೆ.

ವರ್ತೂರು ಸಂತೋಷ್​ರಿಗೆ ಮದುವೆ ಆಗಿದ್ದರೂ ಅದನ್ನು ಮುಚ್ಚಿಟ್ಟಿದ್ದಾರೆ, ಈಗ ಮತ್ತೊಂದು ಮದುವೆ ಆಗಲು ಸಜ್ಜಾಗಿದ್ದಾರೆ ಎಂದು ಆರೋಪಿಸಲಾಗಿದೆ. ವರ್ತೂರು ಸಂತೋಷ್​ರ ಪತ್ನಿಯ ತಂದೆ ತಮ್ಮ ಅಳಿಯನ ವಿರುದ್ಧ ಮಾಧ್ಯಮಗಳ ಮುಂದೆ ಕೂತು ಸರಣಿ ಆರೋಪಗಳನ್ನು ಮಾಡಿದ್ದಾರೆ. ವರ್ತೂರು ಸಂತೋಷ್ ಮಹಿಳಾ ಪೀಡಕ, ಮಗಳನ್ನು ಕೊಲ್ಲಲು ಯತ್ನಿಸಿದ್ದ, ಆತನಿಗೆ ಮಾದಕ ವಸ್ತು ಸೇವಿಸುವ ಅಭ್ಯಾಸವಿದೆ ಇನ್ನೂ ಹಲವು ಆರೋಪಗಳನ್ನು ಮಾಡಿದ್ದಾರೆ.

ಇದೇ ವೀಕೆಂಡ್​ನಲ್ಲಿ ಬಿಗ್​ಬಾಸ್ ಮನೆಯಿಂದ ಭಾಗ್ಯಶ್ರೀ ಹಾಗೂ ಇಶಾನಿ ಅವರುಗಳು ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಹಲವು ಚಾನೆಲ್​ಗಳು ಇವರಿಬ್ಬರ ಸಂದರ್ಶನ ಮಾಡುತ್ತಿವೆ. ವರ್ತೂರು ಸಂತೋಷ್ ಕುರಿತಾಗಿಯೂ ಪ್ರಶ್ನೆಗಳನ್ನು ಕೇಳಲಾಗಿದೆ. ಅಸಲಿಗೆ ವರ್ತೂರು ಸಂತೋಷ್​ರ ಖಾಸಗಿ ಜೀವನದ ಕುರಿತು ಹೊರ ಬಂದಿರುವ ವಿಷಯಗಳು ಭಾಗ್ಯಶ್ರೀ ಹಾಗೂ ಇಶಾನಿ ಅವರಿಗೆ ಆಶ್ಚರ್ಯ ಮೂಡಿಸಿವೆ.

ಇದನ್ನೂ ಓದಿ:ಬಿಗ್​ಬಾಸ್ ಮನೆಯಲ್ಲಿ ಫೇಕ್ ಯಾರು? ಈ ಬಾರಿಯ ಫೈನಲಿಸ್ಟ್ ಯಾರು: ಇಶಾನಿ ಉತ್ತರ

ಟಿವಿ9 ಜೊತೆಗಿನ ಸಂದರ್ಶನದಲ್ಲಿ ಭಾಗ್ಯಶ್ರೀ ಹೇಳಿರುವಂತೆ, ವರ್ತೂರು ಸಂತೋಷ್ ಅವರ ಖಾಸಗಿ ಜೀವನದ ಬಗ್ಗೆ ಹೆಚ್ಚಿಗೇನೂ ಗೊತ್ತಿಲ್ಲ, ಆದರೆ ಬಿಗ್​ಬಾಸ್ ಮನೆಯಲ್ಲಿದ್ದಾಗ ತನ್ನೊಟ್ಟಿಗೆ ಮಾತನಾಡುತ್ತಾ, ‘ಬಿಗ್​ಬಾಸ್ ಮನೆಯಿಂದ ಹೊರಗೆ ಹೋದ ಮೇಲೆ ಮದುವೆ ಆಗಲಿದ್ದೇನೆ’ ಎಂದಿದ್ದರಂತೆ. ಅಲ್ಲಿಗೆ ಒಬ್ಬ ಪತ್ನಿ ಹಾಗೂ ಮಗಳು ಇರುವಾಗಲೇ ವರ್ತೂರು ಸಂತೋಷ್ ಮದುವೆ ಆಗುವ ನಿಶ್ಚಯ ಮಾಡಿದ್ದಾರೆ. ಅಲ್ಲದೆ ಬಿಗ್​ಬಾಸ್ ಮನೆಯಲ್ಲಿ ತಮಗೆ ಮದುವೆ ಆಗಿದೆ ಎಂಬ ವಿಷಯವನ್ನು ಯಾರೊಟ್ಟಿಗೂ ಹೇಳಿಕೊಂಡಿಲ್ಲವಂತೆ.

ಅಲ್ಲದೆ ವರ್ತೂರು ಸಂತೋಷ್ ಬಂಧನವಾದ ವಿಷಯವೂ ಸಹ ಬಿಗ್​ಬಾಸ್ ಮನೆಯಲ್ಲಿರುವ ಯಾರಿಗೂ ಗೊತ್ತಿಲ್ಲವಂತೆ. ವರ್ತೂರು ಸಂತೋಷ್ ಮನೆಯಲ್ಲಿ ಯಾರಿಗೋ ಆರೋಗ್ಯ ಸರಿಯಿಲ್ಲದ ಕಾರಣ ಅವರು ಹೊರಗೆ ಹೋಗಿ ಬಂದಿದ್ದಾರೆ ಎಂದುಕೊಂಡಿದ್ದರಂತೆ ಭಾಗ್ಯಶ್ರೀ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ