AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವಿನ್ನರ್ ಸುನೀಲ್​; ಸಿಕ್ಕಿದ್ದು ಇಷ್ಟೊಂದು ಹಣವಾ.. ಉಳಿದವರಿಗೆಷ್ಟು?

Bharjari Bachelor's Season 2 Winner: ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫೈನಲ್ ಜುಲೈ 27ರಂದು ನಡೆಯಿತು. ಸುನೀಲ್ ಮತ್ತು ಅಮೃತಾ ಜೋಡಿ ಗೆಲುವು ಸಾಧಿಸಿದೆ. ಡ್ರೋನ್ ಪ್ರತಾಪ್ ಮತ್ತು ಗಗನಾ ಎರಡನೇ ಸ್ಥಾನ, ರಕ್ಷಕ್ ಮತ್ತು ರಮೋಲಾ ಮೊದಲ ರನ್ನರ್ ಅಪ್ ಸ್ಥಾನ ಪಡೆದರು.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವಿನ್ನರ್ ಸುನೀಲ್​; ಸಿಕ್ಕಿದ್ದು ಇಷ್ಟೊಂದು ಹಣವಾ.. ಉಳಿದವರಿಗೆಷ್ಟು?
ಸುನೀಲ್-ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jul 28, 2025 | 7:38 AM

Share

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ (Bharjari Bachelor’s) ಹಲವು ತಿಂಗಳುಗಳ ಕಾಲ ಮನರಂಜನೆ ನೀಡಿದೆ. ಭಾನುವಾರ (ಜುಲೈ 27) ಈ ಶೋನ ಫಿನಾಲೆ ಸಂಜೆ 6 ಗಂಟೆಯಿಂದ ಪ್ರಸಾರ ಕಂಡಿದೆ. ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಮನರಂಜನೆ ನೀಡಿದರು. ಅಂತಿಮವಾಗಿ ವಿನ್ನರ್ ಹೆಸರನ್ನು ಘೋಷಣೆ ಮಾಡಲಾಯಿತು. ಸುನೀಲ್ ಈ ಬಾರಿಯ ಕಪ್ ಎತ್ತಿದ್ದಾರೆ.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಪ್ರತಿ ಪುರುಷ ಸ್ಪರ್ಧಿಗೆ ಒಬ್ಬರು ಮಹಿಳಾ ಸ್ಪರ್ಧಿ ಮೆಂಟರ್ ಇರುತ್ತಾರೆ. ಈ ರೀತಿಯಲ್ಲಿ ಶೋ ಆರಂಭ ಆಯಿತು. ಈ ಬಾರಿ ರವಿಚಂದ್ರನ್ ಹಾಗೂ ರಚಿತಾ ರಾಮ್ ಅವರು ಜಡ್ಜ್ ಸ್ಥಾನದಲ್ಲಿ ಇದ್ದರು. ನಿರಂಜನ್ ದೇಶಪಾಂಡೆ ಶೋನ ನಡೆಸಿಕೊಟ್ಟಿದ್ದಾರೆ. ಎಲ್ಲಾ ಸ್ಪರ್ಧಿಗಳು ಸಾಕಷ್ಟು ಮನರಂಜನೆ ನೀಡಿದ್ದಾರೆ. ವೇದಿಕೆ ಮಾತ್ರವಲ್ಲದೆ, ಹಳ್ಳಿಗಳಿಗೂ ತೆರಳಿ ಶೋ ಮಾಡಲಾಯಿತು.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಬ್ಲಾಕ್​ಬಸ್ಟರ್ ಕಲೆಕ್ಷನ್; ‘ಎಕ್ಕ’ ದಾಖಲೆ ಉಡೀಸ್
Image
ಕಡಿಮೆ ಶೋ ಕೊಟ್ಟರೂ ಸು ಫ್ರಮ್ ಸೋ ಆರ್ಭಟದ ಕಲೆಕ್ಷನ್; ಬಾಕ್ಸ್ ಆಫೀಸ್ ಉಡೀಸ್
Image
Su from So Review: ನಗುವಿನ ಅಲೆಯಲ್ಲಿ ತೇಲಿಸೋ ಸುಲೋಚನಾ
Image
Exclusive: ಅಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ
View this post on Instagram

A post shared by Zee Kannada (@zeekannada)

View this post on Instagram

A post shared by Zee Kannada (@zeekannada)

ಫಿನಾಲೆ ಎಪಿಸೋಡ್​ನಲ್ಲಿ ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಡ್ಯಾನ್ಸ್​ಗಳನ್ನು ಮಾಡಿದರು. 10 ಜೋಡಿಗಳು ಈ ಬಾರಿ ಸ್ಪರ್ಧಿಸಿದ್ದರು. ಸುನೀಲ್ ಅವರು ವಿನ್ನರ್ ಎಂದು ರವಿಚಂದ್ರನ್ ಘೋಷಣೆ ಮಾಡಿದರು. ಈ ಮೂಲಕ ಸುನೀಲ್ ಹಾಗೂ ಅಮೃತಾ ಜೋಡಿ ಅಂತಿಮವಾಗಿ ವಿನ್ ಆಯಿತು. ಅವರಿಗೆ ಕಪ್ ಹಾಗೂ 15 ಲಕ್ಷ ರೂಪಾಯಿ ಕ್ಯಾಶ್ ಪ್ರೈಜ್ ಸಿಕ್ಕಿದೆ.

ಇದನ್ನೂ ಓದಿ: ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಎಲ್ಲರಲ್ಲೂ ಸಾರ್ಥಕತೆಯ ಭಾವನೆ

ಸುನೀಲ್ ಮಾತನಾಡುವಾಗ ಕೈ ನಡುಗುತ್ತಿತ್ತು. ‘ಶೋಗೆ ಬರಬೇಕೋ ಅಥವಾ ಬೇಡವೋ ಎಂದು ಆಲೋಚಿಸುತ್ತಿದ್ದೆ. ಈಗ ಶೋಗೆ ಬಂದು ಟ್ರೋಫಿ ಹಿಡಿದುಕೊಂಡಿದ್ದೇನೆ. ತುಂಬಾ ಖುಷಿ ಆಗುತ್ತಿದೆ. 20 ಜನರ ಟ್ರೋಫಿ ಇದು’ ಎಂದರು. ಡ್ರೋನ್ ಪ್ರತಾಪ್​ ಹಾಗೂ ಗಗನಾ ಜೋಡಿಗೆ ಎರಡನೇ ರನ್ನರ್ ಅಪ್ ಸ್ಥಾನ ಹಾಗೂ ರಕ್ಷಕ್ ಮತ್ತು ರಮೋಲಾ ಜೋಡಿಗೆ ಮೊದಲ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಪ್ರತಾಪ್​ಗೆ 3 ಲಕ್ಷ ರೂಪಾಯಿ ಸಿಕ್ಕಿತು. ಅದರಲ್ಲಿ ಅರ್ಧ ಹಣವನ್ನು ಗಗನಾಗೆ ನೀಡೋದಾಗಿ ಪ್ರತಾಪ್ ಹೇಳಿದರು. ರಕ್ಷ್​ಗೆ 10 ಲಕ್ಷ ರೂಪಾಯಿ ನೀಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ