‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವಿನ್ನರ್ ಸುನೀಲ್​; ಸಿಕ್ಕಿದ್ದು ಇಷ್ಟೊಂದು ಹಣವಾ.. ಉಳಿದವರಿಗೆಷ್ಟು?

Bharjari Bachelor's Season 2 Winner: ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫೈನಲ್ ಜುಲೈ 27ರಂದು ನಡೆಯಿತು. ಸುನೀಲ್ ಮತ್ತು ಅಮೃತಾ ಜೋಡಿ ಗೆಲುವು ಸಾಧಿಸಿದೆ. ಡ್ರೋನ್ ಪ್ರತಾಪ್ ಮತ್ತು ಗಗನಾ ಎರಡನೇ ಸ್ಥಾನ, ರಕ್ಷಕ್ ಮತ್ತು ರಮೋಲಾ ಮೊದಲ ರನ್ನರ್ ಅಪ್ ಸ್ಥಾನ ಪಡೆದರು.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವಿನ್ನರ್ ಸುನೀಲ್​; ಸಿಕ್ಕಿದ್ದು ಇಷ್ಟೊಂದು ಹಣವಾ.. ಉಳಿದವರಿಗೆಷ್ಟು?
ಸುನೀಲ್-ಪ್ರತಾಪ್

Updated on: Jul 28, 2025 | 7:38 AM

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ (Bharjari Bachelor’s) ಹಲವು ತಿಂಗಳುಗಳ ಕಾಲ ಮನರಂಜನೆ ನೀಡಿದೆ. ಭಾನುವಾರ (ಜುಲೈ 27) ಈ ಶೋನ ಫಿನಾಲೆ ಸಂಜೆ 6 ಗಂಟೆಯಿಂದ ಪ್ರಸಾರ ಕಂಡಿದೆ. ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಮನರಂಜನೆ ನೀಡಿದರು. ಅಂತಿಮವಾಗಿ ವಿನ್ನರ್ ಹೆಸರನ್ನು ಘೋಷಣೆ ಮಾಡಲಾಯಿತು. ಸುನೀಲ್ ಈ ಬಾರಿಯ ಕಪ್ ಎತ್ತಿದ್ದಾರೆ.

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಪ್ರತಿ ಪುರುಷ ಸ್ಪರ್ಧಿಗೆ ಒಬ್ಬರು ಮಹಿಳಾ ಸ್ಪರ್ಧಿ ಮೆಂಟರ್ ಇರುತ್ತಾರೆ. ಈ ರೀತಿಯಲ್ಲಿ ಶೋ ಆರಂಭ ಆಯಿತು. ಈ ಬಾರಿ ರವಿಚಂದ್ರನ್ ಹಾಗೂ ರಚಿತಾ ರಾಮ್ ಅವರು ಜಡ್ಜ್ ಸ್ಥಾನದಲ್ಲಿ ಇದ್ದರು. ನಿರಂಜನ್ ದೇಶಪಾಂಡೆ ಶೋನ ನಡೆಸಿಕೊಟ್ಟಿದ್ದಾರೆ. ಎಲ್ಲಾ ಸ್ಪರ್ಧಿಗಳು ಸಾಕಷ್ಟು ಮನರಂಜನೆ ನೀಡಿದ್ದಾರೆ. ವೇದಿಕೆ ಮಾತ್ರವಲ್ಲದೆ, ಹಳ್ಳಿಗಳಿಗೂ ತೆರಳಿ ಶೋ ಮಾಡಲಾಯಿತು.

ಇದನ್ನೂ ಓದಿ
‘ಸು ಫ್ರಮ್ ಸೋ’ ಬ್ಲಾಕ್​ಬಸ್ಟರ್ ಕಲೆಕ್ಷನ್; ‘ಎಕ್ಕ’ ದಾಖಲೆ ಉಡೀಸ್
ಕಡಿಮೆ ಶೋ ಕೊಟ್ಟರೂ ಸು ಫ್ರಮ್ ಸೋ ಆರ್ಭಟದ ಕಲೆಕ್ಷನ್; ಬಾಕ್ಸ್ ಆಫೀಸ್ ಉಡೀಸ್
Su from So Review: ನಗುವಿನ ಅಲೆಯಲ್ಲಿ ತೇಲಿಸೋ ಸುಲೋಚನಾ
Exclusive: ಅಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ

ಫಿನಾಲೆ ಎಪಿಸೋಡ್​ನಲ್ಲಿ ಎಲ್ಲಾ ಸ್ಪರ್ಧಿಗಳು ವಿವಿಧ ರೀತಿಯಲ್ಲಿ ಡ್ಯಾನ್ಸ್​ಗಳನ್ನು ಮಾಡಿದರು. 10 ಜೋಡಿಗಳು ಈ ಬಾರಿ ಸ್ಪರ್ಧಿಸಿದ್ದರು. ಸುನೀಲ್ ಅವರು ವಿನ್ನರ್ ಎಂದು ರವಿಚಂದ್ರನ್ ಘೋಷಣೆ ಮಾಡಿದರು. ಈ ಮೂಲಕ ಸುನೀಲ್ ಹಾಗೂ ಅಮೃತಾ ಜೋಡಿ ಅಂತಿಮವಾಗಿ ವಿನ್ ಆಯಿತು. ಅವರಿಗೆ ಕಪ್ ಹಾಗೂ 15 ಲಕ್ಷ ರೂಪಾಯಿ ಕ್ಯಾಶ್ ಪ್ರೈಜ್ ಸಿಕ್ಕಿದೆ.

ಇದನ್ನೂ ಓದಿ: ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಎಲ್ಲರಲ್ಲೂ ಸಾರ್ಥಕತೆಯ ಭಾವನೆ

ಸುನೀಲ್ ಮಾತನಾಡುವಾಗ ಕೈ ನಡುಗುತ್ತಿತ್ತು. ‘ಶೋಗೆ ಬರಬೇಕೋ ಅಥವಾ ಬೇಡವೋ ಎಂದು ಆಲೋಚಿಸುತ್ತಿದ್ದೆ. ಈಗ ಶೋಗೆ ಬಂದು ಟ್ರೋಫಿ ಹಿಡಿದುಕೊಂಡಿದ್ದೇನೆ. ತುಂಬಾ ಖುಷಿ ಆಗುತ್ತಿದೆ. 20 ಜನರ ಟ್ರೋಫಿ ಇದು’ ಎಂದರು. ಡ್ರೋನ್ ಪ್ರತಾಪ್​ ಹಾಗೂ ಗಗನಾ ಜೋಡಿಗೆ ಎರಡನೇ ರನ್ನರ್ ಅಪ್ ಸ್ಥಾನ ಹಾಗೂ ರಕ್ಷಕ್ ಮತ್ತು ರಮೋಲಾ ಜೋಡಿಗೆ ಮೊದಲ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಪ್ರತಾಪ್​ಗೆ 3 ಲಕ್ಷ ರೂಪಾಯಿ ಸಿಕ್ಕಿತು. ಅದರಲ್ಲಿ ಅರ್ಧ ಹಣವನ್ನು ಗಗನಾಗೆ ನೀಡೋದಾಗಿ ಪ್ರತಾಪ್ ಹೇಳಿದರು. ರಕ್ಷ್​ಗೆ 10 ಲಕ್ಷ ರೂಪಾಯಿ ನೀಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us