AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊತ್ತಿದ್ದೂ ನಿಯಮ ಮುರಿದ ಭವ್ಯಾ, ಅನುಷಾ; ಇಡೀ ಮನೆಗೆ ಎರಡೆರಡು ಶಿಕ್ಷೆ, ಕೇಕೆ ಹಾಕಿದ ಜಗದೀಶ್

ಭವ್ಯಾ ಗೌಡ ಹಾಗೂ ಅನುಷಾ ರೈ ಜಿಮ್ ಏರಿಯಾದಲ್ಲಿ ಮೈಕ್ ಧರಿಸದೆ ವ್ಯಾಯಾಮ ಮಾಡುತ್ತಿದ್ದರು. ಇದು ಬಿಗ್ ಬಾಸ್ ಗಮನಕ್ಕೆ ಬಂದಿದೆ. ಈ ಕಾರಣಕ್ಕೆ ಬಿಗ್ ಬಾಸ್ ಶಿಕ್ಷೆ ವಿಧಿಸಿದ್ದಾರೆ. ಅದೂ ಒಂದಲ್ಲ, ಎರಡೆರಡು ಶಿಕ್ಷೆ. ಈ ಶಿಕ್ಷೆಯಿಂದ ಇಡೀ ಮನೆ ಪ್ರಮುಖ ಸವಲುತ್ತಗಳನ್ನೇ ಕಳೆದುಕೊಳ್ಳುವಂತಾಗಿದೆ.

ಗೊತ್ತಿದ್ದೂ ನಿಯಮ ಮುರಿದ ಭವ್ಯಾ, ಅನುಷಾ; ಇಡೀ ಮನೆಗೆ ಎರಡೆರಡು ಶಿಕ್ಷೆ, ಕೇಕೆ ಹಾಕಿದ ಜಗದೀಶ್
ಭವ್ಯಾ-ಅನುಷಾ
ರಾಜೇಶ್ ದುಗ್ಗುಮನೆ
|

Updated on: Oct 17, 2024 | 7:27 AM

Share

ಬಿಗ್ ಬಾಸ್ ಮನೆಯಲ್ಲಿ ಯಾರಾದರೂ ನಿಯಮ ಉಲ್ಲಂಘನೆ ಮಾಡಿದರೆ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲೂ ಹಾಗೆಯೇ ಆಗಿದೆ. ಭವ್ಯಾ ಗೌಡ ಹಾಗೂ ಅನುಷಾ ಬೇಕಂತಲೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಇದರಿಂದ ಇಡೀ ಮನೆ ಶಿಕ್ಷೆ ಅನುಭವಿಸಬೇಕಾಗಿದೆ. ಜಗದೀಶ್ ಅವರು ಈ ಘಟನೆಯಿಂದ ಕೇಕೆ ಹಾಕಿದ್ದಾರೆ. ಇದೇ ನಿಯಮವನ್ನು ಜಗದೀಶ್ ಬ್ರೇಕ್ ಮಾಡಿದ್ದರೆ ಮನೆಯವರು ಪ್ರತಿಕ್ರಿಯಿಸುವ ರೀತಿ ಬೇರೆ ಇರುತ್ತಿತ್ತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ.

ಭವ್ಯಾ ಗೌಡ ಹಾಗೂ ಅನುಷಾ ರೈ ಜಿಮ್ ಏರಿಯಾದಲ್ಲಿ ಮೈಕ್ ಧರಿಸದೆ ವ್ಯಾಯಾಮ ಮಾಡುತ್ತಿದ್ದರು. ಇದು ಬಿಗ್ ಬಾಸ್ ಗಮನಕ್ಕೆ ಬಂದಿದೆ. ಈ ಕಾರಣಕ್ಕೆ ಬಿಗ್ ಬಾಸ್ ಶಿಕ್ಷೆ ವಿಧಿಸಿದ್ದಾರೆ. ಅದೂ ಒಂದಲ್ಲ, ಎರಡೆರಡು ಶಿಕ್ಷೆ. ಈ ಶಿಕ್ಷೆಯಿಂದ ಇಡೀ ಮನೆ ಪ್ರಮುಖ ಸವಲುತ್ತಗಳನ್ನೇ ಕಳೆದುಕೊಳ್ಳುವಂತಾಗಿದೆ.

ಭವ್ಯಾ ಹಾಗೂ ಅನುಷಾ ಮೈಕ್ ಧರಿಸಿರಲಿಲ್ಲ. ಈ ವೇಳೆ ಅವರಿಗೆ ಮೈಕ್ ಧರಿಸುವಂತೆ ಸೂಚನೆ ನೀಡಿದರು ಕ್ಯಾಪ್ಟನ್ ಶಿಶಿರ್. ವಾಶ್​ರೂಂಗೆ ಹೋಗಿ ಬಂದು ಮೈಕ್ ಧರಿಸೋದಾಗಿ ಭವ್ಯಾ ಹೇಳಿದರು. ಆ ಬಳಿಕ ವಾಶ್​ರೂಂನಿಂದ ಬಂದ ಭವ್ಯಾ ಅವರು ಶವಾಸನ ಮಾಡಿದರು. ಆಗಲೂ ಮೈಕ್ ಹಾಕಿರಲಿಲ್ಲ. ಈ ವೇಳೆ ಭವ್ಯಾ ಹಾಗೂ ಅನುಷಾ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿಕೊಂಡಿದ್ದಾರೆ. ಇದರಿಂದ ಎರಡು ಶಿಕ್ಷೆಯನ್ನು ಬಿಗ್ ಬಾಸ್ ನೀಡಿದ್ದಾರೆ.

ಮೊದಲನೆಯದು, ಜಿಮ್ ವಸ್ತುಗಳನ್ನು ಬಳಕೆ ಮಾಡುವಂತಿಲ್ಲ. ಜಿಮ್ ವಸ್ತುಗಳನ್ನು ಬಳಸದೆಯೂ ಎಲ್ಲರೂ ಹಾಯಾಗಿ ಇರಬಹುದು. ಅದು ಅತೀ ಅಗತ್ಯ ಎಂಬುದೇನಲ್ಲ. ಆದರೆ, ಬಿಗ್ ಬಾಸ್ ನೀಡಿದ ಮತ್ತೊಂದು ಶಿಕ್ಷೆ ಕಠಿಣವಾಗಿದೆ. ಬಿಗ್ ಬಾಸ್​ನ ಮುಂದಿನ ಆದೇಶದವರೆಗೆ ಯಾರೂ ಬೆಡ್ ಬಳಸುವಂತಿಲ್ಲ ಎಂದಿದೆ. ಇದು ಇಡೀ ಮನೆಯನ್ನು ಕಂಗಾಲು ಮಾಡಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಕಾಲ್ ಮಾಡಿ ಭವ್ಯಾ ಗೌಡಗೆ ಐ ಲವ್​ ಯೂ ಹೇಳಿದ ತುಕಾಲಿ ಸಂತೋಷ್

ಕ್ಯಾಮೆರಾ ಎದುರು ಬಂದ ಭವ್ಯಾ ಹಾಗೂ ಅನುಷಾ, ‘ನಾವು ಮಾಡಿದ ತಪ್ಪಿಗೆ ಮನೆಗೆ ಕೊಡಬೇಡಿ. ನಮಗೆ ಶಿಕ್ಷೆ ಕೊಡಿ’ ಎಂದು ಕೇಳಿದರು. ಬಿಗ್ ಬಾಸ್ ಕೊಟ್ಟ ಶಿಕ್ಷೆಗೆ ಎಲ್ಲರೂ ಖುಷಿಪಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು