AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯಾನ ಉತ್ತಮ ಎದುರಾಳಿಯಾಗಿ ಮಾಡಿದ ನಾನು ಎಂಬರ್ಥದಲ್ಲಿ ಮಾತನಾಡಿದ ತ್ರಿವಿಕ್ರಂ

ಫಿನಾಲೆಗೆ ಮೂರು ವಾರ ಬಾಕಿ ಇರುವಾಗ, ತ್ರಿವಿಕ್ರಂ ತಮ್ಮ ಆಟದ ತಂತ್ರವನ್ನು ಬದಲಾಯಿಸಿದ್ದಾರೆ. ಫ್ಯಾಮಿಲಿ ವಾರದ ನಂತರ, ತಾಯಿಯ ಎಚ್ಚರಿಕೆಯಿಂದಾಗಿ ಭವ್ಯಾರಿಂದ ದೂರ ಸರಿಯಲು ಪ್ರಯತ್ನಿಸುತ್ತಿದ್ದಾರೆ. ಈ ಬದಲಾವಣೆ ಭವ್ಯಾ ಮೇಲೆ ಪರಿಣಾಮ ಬೀರಿದೆ. ತ್ರಿವಿಕ್ರಂ ಅವರೇ ಭವ್ಯಾನ ಉತ್ತಮ ಎದುರಾಳಿಯನ್ನಾಗಿ ಮಾಡಿದರೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಭವ್ಯಾನ ಉತ್ತಮ ಎದುರಾಳಿಯಾಗಿ ಮಾಡಿದ ನಾನು ಎಂಬರ್ಥದಲ್ಲಿ ಮಾತನಾಡಿದ ತ್ರಿವಿಕ್ರಂ
ಭವ್ಯಾ-ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Jan 07, 2025 | 6:58 AM

Share

ಫಿನಾಲೆಗೆ ಮೂರು ವಾರ ಇರುವಾಗ ತ್ರಿವಿಕ್ರಂ ಅವರಿಗೆ ಜ್ಞಾನೋದಯ ಆಗಿದೆ. ನಾನು ಒಂಟಿಯಾಗಿ ಆಟ ಆಡಿ ಕಪ್ ಗೆಲ್ಲಬೇಕು ಎಂಬ ಹಠಕ್ಕೆ ಅವರು ಬಂದಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು ಫ್ಯಾಮಿಲಿ ವಾರ. ತ್ರಿವಿಕ್ರಂ ತಾಯಿ ಆಗಮಿಸಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಭವ್ಯಾ ಅವರು ಸ್ವಾರ್ಥ ತೋರಿಸುತ್ತಿದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ತ್ರಿವಿಕ್ರಂ ಅವರು ಭವ್ಯಾನಿಂದ ದೂರ ಆಗುವ ಪ್ರಯತ್ನದಲ್ಲಿ ಇದ್ದಾರೆ. ಈ ಮಧ್ಯೆ ಅವರು ಆಡಿದ ಮಾತೊಂದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಒಟ್ಟಾಗಿ ಸಮಯ ಕಳೆಯುತ್ತಿದ್ದರು. ಒಬ್ಬರ ನೆರಳು ಒಬ್ಬರ ಮೇಲೆ ಇತ್ತು. ಇತ್ತೀಚೆಗೆ ಕುಟುಂಬದವರು ಬಂದಾಗ ತ್ರಿವಿಕ್ರಂನ ತಿದ್ದುವ ಕೆಲಸ ಆಗಿತ್ತು. ಅಲ್ಲದೆ, ಸುದೀಪ್ ಕಡೆಯಿಂದಲೂ ಈ ವಿಚಾರವಾಗಿ ಸಾಕಷ್ಟು ಸಲಹೆಗಳು ಸಿಕ್ಕಿದ್ದವು. ಈಗ ತ್ರಿವಿಕ್ರಂ ಅವರು ಇದನ್ನು ಅಳವಡಿಸಿಕೊಂಡಿದ್ದಾರೆ.

ಭವ್ಯಾ ಬಳಿ ಆದಷ್ಟು ಕಟುವಾಗಿ ನಡೆದುಕೊಳ್ಳುವ ಪ್ರಯತ್ನದಲ್ಲಿ ತ್ರಿವಿಕ್ರಂ ಇದ್ದಾರೆ. ಇದನ್ನು ಅವರು ನೇರವಾಗಿ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಇದು ಭವ್ಯಾಗೆ ಬೇಸರ ಮೂಡಿಸಿದೆ. ಆದರೆ, ಕಲ್ಲು ಹೃದಯ ಮಾಡಿಕೊಂಡು ತ್ರಿವಿಕ್ರಂ ನಿರ್ಧಾರದಿಂದ ಹಿಂದೆ ಸರಿಯುತ್ತಿಲ್ಲ. ಹಾಗಾದರೆ ಭವ್ಯಾ ಇಲ್ಲಿಯವರೆಗೆ ಬರೋಕೆ ತ್ರಿವಿಕ್ರಂ ಅವರು ಕಾರಣವಾ? ಹೀಗೊಂದು ಪ್ರಶ್ನೆ ಹುಟ್ಟುಹಾಕುವಂಥ ಮಾತು ಅವರ ಕಡೆಯಿಂದ ಬಂದಿದೆ.

ತ್ರಿವಿಕ್ರಂ ಹಾಗೂ ರಜತ್ ಅವರು ಕುಳಿತು ಮಾತನಾಡುತ್ತಿದ್ದರು. ‘ಮನೆಗೆ ಬಂದು ಕಾಂಪಿಟೇಟರ್​ನ ರೆಡಿ ಮಾಡಿ ಅಪೋಸಿಟ್ ಬಿಟ್ಟುಕೊಂಡಂತೆ ಆಯಿತು’ ಎಂದರು ತ್ರಿವಿಕ್ರಂ. ಅಂದರೆ, ಭವ್ಯಾನ ಒಳ್ಳೆಯ ಎದುರಾಳಿಯನ್ನಾಗಿ ಮಾಡಿ ಈಗ ಅವರ ಎದುರೇ ನಿಲ್ಲುವಂತೆ ಮಾಡಿದ್ದು ಎಂಬುದು ಇದರ ಅರ್ಥ ಎಂದು ಅನೇಕರು ಹೇಳಿದ್ದಾರೆ. ‘ನನ್ನ ಜೊತೆ ಇರುವುದಕ್ಕೆ ಭವ್ಯಾ ಇಲ್ಲಿಯವರೆಗೆ ಬಂದಿದ್ದಾರೆ ಎಂಬುದು ತ್ರಿವಿಕ್ರಂ ಯೋಚನೆ’ ಎಂಬ ಅರ್ಥವನ್ನೂ ಕೆಲವರು ಹುಡುಕಿದ್ದಾರೆ.

ಇದನ್ನೂ ಓದಿ: ‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

ಬಿಗ್ ಬಾಸ್​ನಲ್ಲಿ ಸದ್ಯ 9 ಸ್ಪರ್ಧಿಗಳು ಇದ್ದಾರೆ. ಐ ಪೈಕಿ ಫಿನಾಲೆ ತಲುಪೋದು ಐವರು ಮಾತ್ರ. ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಸದ್ಯ ಫಿನಾಲೆ ಟಿಕೆಟ್ ಟಾಸ್ಕ್​ ಕೂಡ ನಡೆಯುತ್ತಿದ್ದು, ಒಬ್ಬರಿಗೆ ಟಿಕೆಟ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ