AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯಾನ ಉತ್ತಮ ಎದುರಾಳಿಯಾಗಿ ಮಾಡಿದ ನಾನು ಎಂಬರ್ಥದಲ್ಲಿ ಮಾತನಾಡಿದ ತ್ರಿವಿಕ್ರಂ

ಫಿನಾಲೆಗೆ ಮೂರು ವಾರ ಬಾಕಿ ಇರುವಾಗ, ತ್ರಿವಿಕ್ರಂ ತಮ್ಮ ಆಟದ ತಂತ್ರವನ್ನು ಬದಲಾಯಿಸಿದ್ದಾರೆ. ಫ್ಯಾಮಿಲಿ ವಾರದ ನಂತರ, ತಾಯಿಯ ಎಚ್ಚರಿಕೆಯಿಂದಾಗಿ ಭವ್ಯಾರಿಂದ ದೂರ ಸರಿಯಲು ಪ್ರಯತ್ನಿಸುತ್ತಿದ್ದಾರೆ. ಈ ಬದಲಾವಣೆ ಭವ್ಯಾ ಮೇಲೆ ಪರಿಣಾಮ ಬೀರಿದೆ. ತ್ರಿವಿಕ್ರಂ ಅವರೇ ಭವ್ಯಾನ ಉತ್ತಮ ಎದುರಾಳಿಯನ್ನಾಗಿ ಮಾಡಿದರೇ ಎಂಬ ಪ್ರಶ್ನೆ ಹುಟ್ಟುಹಾಕಿದೆ.

ಭವ್ಯಾನ ಉತ್ತಮ ಎದುರಾಳಿಯಾಗಿ ಮಾಡಿದ ನಾನು ಎಂಬರ್ಥದಲ್ಲಿ ಮಾತನಾಡಿದ ತ್ರಿವಿಕ್ರಂ
ಭವ್ಯಾ-ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Jan 07, 2025 | 6:58 AM

Share

ಫಿನಾಲೆಗೆ ಮೂರು ವಾರ ಇರುವಾಗ ತ್ರಿವಿಕ್ರಂ ಅವರಿಗೆ ಜ್ಞಾನೋದಯ ಆಗಿದೆ. ನಾನು ಒಂಟಿಯಾಗಿ ಆಟ ಆಡಿ ಕಪ್ ಗೆಲ್ಲಬೇಕು ಎಂಬ ಹಠಕ್ಕೆ ಅವರು ಬಂದಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು ಫ್ಯಾಮಿಲಿ ವಾರ. ತ್ರಿವಿಕ್ರಂ ತಾಯಿ ಆಗಮಿಸಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಭವ್ಯಾ ಅವರು ಸ್ವಾರ್ಥ ತೋರಿಸುತ್ತಿದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ತ್ರಿವಿಕ್ರಂ ಅವರು ಭವ್ಯಾನಿಂದ ದೂರ ಆಗುವ ಪ್ರಯತ್ನದಲ್ಲಿ ಇದ್ದಾರೆ. ಈ ಮಧ್ಯೆ ಅವರು ಆಡಿದ ಮಾತೊಂದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಒಟ್ಟಾಗಿ ಸಮಯ ಕಳೆಯುತ್ತಿದ್ದರು. ಒಬ್ಬರ ನೆರಳು ಒಬ್ಬರ ಮೇಲೆ ಇತ್ತು. ಇತ್ತೀಚೆಗೆ ಕುಟುಂಬದವರು ಬಂದಾಗ ತ್ರಿವಿಕ್ರಂನ ತಿದ್ದುವ ಕೆಲಸ ಆಗಿತ್ತು. ಅಲ್ಲದೆ, ಸುದೀಪ್ ಕಡೆಯಿಂದಲೂ ಈ ವಿಚಾರವಾಗಿ ಸಾಕಷ್ಟು ಸಲಹೆಗಳು ಸಿಕ್ಕಿದ್ದವು. ಈಗ ತ್ರಿವಿಕ್ರಂ ಅವರು ಇದನ್ನು ಅಳವಡಿಸಿಕೊಂಡಿದ್ದಾರೆ.

ಭವ್ಯಾ ಬಳಿ ಆದಷ್ಟು ಕಟುವಾಗಿ ನಡೆದುಕೊಳ್ಳುವ ಪ್ರಯತ್ನದಲ್ಲಿ ತ್ರಿವಿಕ್ರಂ ಇದ್ದಾರೆ. ಇದನ್ನು ಅವರು ನೇರವಾಗಿ ಹೇಳುವ ಕೆಲಸವನ್ನೂ ಮಾಡಿದ್ದಾರೆ. ಇದು ಭವ್ಯಾಗೆ ಬೇಸರ ಮೂಡಿಸಿದೆ. ಆದರೆ, ಕಲ್ಲು ಹೃದಯ ಮಾಡಿಕೊಂಡು ತ್ರಿವಿಕ್ರಂ ನಿರ್ಧಾರದಿಂದ ಹಿಂದೆ ಸರಿಯುತ್ತಿಲ್ಲ. ಹಾಗಾದರೆ ಭವ್ಯಾ ಇಲ್ಲಿಯವರೆಗೆ ಬರೋಕೆ ತ್ರಿವಿಕ್ರಂ ಅವರು ಕಾರಣವಾ? ಹೀಗೊಂದು ಪ್ರಶ್ನೆ ಹುಟ್ಟುಹಾಕುವಂಥ ಮಾತು ಅವರ ಕಡೆಯಿಂದ ಬಂದಿದೆ.

ತ್ರಿವಿಕ್ರಂ ಹಾಗೂ ರಜತ್ ಅವರು ಕುಳಿತು ಮಾತನಾಡುತ್ತಿದ್ದರು. ‘ಮನೆಗೆ ಬಂದು ಕಾಂಪಿಟೇಟರ್​ನ ರೆಡಿ ಮಾಡಿ ಅಪೋಸಿಟ್ ಬಿಟ್ಟುಕೊಂಡಂತೆ ಆಯಿತು’ ಎಂದರು ತ್ರಿವಿಕ್ರಂ. ಅಂದರೆ, ಭವ್ಯಾನ ಒಳ್ಳೆಯ ಎದುರಾಳಿಯನ್ನಾಗಿ ಮಾಡಿ ಈಗ ಅವರ ಎದುರೇ ನಿಲ್ಲುವಂತೆ ಮಾಡಿದ್ದು ಎಂಬುದು ಇದರ ಅರ್ಥ ಎಂದು ಅನೇಕರು ಹೇಳಿದ್ದಾರೆ. ‘ನನ್ನ ಜೊತೆ ಇರುವುದಕ್ಕೆ ಭವ್ಯಾ ಇಲ್ಲಿಯವರೆಗೆ ಬಂದಿದ್ದಾರೆ ಎಂಬುದು ತ್ರಿವಿಕ್ರಂ ಯೋಚನೆ’ ಎಂಬ ಅರ್ಥವನ್ನೂ ಕೆಲವರು ಹುಡುಕಿದ್ದಾರೆ.

ಇದನ್ನೂ ಓದಿ: ‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

ಬಿಗ್ ಬಾಸ್​ನಲ್ಲಿ ಸದ್ಯ 9 ಸ್ಪರ್ಧಿಗಳು ಇದ್ದಾರೆ. ಐ ಪೈಕಿ ಫಿನಾಲೆ ತಲುಪೋದು ಐವರು ಮಾತ್ರ. ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಸದ್ಯ ಫಿನಾಲೆ ಟಿಕೆಟ್ ಟಾಸ್ಕ್​ ಕೂಡ ನಡೆಯುತ್ತಿದ್ದು, ಒಬ್ಬರಿಗೆ ಟಿಕೆಟ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು