AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಾರ್ಮ್ಯಾಟ್ ಬಗ್ಗೆ ಭವ್ಯಾಗೆ ಅಸಮಾಧಾನ; ಕಿಚ್ಚನ ಕ್ಲಾಸ್ ಫಿಕ್ಸ್?

ಬಿಗ್ ಬಾಸ್ ಕನ್ನಡದಲ್ಲಿ ಭವ್ಯಾ ಗೌಡ ಅವರು ಆಟದ ಫಾರ್ಮ್ಯಾಟ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಟಾಸ್ಕ್‌ನಲ್ಲಿ ಅವರ ಅಂಕಗಳನ್ನು ಇನ್ನೊಬ್ಬ ಸ್ಪರ್ಧಿ ಕಸಿದುಕೊಂಡಿದ್ದರಿಂದ ಈ ಅಸಮಾಧಾನ ಉಂಟಾಗಿದೆ. ಧನರಾಜ್ ಗೆದ್ದ ಟಾಸ್ಕ್‌ನಲ್ಲಿ ಭವ್ಯಾ ಅವರ ಅಂಕಗಳನ್ನು ಕಡಿಮೆ ಮಾಡಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ. ಇದರಿಂದಾಗಿ ಅವರು ಬಿಗ್ ಬಾಸ್ ಫಾರ್ಮ್ಯಾಟ್ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಫಾರ್ಮ್ಯಾಟ್ ಬಗ್ಗೆ ಭವ್ಯಾಗೆ ಅಸಮಾಧಾನ; ಕಿಚ್ಚನ ಕ್ಲಾಸ್ ಫಿಕ್ಸ್?
ಭವ್ಯಾ
ರಾಜೇಶ್ ದುಗ್ಗುಮನೆ
|

Updated on: Jan 15, 2025 | 7:27 AM

Share

ಬಿಗ್ ಬಾಸ್ ಫಾರ್ಮ್ಯಾಟ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಆಟ ಯಾವಾಗ ಹೇಗೆ ಬೇಕಾದರೂ ತಿರುಗಬಹುದು. ಆಟ ಇದೇ ರೀತಿ ಇರುತ್ತದೆ ಎಂದು ಊಹೀಸೋದು ಕಷ್ಟ. ಇದು ಆಡುವ ಆಟಗಾರರಿಗೆ ಹಾಗೂ ವೀಕ್ಷಕರಿಗೆ ಗೊತ್ತಿರುತ್ತದೆ. ಆದಾಗ್ಯೂ ಕೆಲವು ಸಂದರ್ಭದಲ್ಲಿ ಸ್ಪರ್ಧಿಗಳು ಬಿಗ್ ಬಾಸ್ ಬಗ್ಗೆ ಅಸಮಾಧಾನ ಹೊರಹಾಕಿದ ಉದಾಹರಣೆ ಇದೆ. ಈಗ ಭವ್ಯಾ ಗೌಡ ಅವರು ಇದಕ್ಕೆ ಹೊಸ ಸೇರ್ಪಡೆ.

ಈ ಮೊದಲು ಬಿಗ್ ಬಾಸ್​ಗೆ ಬಂದ ಅನೇಕ ಸ್ಪರ್ಧಿಗಳು ಆಟದ ವಿರುದ್ಧ ಅಸಮಾಧಾನ ಹೊರಹಾಕಿದ್ದು ಇದೆ. ಆರ್ಯವರ್ಧನ್ ಗುರೂಜಿ, ಈ ಸೀಸನ್​ನ ಲಾಯರ್ ಜಗದೀಶ್ ಹೀಗೆ ಅನೇಕರು ಈ ಸಾಲಿನಲ್ಲಿ ಇದ್ದಾರೆ. ಆದರೆ, ಭವ್ಯಾ ಕೂಡ ಈ ಸಾಲಿಗೆ ಸೇರಿಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

‘ಬಿಗ್ ಬಾಸ್’ ಮಧ್ಯವಾರದ ಎಲಿಮಿನೇಷ್​ನಿಂದ ಬಚಾವ್ ಆಗಲು ಸ್ಪರ್ಧಿಗಳಿಗೆ ಬಿಗ್ ಬಾಸ್ ವಿವಿಧ ಟಾಸ್ಕ್ ನೀಡಿದ್ದರು. ಗೆದ್ದ ಸ್ಪರ್ಧಿಗೆ 100 ಅಂಕ, ಎರಡನೇ ಬಂದ ಸ್ಪರ್ಧಿಗೆ 50 ಹಾಗೂ ಮೂರನೇ ಬಂದ ಸ್ಪರ್ಧಿಗೆ 25 ಅಂಕ ಸಿಕ್ಕಿತ್ತು. ಕೊನೆಯ ಟಾಸ್ಕ್​ನಲ್ಲಿ ಬಿಗ್ ಬಾಸ್ ಒಂದು ಅವಕಾಶ ನೀಡಿದರು. ಯಾರು ಕೊನೆಯ ಟಾಸ್ಕ್​ ಗೆಲ್ಲುತ್ತಾರೋ ಅವರಿಗೆ 100 ಅಂಕಗಳ ಜೊತೆ ಯಾವುದಾದರೂ ಒಂದು ಸ್ಪರ್ಧಿಯ ಅಂಕದಿಂದ ಶೇ.50 ಪಾಯಿಂಟ್ಸ್​ ಕಸಿದುಕೊಳ್ಳುವ ಅವಕಾಶ ಇತ್ತು.

ಆ ಟಾಸ್ಕ್​ನ ಧನರಾಜ್ ಅವರು ಗೆದ್ದರು. ಜೊತೆಗೆ ಭವ್ಯಾ ಅವರಿಂದ ಶೇ.50 ಪಾಯಿಂಟ್ಸ್ ಕಸಿದುಕೊಂಡರು. ಇದು ಭವ್ಯಾ ಅಸಮಾಧಾನಕ್ಕೆ ಕಾರಣ ಆಯಿತು. ಅವರು ಈ ಫಾರ್ಮ್ಯಾಟ್ ಬಗ್ಗೆ ತ್ರಿವಿಕ್ರಂ ಬಳಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮತ್ತೆ ಒಂದಾದ ಮಂಜು, ಮೋಕ್ಷಿತಾ, ಗೌತಮಿ; ಇದೇನು ಹೊಸ ಡ್ರಾಮಾ? 

‘ಇವರ ಫಾರ್ಮ್ಯಾಟ್ ಇಷ್ಟ ಆಗಿಲ್ಲ. ಮೈ ಕೈ ಹರಿದುಕೊಂಡು ಆಡಿದ್ದು ನಾವು, ಇನ್ಯಾರಿಗೋ ಪಾಯಿಂಟ್ಸ್ ಹೋಯಿತು. ನನನಗೆ ಪೂರ್ತಿ ಪಾಯಿಂಟ್ಸ್ ಬೇಕು. ಕನ್​ಫ್ಯೂಸ್ ಮಾಡಿ ಬಿಡ್ತೀರಾ. ಆ ಮೇಲೆ ನೀವು ಕನ್​ಫ್ಯೂಸ್ ಆದ್ರಿ ಅಂತೀರಾ’ ಎಂದು ಭವ್ಯಾ ಬಿಗ್ ಬಾಸ್ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಈ ವಾರಾಂತ್ಯದಲ್ಲಿ ಸುದೀಪ್ ಈ ವಿಚಾರ ಮಾತನಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ